ಯಡಿಯೂರಪ್ಪ : ಶಿಕಾರಿಪುರ ಜನಸಂಘದಿಂದ ಬಿಜೆಪಿ ಗದ್ದುಗೆ ತನಕ
ಬೆಂಗಳೂರು, ಏಪ್ರಿಲ್ 14: ರೈತ ಪರ ಹೋರಾಟದಿಂದ ರಾಜಕೀಯ ಜೀವನಕ್ಕೆ ಕಾಲಿರಿಸಿದ ಬೂಕನಕೆರೆಯ ಯಡಿಯೂರಪ್ಪ ಅವರ ರಾಜಕೀಯ ಜೀವನ ಹತ್ತು ಹಲವು ಹೋರಾಟ, ವಿವಾದಗಳನ್ನು ಕಂಡಿದೆ.
ಬೂಕನಕೆರೆ ಎಂಬ ಕುಗ್ರಾಮದ ಬಡ ರೈತ ಕುಟುಂಬದ ಯಡಿಯೂರಪ್ಪ ರಾತ್ರಿ ಕಳೆದು ಬೆಳಗಾಗುವುದರಲ್ಲಿ ನಾಯಕರಾದವರಲ್ಲ. ಯಾವುದೇ ಗಾಡ್ ಫಾದರ್ ಇಲ್ಲದೇ ಸ್ವಂತ ಪರಿಶ್ರಮ ಮೇಲೆ ಹಂತ ಹಂತವಾಗಿ ಬೆಳೆದವರು. ಹಳ್ಳಿಯಿಂದಲೇ ಹೋರಾಟ ಆರಂಭಿಸಿ ರಾಜಕೀಯ ನೆಲೆಗಟ್ಟನ್ನು ಕಂಡುಕೊಂಡವರು. [ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿಎಸ್ವೈ]
ಪಕ್ಷ ಸಂಘಟನೆಯಲ್ಲಿ ನಿಪುಣರಾದ ಯಡಿಯೂರಪ್ಪಅವರು ಭಾಷಣಕ್ಕೆ ನಿಂತರೆ ಗುಡುಗು ಸಿಡಿಲುಗಳ ಮೇಳೈಕೆ. ಇಂಥ ಯಡಿಯೂರಪ್ಪ ಧೃತಿಗೆಡದೆ 80ರ ದಶಕದಲ್ಲಿ ಎರಡು ಶಾಸಕರಿದ್ದ ಪಕ್ಷವನ್ನು ಹಂತಹಂತವಾಗಿ ಬೆಳೆಸುತ್ತಾ ಶಾಸಕರ ಸಂಖ್ಯೆಯನ್ನು ನೂರರ ಗಡಿ ದಾಟುವಂತೆ ಮಾಡಿದ್ದು ಕಡಿಮೆ ಸಾಧನೆ ಏನಲ್ಲ.['ಸಿಎಂ ಆಗುವುದಕ್ಕಿಂತ 150 ಸ್ಥಾನ ಗೆಲ್ಲುವುದು ನನ್ನ ಗುರಿ': ಬಿಎಸ್ವೈ]

ರೈತರ ಸಾಲ ಮನ್ನಾ, ಸಾರಾಯಿ ನಿಷೇಧ. ಲಾಟರಿ ನಿಷೇಧ, ರೈತರಿಗೆ ಶೇ.4 ಬಡ್ಡಿದರದಲ್ಲಿ ಸಾಲ, ಬಿಪಿಎಲ್ ಕುಟುಂಬಗಳ ಹೆಣ್ಣುಮಕ್ಕಳ ಸಬಲೀಕರಣಕ್ಕೆ ಭಾಗ್ಯಲಕ್ಷ್ಮಿ ಯೋಜನೆ, ಉಚಿತ ಬೈಸಿಕಲ್ ವಿತರಣೆ ಯೋಜನೆ, ನಿರುದ್ಯೋಗ ನಿವಾರಣೆಗೆ ಸುವರ್ಣ ಕಾಯಕ ಉದ್ಯೋಗ ತರಬೇತಿಯೋಜನೆ, ಹಿರಿಯ ನಾಗರಿಕರ ಸಾಮಾಜಿಕ ಭದ್ರೆತೆಗೆ ಸಂಧ್ಯಾ ಸುರಕ್ಷಾ ಯೋಜನೆ, ಮೊದಲಾದ ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಬಜೆಟ್ ನಲ್ಲಿ ಅಳವಡಿಸಿ ಅನುಷ್ಠಾನಗೊಳಿಸಿದ ಹೆಗ್ಗಳಿಕೆ.[ಯಡಿಯೂರಪ್ಪಗೆ ರಾಜ್ಯಾಧ್ಯಕ್ಷ ಪಟ್ಟ : ಯಾರು, ಏನು ಹೇಳಿದರು?]
1975 : ಶಿಕಾರಿಪುರ ಪುರಸಭೆ ಸದಸ್ಯರಾಗಿ ಆಯ್ಕೆ, 1977ರಲ್ಲಿ ಅಧ್ಯಕ್ಷ.
1980 : ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ.
1983 : ಮಾಜಿ ಸಚಿವ ವೆಂಕಟಪ್ಪ ಅವರನ್ನು ಸೋಲಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ
1985 : 88 ವರೆಗೆ ಬಿಜೆಪಿ ಜಿಲ್ಲಾಧ್ಯಕ್ಷ, 1988 ರಲ್ಲಿ ರಾಜ್ಯಾಧ್ಯಕ್ಷ,
1992 ರಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನ ನಿರ್ವಹಣೆ
1994 : ವಿಧಾನಸಭೆ ಪ್ರತಿಪಕ್ಷದ ನಾಯಕ.
1999 : ಮತ್ತೆ ರಾಜ್ಯಾಧ್ಯಕ್ಷ, 2000 ರಲ್ಲಿ ಮೇಲ್ಮನೆ ಸದಸ್ಯ [ಯಡಿಯೂರಪ್ಪ ಮುಂದಿರುವ 6 ಪ್ರಮುಖ ಸವಾಲುಗಳು]
2004 : ಐದನೇ ಬಾರಿಗೆ ವಿಧಾನಸಭೆ ಪ್ರವೇಶ, ಇನ್ನೊಮ್ಮೆ ಪ್ರತಿಪಕ್ಷದ ನಾಯಕ
2006 : ಸಮ್ಮಿಶ್ರ ಸರ್ಕಾರ ರಚನೆ, ಉಪಮುಖ್ಯಮಂತ್ರಿ, ಹಣಕಾಸು ಮತ್ತು ಅಬಕಾರಿ ಖಾತೆಗಳ ನಿರ್ವಹಣೆ.

2007 : ನವೆಂಬರ್ 12 ರಿಂದ 17ರ ವರೆಗೆ 7 ದಿನ ಮಾತ್ರ ಮುಖ್ಯಮಂತ್ರಿಯಾಗಿ ಪದವಿ ಅಲಂಕರಿಸಿದ್ದರು.
2008 : ಮೇ 30ರ ಶುಕ್ರವಾರ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ನಂತರ ಸದಾನಂದ ಗೌಡರಿಗೆ ಸಿಎಂ ಪಟ್ಟ ಒಲಿದಿದ್ದು, ಬಂಡಾಯವೆದ್ದು ಜಗದೀಶ್ ಶೆಟ್ಟರ್ ರನ್ನು ಕುರ್ಚಿಯಲ್ಲಿ ಕೂರಿಸಿದ್ದು ಸಾಧನೆಗಿಂತ ವೈಫಲ್ಯ ಎನ್ನಬಹುದು.
* ಬಿಜೆಪಿಯಿಂದ ಹೊರ ಬಿದ್ದ ಮೇಲೆ ಕರ್ನಾಟಕ ಜನತಾ ಪಕ್ಷ ಸ್ಥಾಪನೆ, ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದರು.
* ಕೆಜೆಪಿ ತಕ್ಕಮಟ್ಟಿನ ಸಾಧನೆ ಮಾಡಿದರೂ ಆಂತರಿಕ ಒತ್ತಡದಿಂದ ರಾಷ್ಟ್ರ ರಾಜಕೀಯದ ಕನಸಿನಿಂದ ತಾವೇ ಬೆಳೆಸಿದ ಪಕ್ಷವನ್ನು ತೊರೆದರು.
ಕರ್ನಾಟಕದ ಬಿಜೆಪಿ ಅಧ್ಯಕ್ಷರಾಗಿ ಬಿಎಸ್ ಯಡಿಯೂರಪ್ಪ
2014: ಜನವರಿಯಲ್ಲಿ ಬಿಜೆಪಿಗೆ ಮರು ಸೇರ್ಪಡೆ, ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಸ್ಪರ್ಧೆ, ಗೆಲುವು.
* ಆಗಸ್ಟ್ ತಿಂಗಳಿನಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆ.
2016: ಬಿಜೆಪಿ ಸಂಸದರಾಗಿದ್ದ ಯಡಿಯೂರಪ್ಪ ಅವರು ಏಪ್ರಿಲ್ 14, 2016ರಂದು ಬಿಜೆಪಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications