'ನಾಳೆಯಿಂದ ಸಿದ್ದರಾಮಯ್ಯ ಅವರೇ ಹೈಕಮಾಂಡ್'
ಚಿಕ್ಕಮಗಳೂರು, ಸೆಪ್ಟೆಂಬರ್, 11 : 'ನಾಳೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾಂಗ್ರೆಸ್ ಹೈಕಮಾಂಡ್. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಲೆಕ್ಕಕ್ಕಿಲ್ಲ. ಸರ್ಕಾರದ ಅವತಾರವನ್ನು ನಾಳೆಯಿಂದ ನೋಡಿ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ರೈತ ಚೈತನ್ಯ ಸಮಾವೇಶ ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, 'ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಪಡೆದಿದ್ದೇವೆ ಎಂಬ ಹುಮ್ಮಸ್ಸಿನಲ್ಲಿರುವ ರಾಜ್ಯ ಸರ್ಕಾರದ ಅವತಾರವನ್ನು ನಾಳೆಯಿಂದ ನೋಡಿ ಹೇಗಿರುತ್ತದೆ' ಎಂದು ವ್ಯಂಗ್ಯವಾಡಿದರು. [ಲೋಕಸಭೆಯಲ್ಲಿ ಯಡಿಯೂರಪ್ಪ ಮಾತು, ರಾಜ್ಯ ಸರ್ಕಾರದ ವಿರುದ್ಧ ಗರಂ]

'ಬಿಬಿಎಂಪಿಯಲ್ಲಿ ನಮಗೆ ಅಧಿಕಾರ ಸಿಕ್ಕಿದೆ, ನಮ್ಮನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ ಎಂಬ ಅಹಂ ಸಿದ್ದರಾಮಯ್ಯ ಅವರಿಗೆ ಬಂದಿದೆ. ಅವರೇ ಈಗ ಪಕ್ಷದ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇನ್ನು ಮುಂದೆ ಲೆಕ್ಕಕ್ಕಿಲ್ಲ. ಹಾಗಿರುತ್ತದೆ ಸಿದ್ದರಾಮಯ್ಯ ವರ್ತನೆ' ಎಂದು ಯಡಿಯೂರಪ್ಪ ಕುಟುಕಿದರು. [ನೂತನ ಮೇಯರ್ ಆಯ್ಕೆ : ಯಾರು, ಏನು ಹೇಳಿದ್ರು?]
ಕುಂಭಕರ್ಣ ನಿದ್ದೆ : 'ರಾಜ್ಯದಲ್ಲಿ ಭೀಕರ ಬರಗಾಲ ಬಂದು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ, ಮುಖ್ಯಮಂತ್ರಿ, ಕೃಷಿ ಸಚಿವರು ಮತ್ತು ಕಂದಾಯ ಸಚಿವರು ಕುಂಭಕರ್ಣ ನಿದ್ದೆಯಲ್ಲಿದ್ದಾರೆ. ರಾಜ್ಯದ ಜನರ ಜೊತೆ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ' ಎಂದು ಕಿಡಿಕಾರಿದರು.
ರಾಜ್ಯ ರಾಜಕೀಯಕ್ಕೆ ಬರ್ತಾರಾ? : ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಸೂಚನೆ ನೀಡಿದರು. 'ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಇನ್ನುಮುಂದೆ ನನ್ನ ಸಂಪೂರ್ಣ ಸಮಯವನ್ನು ರಾಜ್ಯದಲ್ಲಿ ಕಳೆಯುತ್ತೇನೆ' ಎಂದರು.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ












Click it and Unblock the Notifications