ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತುರ್ತಾಗಿ ಶಾಸಕಾಂಗ ಪಕ್ಷದ ಸಭೆ ಕರೆದ ಯಡಿಯೂರಪ್ಪ!

|
Google Oneindia Kannada News

ಬೆಂಗಳೂರು, ಫೆಬ್ರವರಿ 04 : ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತುರ್ತಾಗಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಕೆಲವು ರಾಷ್ಟ್ರೀಯ ನಾಯಕರು ಸಹ ರಾಜ್ಯಕ್ಕೆ ಆಗಮಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಮಂಗಳವಾರ ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಎಲ್ಲಾ ಶಾಸಕರು ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಸಭೆ ಬಳಿಕ ಕೋರ್ ಕಮಿಟಿ ಸಭೆ ನಡೆಯಲಿದೆ.

ಲೋಕಸಭಾ ಚುನಾವಣೆ : ಬಿಜೆಪಿಯ ಉಸ್ತುವಾರಿ, ಸಂಚಾಲಕರ ಬದಲಾವಣೆಲೋಕಸಭಾ ಚುನಾವಣೆ : ಬಿಜೆಪಿಯ ಉಸ್ತುವಾರಿ, ಸಂಚಾಲಕರ ಬದಲಾವಣೆ

ಫೆ.6ರಿಂದ ಬಜೆಟ್ ಅಧಿವೇಶನ ಆರಂಭವಾಗುವ ಹಿನ್ನಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್‌ ಲಾಲ್ ಆವರು ಸಹ ಬೆಂಗಳೂರಿಗೆ ಆಗಮಿಸಲಿದ್ದು, ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಯಡಿಯೂರಪ್ಪ ಒಂದು ತಿಂಗಳೊಳಗೆ ಸಿಎಂ ಆಗ್ತಾರೆ:ಸುಕುಮಾರ್ ಶೆಟ್ಟಿಯಡಿಯೂರಪ್ಪ ಒಂದು ತಿಂಗಳೊಳಗೆ ಸಿಎಂ ಆಗ್ತಾರೆ:ಸುಕುಮಾರ್ ಶೆಟ್ಟಿ

BS Yeddyurappa calls for CLP meet on February 5

ರಾಜ್ಯದಲ್ಲಿ ಆಪರೇಷನ್ ಕಮಲದ ಬೆಳವಣಿಗೆಗಳು ನಡೆಯುತ್ತಿವೆ ಎಂಬ ಸುದ್ದಿಯ ನಡುವೆಯೇ ಶಾಸಕಾಂಗ ಪಕ್ಷದ ಸಭೆ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಶಾಸಕರು ಪುನಃ ರೆಸಾರ್ಟ್‌ಗೆ ತೆರಳಿದ್ದಾರೆಯೇ? ಎಂಬುದು ಪ್ರಶ್ನೆಯಾಗಿದೆ.

ಸರ್ಕಾರವನ್ನು ಅಸ್ಥಿರಗೊಳಿಸೊಲ್ಲ: ಯಡಿಯೂರಪ್ಪ ಮಾತಿನ ಮರ್ಮವೇನು?ಸರ್ಕಾರವನ್ನು ಅಸ್ಥಿರಗೊಳಿಸೊಲ್ಲ: ಯಡಿಯೂರಪ್ಪ ಮಾತಿನ ಮರ್ಮವೇನು?

ಬಿ.ಎಸ್.ಯಡಿಯೂರಪ್ಪ ಅವರು ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳಲು ತೆರಳಬೇಕಿತ್ತು. ಆದರೆ, ಮೈಸೂರು ಪ್ರವಾಸವನ್ನು ರದ್ದುಗೊಳಿಸಿ ಬೆಂಗಳೂರಿನಲ್ಲಿಯೇ ಉಳಿದಿದ್ದಾರೆ.

ರಾಮ್‌ ಲಾಲ್ ಸಭೆ : ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆಪ್ತರಾಗಿರುವ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್‌ ಲಾಲ್ ಅವರು ಮಂಗಳವಾರ ಸಂಜೆ 6 ಗಂಟೆಗೆ ಪಕ್ಷದ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.

English summary
Karnataka BJP president B.S.Yeddyurappa has called Legislature Party (CLP) meeting on February 5, 2019. National General Secretary of the Bhartiya Janata Party will participate in meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X