ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಿಂದೂ ಅಲ್ಲ: ವೀರಶೈವ ಮಹಾಸಭಾ
ತುಮಕೂರು, ನವೆಂಬರ್ 11: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಿಂದೂ ಅಲ್ಲ, ಅವರು ವೀರಶೈವ ಲಿಂಗಾಯತರು ಎಂದು ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜ್ ಹೇಳಿಕೆ ನೀಡಿದ್ದಾರೆ.
ವೀರಶೈವ - ಲಿಂಗಾಯತ ಮಹಾಸಭಾ ಸಮಾವೇಶದ ಪೂರ್ವ ತಯಾರಿ ಕುರಿತು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಅವರು ವೀರಶೈವ ಲಿಂಗಾಯತರೇ ಆಗಿದ್ದರೆ, ಅವರು ಹಿಂದೂ ಆಗಲು ಸಾಧ್ಯವಿಲ್ಲ. ತಾವು ಹಿಂದೂ ಅಲ್ಲ ಎಂದು ಹೇಳಿಕೊಳ್ಳುವುದು, ಬಿಡುವುದು ಅವರ ವೈಯಕ್ತಿಕ ವಿಚಾರ ಎಂದು ಹೇಳಿದ್ದಾರೆ.
ವೀರಶೈವ ಲಿಂಗಾಯುತರು ನಾವು ಪ್ರತ್ಯೇಕ ಧರ್ಮ ಕೇಳುತ್ತಿದ್ದೇವೆ. ಜೈನರು ಹೇಗೆ ಹಿಂದೂ ಅಲ್ಲವೂ, ಬೌದ್ಧರು ಹೇಗೆ ಹಿಂದೂ ಅಲ್ಲವೋ, ಸಿಖ್ ಹೇಗೇ ಹಿಂದೂ ಅಲ್ಲವೋ ಹಾಗೆ ನಮ್ಮ ಧರ್ಮಕ್ಕೆ ನಾವು ಕೇಳುತ್ತಿದ್ದೇವೆ. ಹೋರಾಟ ಮಾಡುತ್ತಿದ್ದೇವೆ. ವೀರಶೈವರಲ್ಲಿ 105 ಉಪಪಂಗಡಗಳಿವೆ. ನಮ್ಮ ಬೈಲಾವನ್ನಲ್ಲಿ ಒಪ್ಪಿಕೊಂಡು ಬರುವವರಿಗೆ ಸ್ವಾಗತ. ಇದರಲ್ಲಿ ಜಾತಿ ಬೇಧ ಇಲ್ಲ. ಕಟ್ಟುಪಾಡುಗಳಿಲ್ಲ. ಇಂದಿನಿಂದ ಲಿಂಗ ಧರಿಸಿ ಬೈಲಾವನ್ನು ಒಪ್ಪಿಕೊಂಡು ಬರುವವರಿಗೆ ಸ್ವಾಗತ ಎಂದು ಹೇಳಿದ್ದಾರೆ.

ಇನ್ನು ವೀರಶೈವ ಲಿಂಗಾಯತ ಅನ್ನೋದು ಪ್ರತ್ಯೇಕ ಧರ್ಮ. ಹಿಂದೂ ಧರ್ಮಕ್ಕೂ, ನಮ್ಮ ಆಚರಣೆಗೂ ಕೆಲವು ವ್ಯತ್ಯಾಸಗಳಿವೆ. ನಮ್ಮದೇ ಪ್ರತ್ಯೇಕ ಧರ್ಮವಾಗಿದೆ. ಬೌದ್ಧ ಧರ್ಮ, ಸಿಖ್ ಧರ್ಮಗಳಂತೆ ಪ್ರತ್ಯೇಕ ಮಾಡಿದ್ದೀರೋ ಹಾಗೇ ನಮಗೂ ಪ್ರತ್ಯೇಕ ಧರ್ಮ ಕೊಡಬೇಕು ಎಂದು ಮೊದಲಿನಿಂದಲೂ ಕೇಳುತ್ತಿದ್ದೇವೆ. ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರ ಪ್ರತ್ಯೇಕ ಧರ್ಮ ಹೋರಾಟ ಸರಿಯಿದೆ. ಅದನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ವೀರಶೈವ ಲಿಂಗಾಯತರಾಗಿರುವ ನಮ್ಮಲ್ಲೂ ಆಚರಣೆಗಳು ವಿಭಿನ್ನವಾಗಿವೆ. ಕೆಲವರಿಗೆ ವಿಭೂತಿಧಾರಣೆ ಇಷ್ಟ ಇಲ್ಲದೇ ಇರಬಹುದು. ಇನ್ನೂ ಕೆಲವರಿಗೆ ರುದ್ರಾಕ್ಷಿ ಧಾರಣೆ ಇಷ್ಟ ಇಲ್ಲದಿರಬಹುದು. ಆದರೆ, ಈ ಎಲ್ಲರನ್ನೊಳಗೊಂಡು ವೀರಶೈವ ಲಿಂಗಾಯತ ಧರ್ಮವಿದೆ. ನಾವು ಸಹ ಹಿಂದೂ ಧರ್ಮದ ಎಲ್ಲ ಹಬ್ಬಗಳನ್ನು ಆಚರಿಸುತ್ತೇವೆ. ಆದರೆ ನಮ್ಮ ಆಚರಣೆ, ಶಾಸ್ತ್ರ, ಸಂಸ್ಕೃತಿ ಬೇರೆ ಎಂದರು.
ಇನ್ನು ನವೆಂಬರ್ 12 ಮತ್ತು 13 ರಂದು ಸಿದ್ದಗಂಗಾ ಮಠದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಸಮಾವೇಶದ ನಡೆಯಲಿದ್ದು, ಈ ಬಗ್ಗೆ ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜ್ ಮಾಹಿತಿ ನೀಡಿದ್ದಾರೆ.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು












Click it and Unblock the Notifications