ಸುಮ್ಮನೆ ಕೂರುವವರಲ್ಲ ಬಿಎಸ್ವೈ, ಜೂನ್ 1ರಿಂದ ಮಾಡ್ತಾರೆ ರಾಜ್ಯ ಪ್ರವಾಸ
ಬೆಂಗಳೂರು, ಮೇ 21: ಮುಖ್ಯಮಂತ್ರಿಯಾಗಿ ಕೇವಲ 58 ಗಂಟೆ ಮಾತ್ರವೇ ಅಧಿಕಾರದಲ್ಲಿದ್ದ ಯಡಿಯೂರಪ್ಪ ಅವರು ಭಾವುಕ ಭಾಷಣ ಮಾಡಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಹೊರಬಡೆದರು. ನಿರಾಶರಾಗಿದ್ದ ಅವರ ಮುಂದಿನ ನಡೆ ಏನು ಎಂಬುದು ಕುತೂಹಲ ಹುಟ್ಟಿಸಿತ್ತು. ಆದರೆ ಈಗ ಅದು ಸ್ಪಷ್ಟವಾಗಿದೆ.
ಸರ್ಕಾರ ರಚಿಸಲಾಗದೆ ಆದ ಹಿನ್ನಡೆಯಿಂದ ಯಡಿಯೂರಪ್ಪ ಅವರು ಕುಗ್ಗಿಲ್ಲ ಅವರು ಇನ್ನಷ್ಟು ಬಲಗೊಂಡಿದ್ದಾರೆ. ಹಾಗಾಗಿ ಅದೇ ಉತ್ಸಾಹದಿಂದ ಯಡಿಯೂರಪ್ಪ ಅವರು ಜೂನ್ 1ರಿಂದ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ.
ಶನಿವಾರ ಅಧಿವೇಶನದಲ್ಲಿ ಮಾಡಿದ ಭಾಷಣದಲ್ಲಿ ಅವರೇ ಹೇಳಿದಂತೆ ಲೋಕಸಭೆಯಲ್ಲಿ 28 ಕ್ಷೇತ್ರವನ್ನೂ ಬಿಜೆಪಿಗೆ ಗೆದ್ದು ಕೊಡಬೇಕೆಂಬ ಛಲದಿಂದ ಈ ರಾಜ್ಯ ಪ್ರವಾಸ ಆರಂಭಿಸಿದ್ದು, ಯಡಿಯೂರಪ್ಪ ಅವರಿಗೆ ಶ್ರೀರಾಮುಲು ಜೊತೆ ನೀಡಲಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ರಾಜ್ಯಪ್ರವಾಸವನ್ನು ಯಡಿಯೂರಪ್ಪ ಅವರು ಕೈಗೊಂಡಿದ್ದು, ಆಯಾ ಕ್ಷೇತ್ರಗಳ ಸ್ಥಳೀಯ ನಾಯಕರುಗಳು ಪ್ರವಾಸಕ್ಕೆ ಸಾಥ್ ನೀಡಲಿದ್ದಾರೆ.
ಎರಡು ಆಯಾಮದಲ್ಲಿ ಈ ರಾಜ್ಯ ಪ್ರವಾಸ ನಡೆಯಲಿದ್ದು, ಶ್ರೀರಾಮುಲು ಒಂದು ಕಡೆ ಮತ್ತು ಯಡಿಯೂರಪ್ಪ ಅವರು ಒಂದು ಕಡೆ ಪ್ರವಾಸ ನಡೆಸಲಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications