Get Updates
Get notified of breaking news, exclusive insights, and must-see stories!

ಸಿದ್ದರಾಮಯ್ಯ ಸರ್ಕಾರ ತೊಲಗಿಸಲು ಕೈ ಜೋಡಿಸಿ : ಬಿಎಸ್‌ವೈ ಕರೆ

ಗಳೂರು, ನವೆಂಬರ್ 02 : 'ಮುಂದಿನ ಚುನಾವಣೆಯಲ್ಲಿ 150 ಕ್ಷೇತ್ರದಲ್ಲಿ ಗೆಲವು ಸಾಧಿಸಿ, ಭ್ರಷ್ಟ ಸಿದ್ದರಾಮಯ್ಯ ಅವರ ಸರ್ಕಾರವನ್ನು ನಾವು ಕರ್ನಾಟಕದಿಂದ ತೊಲಗಿಸೋಣ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು.

ಗುರುವಾರ 'ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ'ಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, '150 ಸ್ಥಾನ ಗೆಲ್ಲುವು ಮೂಲಕ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವಾಗಿಸುತ್ತೇವೆ ಎಂದು ಅಮಿತ್ ಶಾ ಅವರಿಗೆ ನಾವು ಭರವಸೆ ನೀಡುತ್ತೇವೆ' ಎಂದು ಘೋಷಣೆ ಮಾಡಿದರು.

BS Yeddyurappa address Nava Karnataka Nirmana Parivartan Yatra

ಯಡಿಯೂರಪ್ಪ ಭಾಷಣದ ಮುಖ್ಯಾಂಶಗಳು ಇಲ್ಲಿವೆ...

* ಕರ್ನಾಟಕ ಕಾಂಗ್ರೆಸ್ ಮುಕ್ತವಾಗಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಕನಸು. ಅಮಿತ್ ಶಾ ಅವರ ಸಮ್ಮುಖದಲ್ಲಿ ನಾವು ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವಾಗಿಸುವ ಸಂಕಲ್ಪ ಮಾಡೋಣ.

* ಇಂದು ಅಮಿತ್ ಶಾ ಅವರ ಸಮ್ಮುಖದಲ್ಲಿ ನವ ಕರ್ನಾಟಕ ನಿರ್ಮಾಣದ ಸಂಕಲ್ಪವನ್ನು ನಾವು ನಿವೆಲ್ಲರೂ ಮಾಡೋಣ. 150 ಕ್ಷೇತ್ರದಲ್ಲಿ ಗೆಲವು ಸಾಧಿಸಿ, ಭ್ರಷ್ಟ ಸಿದ್ದರಾಮಯ್ಯ ಅವರ ಸರ್ಕಾರವನ್ನು ನಾವು ಕರ್ನಾಟಕದಿಂದ ತೊಲಗಿಸೋಣ.

* ಯುದ್ಧ ಆರಂಭವಾಗಿದೆ. ರಾಜಕೀಯ ಪಕ್ಷಕ್ಕೆ ಯುದ್ಧ ಎಂದರೆ ಚುನಾವಣೆ. ಪ್ರತಿ ಬೂತ್‌ನಲ್ಲಿ 70ಕ್ಕೂ ಹೆಚ್ಚು ಮತಗಳನ್ನು ಪಡೆಯುತ್ತೇವೆ ಎಂಬ ಸಂಕಲ್ಪದ ಮೂಲಕ ಪ್ರಚಾರವನ್ನು ನಾವು ಆರಂಭಿಸೋಣ. ಬೂತ್ ಮಟ್ಟದ ಕಾರ್ಯಕರ್ತರು ಸೈನಿಕರಂತೆ. ಅವರು ಪಕ್ಷವನ್ನು ಗೆಲ್ಲಿಸುವ ಪಣ ತೊಟ್ಟರೆ ಬಿಜೆಪಿಗೆ ಗೆಲುವು ಸಿಕ್ಕಂತೆ.

* ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಬಂದು ಹೋದ ಮೇಲೆ ಸಿದ್ದರಾಮಯ್ಯ ಅವರಿಗೆ ಭಯ ಆರಂಭವಾಗಿದೆ. ಅದಕ್ಕೆ ಮನ ಬಂದಂತೆ ಮಾತನಾಡುತ್ತಿದ್ದಾರೆ. ಪ್ರಧಾನಿ ಅವರಿಗೆ ಸಿದ್ದರಾಮಯ್ಯ ಅವರನ್ನು ಕಂಡರೆ ಭಯ ಎಂಬುದು ಈ ವರ್ಷದ ದೊಡ್ಡ ಜೋಕ್

* 224 ಕ್ಷೇತ್ರಕ್ಕೆ ನಾನು ಬರುತ್ತೇನೆ. 15 ರಿಂದ 20 ಸಾವಿರ ಜನರು ಪ್ರತಿ ಕ್ಷೇತ್ರದಲ್ಲಿ ಸೇರುವ ಮೂಲಕ ಶಕ್ತಿ ಪ್ರದರ್ಶನ ಮಾಡೋಣ. 150 ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿರಲಿ. ದೈವ ಬಲ, ಜನಬಲ ನಮ್ಮ ಮೇಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+