Lingayat: ಯಡಿಯೂರಪ್ಪ ಲಿಂಗಾಯತರಲ್ಲ, ಆ ಸಮುದಾಯದವರು: ಯತ್ನಾಳ್ ಹೊಸ ಬಾಂಬ್
ಬಿಜೆಪಿಯಲ್ಲಿ ಬಣ ರಾಜಕೀಯ ಜೋರಾಗಿರುವ ನಡುವೆಯೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿವೈ ವಿಜಯೇಂದ್ರ ವಿರುದ್ಧ ತೊಡೆ ತಟ್ಟುತ್ತಿರುವ ಯತ್ನಾಳ್ ಅವರು ಇದೀಗ ಅವರ ಮೇಲೆ ಗಂಭೀರ ಆರೋಪವನ್ನು ಮಾಡಿದ್ದಾರೆ. ಯಡಿಯೂರಪ್ಪ ಅವರು ಲಿಂಗಾಯತ ಸಮುದಾಯ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಆದರೆ, ಯತ್ನಾಳ್ ಅವರು ಯಡಿಯೂರಪ್ಪ ಲಿಂಗಾಯತರೇ ಅಲ್ಲ ಎನ್ನುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.
ಬಿಎಸ್ ಯಡಿಯೂರಪ್ಪ ಅವರು ಲಿಂಗಾಯತ ಸಮುದಾಯದಿಂದಲೇ ರಾಜಕೀಯವಾಗಿ ಗುರುತಿಸಿಕೊಂಡವರು. ಇದೇ ಕಾರಣಕ್ಕೆ ಪುತ್ರ ಬಿವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಒಲಿದಿದೆ ಎನ್ನುವ ಮಾತಿದೆ. ಈಗ ನಡೆಯುತ್ತಿರುವ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರದಲ್ಲೂ ಲಿಂಗಾಯತ ನಾಯಕರ ಹೆಸರು ಮುನ್ನೆಲೆಯಲ್ಲಿವೆ. ಆದರೆ, ಯಡಿಯೂರಪ್ಪ ಅವರು ಲಿಂಗಾಯತರೇ ಅಲ್ಲ ಎನ್ನುವ ಮೂಲಕ ಯತ್ನಾಳ್ ಅವರು ಹೊಸ ಚರ್ಚೆಯನ್ನು ಮುಂದಿಟ್ಟಿದ್ದಾರೆ. ಈ ಬಗ್ಗೆ ಯತ್ನಾಳ್ ಹೇಳಿದ್ದೇನು ಗೊತ್ತಾ?

ಯಡಿಯೂರಪ್ಪ ಅವರು ಲಿಂಗಾಯತರೇ ಅಲ್ಲ, ಅವರು ಬಳೆಗಾರ ಶೆಟ್ಟರ ಸಮುದಾಯವರು ಎಂದು ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೇಕಾದರೆ ಯಡಿಯೂರಪ್ಪ ಅವರ ಹುಟ್ಟೂರು ಮಂಡ್ಯ ಜಿಲ್ಲೆಯ ಬೂಕನಕೆರೆಗೆ ಹೋಗಿ ಕೇಳಿದರೆ ನಿಜ ಏನು ಎನ್ನುವುದು ಗೊತ್ತಾಗುತ್ತೆ ಎಂದಿದ್ದಾರೆ. ಯಡಿಯೂರಪ್ಪ ಲಿಂಗಾಯತರ ಹೆಸರೇಳಿಕೊಂಡು ಬಿಜೆಪಿ ಪಕ್ಷವನ್ನ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಇದೇ ರೀತಿ ಕಾಂಗ್ರೆಸ್ನಲ್ಲಿ ಶಾಮನೂರು ಶಿವಶಂಕರಪ್ಪ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಹಲವು ವರ್ಷಗಳ ಹಿಂದೆ ವೀರೇಂದ್ರ ಪಾಟೀಲ್ ಹಾಗೂ ಜೆ.ಎಚ್.ಪಟೇಲ್ ಅವರ ನಂತರದಲ್ಲಿ ಈ ಸಮುದಾಯದಲ್ಲಿ ಬೇರೆ ಯಾವ ನಾಯಕರೂ ಇರಲಿಲ್ಲ. ಆಗ ಅನಿವಾರ್ಯವಾಗಿ ಯಡಿಯೂರಪ್ಪ ಅವರನ್ನ ಜನ ಒಪ್ಪಿಕೊಂಡರು. ಆದರೂ ಯಡಿಯೂರಪ್ಪ ಅವರು ವೀರಶೈವ ಹಾಗೂ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡದೆ ಮೋಸ ಮಾಡಿದ್ದಾರೆ ಎಂದೂ ದೂರಿದ್ದಾರೆ. ವೀರಶೈವ ಲಿಂಗಾಯತರಿಗೆ 2ಎ ಮೀಸಲಾತಿ ತಪ್ಪಿಸಿದ್ದೇ ಈ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿವೈ ವಿಜಯೇಂದ್ರ. ಹಾಗಾಗಿ ಅವರ ನಾಯಕತ್ವವನ್ನು ವೀರಶೈವ ಲಿಂಗಾಯತ ಸಮುದಾಯ ಎಂದಿಗೂ ಒಪ್ಪುವುದಿಲ್ಲ ಎಂದಿದ್ದಾರೆ.

ಅವರೆಲ್ಲ ರೆಡಿಮೇಡ್ ಸ್ವಾಮೀಜಿಗಳು!
ಇತ್ತೀಚೆಗೆ ಬಿಎಸ್ ಯಡಿಯೂರಪ್ಪ ಅವರು ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಅವರನ್ನು ಭೇಟಿದ್ದರು. ಈ ವಿಚಾರವಾಗಿಯೂ ವ್ಯಂಗ್ಯವಾಡಿರುವ ಯತ್ನಾಳ್, ರೇಣುಕಾಚಾರ್ಯ ಸಭೆಯಲ್ಲಿ ಇದ್ದವರೆಲ್ಲರೂ ದೊಡ್ಡ ನಾಯಕರಾ? ಆ ಸಭೆಗೆ ಬಂದಿದ್ದವರು ರೆಡಿಮೇಡ್ ಸ್ವಾಮೀಜಿಗಳು. ಅಲ್ಲಿ ಯಾರೂ ಪ್ರಮುಖ ಸ್ವಾಮೀಜಿ ಇರಲಿಲ್ಲ. ಆ ಸಭೆ ನಡೆದಿದ್ದು ವಿಜಯೇಂದ್ರನಿಗಾಗಿ ಎಂದು ಎಲ್ಲರಿಗೂ ಗೊತ್ತಿದೆ ಎಂದು ಯತ್ನಾಳ್ ಹೇಳಿದ್ದಾರೆ.
ಇನ್ನು ಯಡಿಯೂರಪ್ಪ ಶ್ಯಾಮನೂರು ಶಿವಶಂಕರಪ್ಪನವರ ಮನೆಗೆ ರಾತ್ರಿ ಯಾಕೆ ಹೋಗಿದ್ದರು. ಶ್ಯಾಮನೂರು ಅವರಿಂದ ವೀರಶೈವ ಮಹಸಭಾದ ಬೆಂಬಲ ಕೇಳಿದ್ದೀರಿ. ಹಾಗಾದ್ರೆ ಇಬ್ಬರೂ ಸೇರಿ ರಾಜ್ಯದಲ್ಲಿ ಎರಡೂ ಪಕ್ಷಗಳಿಗೆ ವೀರಶೈವ ಎಂಬ ಕಾರ್ಡ್ ಬಳಸುತ್ತಿದ್ದೀರಿ. ನಿಮ್ಮನ್ನ ವೀರಶೈವ ಸಮುದಾಯದವರು ಎಂದಿಗೂ ಮೆಚ್ಚುವುದಿಲ್ಲ. ವೀರಶೈವರಿಗೆ ಸಿಗುವಂತಹ ಮೀಸಲಾತಿ ತಪ್ಪಿಸಿದ್ದು ಯಡಿಯೂರಪ್ಪ ಹಾಗೂ ವಿಜಯೇಂದ್ರ ಮಾತ್ರ ಎಂದು ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications