ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಬಿಎಸ್ವೈ ಆಪ್ತ ಎಂಪಿ ರೇಣುಕಾಚಾರ್ಯ ಸ್ಪರ್ಧೆ?
ದಾವಣಗೆರೆ, ಜನವರಿ 03: 2023 ರ ವಿಧಾನಸಭಾ ಚುಣಾವಣೆಯಲ್ಲಿ ಹೀನಾಯವಾಗಿ ಹೊನ್ನಾಳಿ ಕ್ಷೇತ್ರದಿಂದ ಸೋಲು ಕಂಡ ಬಿಜೆಪಿ ನಾಯಕ ಎಂ ಪಿ ರೇಣುಕಾಚಾರ್ಯ ಅವರು ಇದೀಗ ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿದ್ದಾರೆ.
ಹೌದು, ದಾವಣಗೆರೆಯಲ್ಲಿ ಇಷ್ಟು ದಿನ ಸಂಸದ ಜಿ.ಎಂ.ಸಿದ್ದೇಶ್ವರಿಗೆ ಮುಳುವಾಗಿದ್ದ ಶಾಮನೂರು ಕುಟುಂಬಕ್ಕೆ ಸ್ವಪಕ್ಷ ಬಿಜೆಪಿಯ ಎಂಪಿ ರೇಣುಕಾಚಾರ್ಯರೇ ಮಗ್ಗಲು ಮುಳುವಾಗಿದ್ದಾರೆ. ಈಗಾಗಲೇ ವಿಧಾನಸಭಾ ಚುನಾವಣೆಯ ಸೋಲಿನ ಬಳಿಕ ನಾನು ಸಹ ಲೋಕಸಭಾ ಚುನಾವಣೆಯ ಪ್ರಬಲ ಟಿಕೆಟ್ ಆಕಾಂಕ್ಷಿ ಎಂದು ಬಹಿರಂಗವಾಗಿ ಬೇಡಿಕೆ ಇಟ್ಟಿದ್ದ ಎಂ ಪಿ ರೇಣುಕಾಚಾರ್ಯ ಅವರು ಲೋಕಸಮರಕ್ಕೆ ಸಜ್ಜಾಗಿದ್ದಾರೆ.

ಈಗಾಗಲೇ ಹಾಲಿ ಬಿಜೆಪಿ ಸಂಸದರಾಗಿರುವ ಜಿ ಎಂ ಸಿದ್ದೇಶ್ವರ್ ಹಾಗೂ ಎಂ ಪಿ ರೇಣುಕಾಚಾರ್ಯ ನಡುವೆ ಟಿಕೆಟ್ ಗಾಗಿ ಮುಸುಕಿನ ಗುದ್ದಾಟ ತಾರಕಕ್ಕೇರಿದ್ದು, ದಾವಣಗೆರೆಯಲ್ಲಿ ಸಂಸದರ ವಿರುದ್ಧ ಬಿಜೆಪಿಯ ಹಲವು ಮಂದಿ ತಂಡ ಕಟ್ಟಿಕೊಂಡಿದ್ದಾರೆ. ಅಲ್ಲದೇ ಮಾಜಿ ಶಾಸಕ ಎಸ್.ಆರ್.ರವೀಂದ್ರನಾಥ್, ಮಾಡಾಳ್ ವಿರೂಪಾಕ್ಷಪ್ಪ, ಮುಖ್ಯ ಸಚೇತಕ ಶಿವಯೋಗಿ ಸ್ವಾಮಿ ಪ್ರತ್ಯೇಕವಾಗಿದ್ದು, ಇಷ್ಟು ಜನರನ್ನು ಮಾಜಿ ಶಾಸಕ ರೇಣುಕಾಚಾರ್ಯ ಭೇಟಿಯಾಗಿ ಸಂಸದರ ವಿರೋಧಿ ಪಡೆ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.
ಇನ್ನೂ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾದ ಬಿ ಎಸ್ ಯಡಿಯೂರಪ್ಪ ಅವರ ಜೊತೆಗೆ ಉತ್ತಮ ಸಂಬಂಧ ಹೊಂದಿರುವ ಎಂ ಪಿ ರೇಣುಕಾಚಾರ್ಯ ಅವರು, ಪದೇ ಪದೇ ಬಿ ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಅವರ ಪರ ಬ್ಯಾಟಿಂಗ್ ಬಿಸುತ್ತಿರುತ್ತಾರೆ.

ಬಿಜೆಪಿ ಹೈಕಮಾಂಡ್ ಈಗಾಗಲೇ ಕರ್ನಾಟಕದಲ್ಲಿರುವ ತನ್ನ ಹಾಲಿ ಸಂಸದರಲ್ಲಿ ಕೆಲವರಿಗೆ ಟಿಕೆಟ್ ನೀಡದೇ ಹೊಸ ಮುಖಗಳಿಗೆ ಟಿಕೆಟ್ ನೀಡುವ ಲೆಕ್ಕಾಚಾರವನ್ನ ಹಾಕಿಕೊಂಡಿದೆ. ಈಗಾಗಲೇ ಈ ಮಾದರಿಯನ್ನ ವಿಧಾನಸಭಾ ಚುನಾವಣೆಯ ತಂದಿದ್ದಾರೆ. ಅದರಂತೆ ವಯೋಮಿತಿಯ ಆಧಾರದ ಮೇಲೆ ಹಾಗೂ ಮುಂದಿನ ತಲೆಮಾರಿನ ನಾಯಕರನ್ನು ಬೆಳೆಸುವ ಅನಿವಾರ್ಯತೆ ದೃಷ್ಟಿಯಿಂದ ಕೆಲವು ಹಾಲಿ ಸಂಸದರಿಗೆ ಟಿಕೆಟ್ ನೀಡಿರಲು ನಿರ್ಧರಿಸಿದೆ ಎಂದು ಹೇಳಲಾಗಿದ್ದು, ದಾವಣಗೆರೆಯ ಹಾಲಿ ಸಂಸದರಾದ ಜಿ ಎಂ ಸಿದ್ದೇಶ್ವರ್ ಅವರಿಗೆ ಟಿಕೆಟ್ ಸಿಗುವುದು ಡೌಟ್ ಎನ್ನಲಾಗಿದೆ.
ಇನ್ನೂ ಚುನಾವಣೆ ಸಮೀಪಿಸುತ್ತಿದ್ದಂತೆ ದಾವಣಗೆರೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಂಸದ ಎಂಪಿ ಸಿದ್ದೇಶ್ ಜತೆ, ಮಾಜಿ ಶಾಸಕ ಗುರುಸಿದ್ದಗೌಡ ಮಗ ಆರೈಕೆ ಆಸ್ಪತ್ರೆ ಡಾ.ರವಿ, ಆರ್ಎಸ್ಎಸ್ ಹಿಂಬಾಲಕ ಕೊಟ್ರೇಶ್, ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕೂಡ ಆಕಾಂಕ್ಷಿಗಳಿದ್ದಾರೆ. ಇಷ್ಟು ಜನ ಆಕಾಂಕ್ಷಿಗಳ ಪೈಕಿ ಮಾಜಿ ಸಚಿವರಾದ ಎಂ ಪಿ ರೇಣುಕಾಚಾರ್ಯ ಅವರ ಹೆಸರು ಮುನ್ನೆಲೆಗೆ ಬಂದಿದ್ದು, ಟಿಕೆಟ್ ವಿಚಾರವಾಗಿ ಬಿ ಎಸ್ ಯಡಿಯೂರಪ್ಪ ಅವರ ಜೊತೆಗೆ ಎಂ ಪಿ ರೇಣುಕಾಚಾರ್ಯ ಅವರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನೂ ಬಹಿರಂಗವಾಗಿ ಲೋಕಸಭಾ ಟಿಕೆಟ್ ಬೇಡಿಕೆ ಇಟ್ಟ ಎಂ ಪಿ ರೇಣುಕಾಚಾರ್ಯ ಅವರ ವಿರುದ್ಧ ದಾವಣಗೆರೆ ಹಾಲಿ ಸಂಸದ ಎಂ ಪಿ ರೇಣುಕಾಚಾರ್ಯ ಅವರು ಕಿಡಿಕಾರಿದ್ರು. ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಎಂಪಿ ಆಗಲಿ, ನಾನು ರಾಜ್ಯರಾಜಕಾರಣಕ್ಕೆ ಹೋಗುತ್ತೇನೆ. ಅಲ್ಲಿ ನಮ್ಮ ಸಮಾಜ ದೊಡ್ಡದಿದೆ ಎಂಬ ಮಾತಿನ ಮೂಲಕ ಎಂ ಪಿ ರೇಣುಕಾಚಾರ್ಯರನ್ನು ಕೆಣಕಿದರು.
ಒಟ್ನಾಲಿ ದಾವಣಗೆರೆ ಲೋಕಸಭಾ ಚುನಾವನೆಗಾಗಿ ಇಬ್ಬರು ನಾಯಕರ ನಡುವೆ ತೀವ್ರ ಪೈಪೋಟಿ ಸೃಷ್ಟಿಯಾಗಿದ್ದು, ಯಡಿಯೂರಪ್ಪ ಅವರ ಬಣದಲ್ಲಿ ಗುರುತಿಸಿಕೊಂಡಿರುವ ಎಂ ಪಿ ರೇಣುಕಾಚಾರ್ಯ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗಿದೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications