ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಅಧಿಕಾರಕ್ಕೆ ಬಂದ ಕೂಡಲೇ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಮೇ 17: ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಬೀದರ್ನಲ್ಲಿ ಎಸ್ಪಿ ಆಗಿದ್ದ ದೇವರಾಜ್ ಅವರನ್ನು ಬೆಂಗಳೂರು ಸೆಂಟ್ರಲ್ ಡಿಸಿಪಿ ಆಗಿ ವರ್ಗಾವಣೆ ಮಾಡಿದ್ದಾರೆ. ಅಮರ್ ಕುಮಾರ್ ಪಾಂಡೆ ಅವರನ್ನು ಗುಪ್ತಚರ ಇಲಾಖೆಯ ಎಡಿಜಿಪಿ ಆಗಿ ಮತ್ತು ಸಂದೀಪ್ ಪಾಟೀಲ್ ಅವರನ್ನು ಗುಪ್ತಚರ ಇಲಾಖೆಯ ಡಿಐಜಿ ಆಗಿ ನೇಮಿಸಿಕೊಂಡಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕುಗಳ ಸಾಲಮನ್ನಾ: ಸಿಎಂ ಯಡಿಯೂರಪ್ಪ ಘೋಷಣೆ?
ಎಸ್.ಗಿರೀಶ್ ಅವರನ್ನು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಆಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಅಧಿಕಾರಕ್ಕೆ ಏರಿದ ಕೂಡಲೆ ಸಾಮ ಮನ್ನಾ ಘೋಷಣಾ ಪತ್ರಕ್ಕೆ ಸಹಿ ಹಾಕಿದ ನಂರತ ಯಡಿಯೂರಪ್ಪ ಅವರು ಮಾಡಿರುವ ಎರಡನೇ ಕಾರ್ಯವೇ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆಗಿದೆ. ಎಲ್ಲಾ ಸರ್ಕಾರಗಳೂ ತಮಗೆ ಅನುಕೂಲವಾಗಬಹುದಾದ ಅಧಿಕಾರಿಗಳನ್ನು ಹೀಗೆ ವರ್ಗಾವಣೆ ಮಾಡುವುದು ಸಾಮಾನ್ಯ ಸಂಗತಿಯಾಗಿಬಿಟ್ಟಿದೆ.
Comments
karnataka assembly elections 2018 ips transfer government yediyurappa ಕರ್ನಾಟಕ ವಿಧಾನಸಭೆ ಚುನಾವಣೆ 2018 ಐಪಿಎಸ್ ವರ್ಗಾವಣೆ ಸರ್ಕಾರ ಯಡಿಯೂರಪ್ಪ
English summary
BS Yeddyurappa government transferred 4 IPS officers within 4 hours of taking charge. Devraj, Sandeep Patil , S Girish, Amar Kumar trasferd IPS officers.
Story first published: Thursday, May 17, 2018, 16:27 [IST]