Get Updates
Get notified of breaking news, exclusive insights, and must-see stories!

ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಬಿಎಸ್ವೈ ಆಪ್ತ ಎಂಪಿ ರೇಣುಕಾಚಾರ್ಯ ಸ್ಪರ್ಧೆ?

ದಾವಣಗೆರೆ, ಜನವರಿ 03: 2023 ರ ವಿಧಾನಸಭಾ ಚುಣಾವಣೆಯಲ್ಲಿ ಹೀನಾಯವಾಗಿ ಹೊನ್ನಾಳಿ ಕ್ಷೇತ್ರದಿಂದ ಸೋಲು ಕಂಡ ಬಿಜೆಪಿ ನಾಯಕ ಎಂ ಪಿ ರೇಣುಕಾಚಾರ್ಯ ಅವರು ಇದೀಗ ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿದ್ದಾರೆ.

ಹೌದು, ದಾವಣಗೆರೆಯಲ್ಲಿ ಇಷ್ಟು ದಿನ ಸಂಸದ ಜಿ.ಎಂ.ಸಿದ್ದೇಶ್ವರಿಗೆ ಮುಳುವಾಗಿದ್ದ ಶಾಮನೂರು ಕುಟುಂಬಕ್ಕೆ ಸ್ವಪಕ್ಷ ಬಿಜೆಪಿಯ ಎಂಪಿ ರೇಣುಕಾಚಾರ್ಯರೇ ಮಗ್ಗಲು ಮುಳುವಾಗಿದ್ದಾರೆ. ಈಗಾಗಲೇ ವಿಧಾನಸಭಾ ಚುನಾವಣೆಯ ಸೋಲಿನ ಬಳಿಕ ನಾನು ಸಹ ಲೋಕಸಭಾ ಚುನಾವಣೆಯ ಪ್ರಬಲ ಟಿಕೆಟ್‌ ಆಕಾಂಕ್ಷಿ ಎಂದು ಬಹಿರಂಗವಾಗಿ ಬೇಡಿಕೆ ಇಟ್ಟಿದ್ದ ಎಂ ಪಿ ರೇಣುಕಾಚಾರ್ಯ ಅವರು ಲೋಕಸಮರಕ್ಕೆ ಸಜ್ಜಾಗಿದ್ದಾರೆ.

BS Yeddyurappas Close Ally MP Renukacharya Likely to Contest from Davangere Lok Sabha Constituency

ಈಗಾಗಲೇ ಹಾಲಿ ಬಿಜೆಪಿ ಸಂಸದರಾಗಿರುವ ಜಿ ಎಂ ಸಿದ್ದೇಶ್ವರ್‌ ಹಾಗೂ ಎಂ ಪಿ ರೇಣುಕಾಚಾರ್ಯ ನಡುವೆ ಟಿಕೆಟ್‌ ಗಾಗಿ ಮುಸುಕಿನ ಗುದ್ದಾಟ ತಾರಕಕ್ಕೇರಿದ್ದು, ದಾವಣಗೆರೆಯಲ್ಲಿ ಸಂಸದರ ವಿರುದ್ಧ ಬಿಜೆಪಿಯ ಹಲವು ಮಂದಿ ತಂಡ ಕಟ್ಟಿಕೊಂಡಿದ್ದಾರೆ. ಅಲ್ಲದೇ ಮಾಜಿ ಶಾಸಕ ಎಸ್.ಆರ್.ರವೀಂದ್ರನಾಥ್, ಮಾಡಾಳ್ ವಿರೂಪಾಕ್ಷಪ್ಪ, ಮುಖ್ಯ ಸಚೇತಕ ಶಿವಯೋಗಿ ಸ್ವಾಮಿ ಪ್ರತ್ಯೇಕವಾಗಿದ್ದು, ಇಷ್ಟು ಜನರನ್ನು ಮಾಜಿ ಶಾಸಕ ರೇಣುಕಾಚಾರ್ಯ ಭೇಟಿಯಾಗಿ ಸಂಸದರ ವಿರೋಧಿ ಪಡೆ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇನ್ನೂ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾದ ಬಿ ಎಸ್‌ ಯಡಿಯೂರಪ್ಪ ಅವರ ಜೊತೆಗೆ ಉತ್ತಮ ಸಂಬಂಧ ಹೊಂದಿರುವ ಎಂ ಪಿ ರೇಣುಕಾಚಾರ್ಯ ಅವರು, ಪದೇ ಪದೇ ಬಿ ಎಸ್‌ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಅವರ ಪರ ಬ್ಯಾಟಿಂಗ್‌ ಬಿಸುತ್ತಿರುತ್ತಾರೆ.

BS Yeddyurappas Close Ally MP Renukacharya Likely to Contest from Davangere Lok Sabha Constituency

ಬಿಜೆಪಿ ಹೈಕಮಾಂಡ್ ಈಗಾಗಲೇ ಕರ್ನಾಟಕದಲ್ಲಿರುವ ತನ್ನ ಹಾಲಿ ಸಂಸದರಲ್ಲಿ ಕೆಲವರಿಗೆ ಟಿಕೆಟ್ ನೀಡದೇ ಹೊಸ ಮುಖಗಳಿಗೆ ಟಿಕೆಟ್‌ ನೀಡುವ ಲೆಕ್ಕಾಚಾರವನ್ನ ಹಾಕಿಕೊಂಡಿದೆ. ಈಗಾಗಲೇ ಈ ಮಾದರಿಯನ್ನ ವಿಧಾನಸಭಾ ಚುನಾವಣೆಯ ತಂದಿದ್ದಾರೆ. ಅದರಂತೆ ವಯೋಮಿತಿಯ ಆಧಾರದ ಮೇಲೆ ಹಾಗೂ ಮುಂದಿನ ತಲೆಮಾರಿನ ನಾಯಕರನ್ನು ಬೆಳೆಸುವ ಅನಿವಾರ್ಯತೆ ದೃಷ್ಟಿಯಿಂದ ಕೆಲವು ಹಾಲಿ ಸಂಸದರಿಗೆ ಟಿಕೆಟ್ ನೀಡಿರಲು ನಿರ್ಧರಿಸಿದೆ ಎಂದು ಹೇಳಲಾಗಿದ್ದು, ದಾವಣಗೆರೆಯ ಹಾಲಿ ಸಂಸದರಾದ ಜಿ ಎಂ ಸಿದ್ದೇಶ್ವರ್‌ ಅವರಿಗೆ ಟಿಕೆಟ್‌ ಸಿಗುವುದು ಡೌಟ್‌ ಎನ್ನಲಾಗಿದೆ.

ಇನ್ನೂ ಚುನಾವಣೆ ಸಮೀಪಿಸುತ್ತಿದ್ದಂತೆ ದಾವಣಗೆರೆಯಲ್ಲಿ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಂಸದ ಎಂಪಿ ಸಿದ್ದೇಶ್ ಜತೆ, ಮಾಜಿ ಶಾಸಕ ಗುರುಸಿದ್ದಗೌಡ ಮಗ ಆರೈಕೆ ಆಸ್ಪತ್ರೆ ಡಾ.ರವಿ, ಆರ್‌ಎಸ್‌ಎಸ್ ಹಿಂಬಾಲಕ ಕೊಟ್ರೇಶ್, ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕೂಡ ಆಕಾಂಕ್ಷಿಗಳಿದ್ದಾರೆ. ಇಷ್ಟು ಜನ ಆಕಾಂಕ್ಷಿಗಳ ಪೈಕಿ ಮಾಜಿ ಸಚಿವರಾದ ಎಂ ಪಿ ರೇಣುಕಾಚಾರ್ಯ ಅವರ ಹೆಸರು ಮುನ್ನೆಲೆಗೆ ಬಂದಿದ್ದು, ಟಿಕೆಟ್‌ ವಿಚಾರವಾಗಿ ಬಿ ಎಸ್ ಯಡಿಯೂರಪ್ಪ ಅವರ ಜೊತೆಗೆ ಎಂ ಪಿ ರೇಣುಕಾಚಾರ್ಯ ಅವರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.‌

ಇನ್ನೂ ಬಹಿರಂಗವಾಗಿ ಲೋಕಸಭಾ ಟಿಕೆಟ್‌ ಬೇಡಿಕೆ ಇಟ್ಟ ಎಂ ಪಿ ರೇಣುಕಾಚಾರ್ಯ ಅವರ ವಿರುದ್ಧ ದಾವಣಗೆರೆ ಹಾಲಿ ಸಂಸದ ಎಂ ಪಿ ರೇಣುಕಾಚಾರ್ಯ ಅವರು ಕಿಡಿಕಾರಿದ್ರು. ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಎಂಪಿ ಆಗಲಿ, ನಾನು ರಾಜ್ಯರಾಜಕಾರಣಕ್ಕೆ ಹೋಗುತ್ತೇನೆ. ಅಲ್ಲಿ ನಮ್ಮ ಸಮಾಜ ದೊಡ್ಡದಿದೆ ಎಂಬ ಮಾತಿನ ಮೂಲಕ ಎಂ ಪಿ ರೇಣುಕಾಚಾರ್ಯರನ್ನು ಕೆಣಕಿದರು.

ಒಟ್ನಾಲಿ ದಾವಣಗೆರೆ ಲೋಕಸಭಾ ಚುನಾವನೆಗಾಗಿ ಇಬ್ಬರು ನಾಯಕರ ನಡುವೆ ತೀವ್ರ ಪೈಪೋಟಿ ಸೃಷ್ಟಿಯಾಗಿದ್ದು, ಯಡಿಯೂರಪ್ಪ ಅವರ ಬಣದಲ್ಲಿ ಗುರುತಿಸಿಕೊಂಡಿರುವ ಎಂ ಪಿ ರೇಣುಕಾಚಾರ್ಯ ಅವರಿಗೆ ಟಿಕೆಟ್‌ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+