Karnataka Cabinet Expansion : ಯಡಿಯೂರಪ್ಪ ಸಂಪುಟ ಸೇರಿದ 17 ಶಾಸಕರು
Recommended Video
ಬೆಂಗಳೂರು, ಆಗಸ್ಟ್ 20 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆಯಾಗಿದೆ. 17 ಶಾಸಕರು ಸಂಪುಟ ದರ್ಜೆ ಸಚಿವರಾಗಿ ಮಂಗಳವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಮಂಗಳವಾರ ಬೆಳಗ್ಗೆ 10.30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಿತು. ಜುಲೈ 26ರಂದು ಯಡಿಯೂರಪ್ಪ ಅಧಿಕಾರ ವಹಿಸಿಕೊಂಡಿದ್ದರು. ಈಗ ಸಂಪುಟ ವಿಸ್ತರಣೆ ಮಾಡಿದ್ದಾರೆ.

ಯಡಿಯೂರಪ್ಪ ಸಂಪುಟ ಸೇರುವ ಶಾಸಕರ ಪಟ್ಟಿಯನ್ನು ಹೈಕಮಾಂಡ್ ಸೋಮವಾರ ತಡರಾತ್ರಿ ಅಂತಿಮಗೊಳಿಸಿದೆ. ಒಬ್ಬ ಮಹಿಳೆ, ಬಬ್ಬ ಪಕ್ಷೇತರ ಶಾಸಕ, ಒಬ್ಬರು ವಿಧಾನ ಪರಿಷತ್ ಸದಸ್ಯರು ಸೇರಿ 17 ಶಾಸಕರು ಸಚಿವರಾಗಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡರೂ ಸಹ ಲಕ್ಷ್ಮಣ ಸವದಿ ಸಚಿವರಾಗಿದ್ದಾರೆ.
ಯಡಿಯೂರಪ್ಪ ಆಂಡ್ ಟೀಂ: ಸಂಪುಟ ವಿಸ್ತರಣೆ ಸಂತಸದ ಚಿತ್ರಗಳು
ಎಂ. ಪಿ. ರೇಣುಕಾಚಾರ್ಯ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಬಾಲಚಂದ್ರ ಜಾರಕಿಹೊಳಿ, ಅರವಿಂದ ಲಿಂಬಾವಳಿ, ರಾಜುಗೌಡ ಸೇರಿದಂತೆ ಹಲವು ಹಿರಿಯ ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿದೆ. ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ.
ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಯಾರಿಗೆ ಯಾವ ಖಾತೆ
ಕೈತಪ್ಪಿದ ಸಚಿವ ಸ್ಥಾನ: ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ ಶಾಸಕರು
'ಮುಖ್ಯಮಂತ್ರಿ'ಯಾಗಿ ಪ್ರಮಾಣವಚನ: ಮಾಧುಸ್ವಾಮಿ ಯಡವಟ್ಟು
ಕೈ ತಪ್ಪಿದ ಸಚಿವ ಸ್ಥಾನ : ಯಾರು, ಏನು ಹೇಳಿದರು?
ಯಡಿಯೂರಪ್ಪ ಸಂಪುಟ: ಸಚಿವ ಸ್ಥಾನ ವಂಚಿತ ಶಾಸಕರ ಪಟ್ಟಿ
ಯಡಿಯೂರಪ್ಪ ಸಂಪುಟದಲ್ಲಿ ಯಾವ ಜಾತಿಯ ಶಾಸಕರಿಗೆ ಸ್ಥಾನ?

ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಯಾರು ಯಾರಿದ್ದಾರೆ? ಸಂಪೂರ್ಣ ಪಟ್ಟಿ




















Click it and Unblock the Notifications