BS Yediyurappa Birthday Celebrations Live : ಯಡಿಯೂರಪ್ಪಗೆ ಶುಭಾಶಯ ಹೇಳಲು ಬಂದ ಸಿದ್ದರಾಮಯ್ಯ
ಬೆಂಗಳೂರು, ಫೆಬ್ರವರಿ 27 : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಫೆಬ್ರವರಿ 27ರ ಗುರುವಾರ 78ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದರು. ಹುಟ್ಟು ಹಬ್ಬದ ಅಂಗವಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಯಡಿಯೂರಪ್ಪಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮ ಆರಂಭವಾಗಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಅಭಿನಂದನಾ ಸಮಾರಂಭದಲ್ಲಿ 'ಧಣಿವರಿಯದ ಧೀಮಂತ' ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಗುತ್ತದೆ. ಕೇಂದ್ರ ಸಚಿವರ ರಾಜನಾಥ್ ಸಿಂಗ್ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಯಡಿಯೂರಪ್ಪ ಸಂಪುಟದ ವಿವಿಧ ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ.
78ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಯಡಿಯೂರಪ್ಪಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಹುಟ್ಟು ಹಬ್ಬದ ದಿನ ಯಡಿಯೂರಪ್ಪ 'ಧವಳಗಿರಿ'ಯಿಂದ 'ಕಾವೇರಿ' ನಿವಾಸಕ್ಕೆ ವಾಸ್ತವ್ಯ ಬದಲಿಸಿದರು.
Oneindia Kannada on Twitter
ಸಿಎಂ ಯಡಿಯೂರಪ್ಪ ಅಭಿನಂದನಾ ಸಮಾರಂಭಕ್ಕೆ ಆಗಮಿಸಿದ ವಿರೋಧಪಕ್ಷ ನಾಯಕ ಸಿದ್ದರಾಮಯ್ಯ @BSYBJP | @siddaramaiah https://t.co/aDYzABiml3













Click it and Unblock the Notifications