ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೂರು ಕ್ಷೇತ್ರಗಳಲ್ಲಿ ಯಡಿಯೂರಪ್ಪ ಎಲ್ಲಿಂದ ಸ್ಪರ್ಧಿಸಬಹುದು?

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 18 : ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕ್ಷೇತ್ರ ಬದಲಾವಣೆ ಮಾಡುವುದು ಖಚಿತವಾಗಿದೆ. 2018ರ ಚುನಾವಣೆಗೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಯಡಿಯೂರಪ್ಪ, ಉತ್ತರ ಕರ್ನಾಟಕದಿಂದ ಸ್ಪರ್ಧೆ ಮಾಡಲಿದ್ದಾರೆ.

ಬಿಜೆಪಿ ವಲಯದಲ್ಲಿನ ಮಾಹಿತಿ ಪ್ರಕಾರ ಮೂರು ಕ್ಷೇತ್ರಗಳನ್ನು ಯಡಿಯೂರಪ್ಪ ಅವರ ಸ್ಪರ್ಧೆಗೆ ಅಂತಿಮಗೊಳಿಸಲಾಗಿದೆ. ಇವುಗಳಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ? ಎಂಬುದು ಖಚಿತವಾಗಿಲ್ಲ. ಇವುಗಳಲ್ಲಿ ಎರಡು ಕ್ಷೇತ್ರಗಳು ಬಾಗಲಕೋಟೆ ಜಿಲ್ಲೆಯಲ್ಲಿದ್ದರೆ ಮತ್ತೊಂದು ಕ್ಷೇತ್ರ ಹಾವೇರಿ ಜಿಲ್ಲೆಗೆ ಸೇರಿದ್ದಾಗಿದೆ.

ಯಡಿಯೂರಪ್ಪ ಅಥವಾ ಮೋದಿ ಯಾರಾದರೂ ಸ್ಪರ್ಧಿಸಲಿ, ನಾವು ರೆಡಿಯಡಿಯೂರಪ್ಪ ಅಥವಾ ಮೋದಿ ಯಾರಾದರೂ ಸ್ಪರ್ಧಿಸಲಿ, ನಾವು ರೆಡಿ

BS Yeddyurappaa set to contest Karnataka polls from North Karnataka

ಪಕ್ಷದ ರೈತ ಮೋರ್ಚಾ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, 'ಉತ್ತರ ಕರ್ನಾಟಕದಿಂದ ಸ್ಪರ್ಧೆ ಮಾಡಿದರೆ ಪಕ್ಷಕ್ಕೆ ಹೆಚ್ಚಿನ ಬಲ ಬರಲಿದೆ' ಎಂಬುದು ನಾಯಕರ ಅಭಿಪ್ರಾಯವಾಗಿದೆ' ಎಂದರು.

ಶಿಕಾರಿಪುರ ಬಿಟ್ಟು ಬೇರೆ ಕ್ಷೇತ್ರದಿಂದ ಸ್ಪರ್ಧಿಸಿ, ಬಿಎಸ್ವೈಗೆ ಅಮಿತ್ ಶಾ ಸೂಚನೆಶಿಕಾರಿಪುರ ಬಿಟ್ಟು ಬೇರೆ ಕ್ಷೇತ್ರದಿಂದ ಸ್ಪರ್ಧಿಸಿ, ಬಿಎಸ್ವೈಗೆ ಅಮಿತ್ ಶಾ ಸೂಚನೆ

'ಪಕ್ಷದ ಕಾರ್ಯಕರ್ತರು ಬಳ್ಳಾರಿ, ವಿಜಯಪುರ ಅಥವ ಹಾವೇರಿಯಿಂದ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ನಾನು ಈ ಕುರಿತು ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. ಪಕ್ಷದ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ' ಎಂದು ಯಡಿಯೂರಪ್ಪ ಹೇಳಿದ್ದಾರೆ.

ಸದ್ಯ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗ ಕ್ಷೇತ್ರದ ಸಂಸದರು. 1983ರಿಂದ ಏಳು ಬಾರಿ ಅವರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಸದ್ಯ ಶಿಕಾರಿಪುರದ ಶಾಸಕರು.

ಮೌನವಾಗಿದ್ದು ಲಿಂಗಾಯತ ಸ್ವತಂತ್ರ ಧರ್ಮದ ಯುದ್ಧ ಗೆದ್ದರೆ ಬಿಎಸ್ ವೈ?ಮೌನವಾಗಿದ್ದು ಲಿಂಗಾಯತ ಸ್ವತಂತ್ರ ಧರ್ಮದ ಯುದ್ಧ ಗೆದ್ದರೆ ಬಿಎಸ್ ವೈ?

ಬಿಜೆಪಿ ಉತ್ತರ ಕರ್ನಾಟಕದಲ್ಲಿ ಹೆಚ್ಚು ಪ್ರಾಬಲ್ಯ ಹೊಂದಿದೆ. ಅಲ್ಲಿಂದಲೇ ಯಡಿಯೂರಪ್ಪ ಅವರು ಸ್ಪರ್ಧಿಸಿದರೆ ಪಕ್ಷಕ್ಕೆ ಹೆಚ್ಚಿನ ಸ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗುತ್ತದೆ. ಆದ್ದರಿಂದ, ಅಲ್ಲಿಂದ ಸ್ಪರ್ಧಿಸಲು ಯಡಿಯೂರಪ್ಪಗೆ ನಾಯಕರು ಸಲಹೆ ನೀಡಿದ್ದಾರೆ.

ಬಿಜೆಪಿ ವಲಯದಲ್ಲಿ ಕೇಳಿಬರುತ್ತಿರುವ ಸುದ್ದಿಯಂತೆ ಯಡಿಯೂರಪ್ಪ ಸ್ಪರ್ಧೆಗೆ ರಾಣೆಬೆನ್ನೂರು (ಹಾವೇರಿ ಜಿಲ್ಲೆ), ಬಾದಾಮಿ, ತೆರದಾಳ (ಬಾಗಲಕೋಟೆ) ಜಿಲ್ಲೆಯ ಕ್ಷೇತ್ರಗಳನ್ನು ಅಂತಿಮಗೊಳಿಸಲಾಗಿದೆ. ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರಿಗೆ ರಾಣೆಬೆನ್ನೂರು ಕ್ಷೇತ್ರದ ಉಸ್ತುವಾರಿ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ.

English summary
B S Yeddyurappa is all set for a change in constituency. He said that he is likely to contest the Karnataka assembly elections 2018 from a constituency in North Karnataka. It is speculated in the BJP circles that three constituencies of Ranebennur (Haveri district), Terdal and Badami (both Bagalkot district) have been shortlisted for Yeddyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X