Get Updates
Get notified of breaking news, exclusive insights, and must-see stories!

ಚಳಿಗಾಲದ ಅಧಿವೇಶನಕ್ಕೂ ಮುನ್ನ ವಿಪಕ್ಷ ನಾಯಕರನ್ನು ನೇಮಿಸುವಂತೆ ಬಿಎಸ್‌ವೈ ಒತ್ತಾಯ

ಬೆಂಗಳೂರು, ನವೆಂಬರ್‌ 4: ಹೊಸ ಸರ್ಕಾರ ರಚನೆಯಾಗಿ ಸುಮಾರು ಆರು ತಿಂಗಳು ಕಳೆದರೂ ಪ್ರತಿಪಕ್ಷ ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ನೇಮಿಸುವ ಯಾವುದೇ ಲಕ್ಷಣಗಳು ಕಂಡು ಬಾರದ ಹಿನ್ನೆಲೆಯಲ್ಲಿ ಹೈಕಮಾಂಡ್‌ ಮೇಲೆ ಬಿಎಸ್‌ ಯಡಿಯೂರಪ್ಪ ಒತ್ತಡ ಹಾಕಿದ್ದಾರೆ.

ಮುಂಬರುವ ಡಿಸೆಂಬರ್‌ನಲ್ಲಿ ನಡೆಯಲಿರುವ ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಪ್ರತಿಪಕ್ಷ ನಾಯಕರಿಲ್ಲದೆ ಕಾಂಗ್ರೆಸ್‌ನ್ನು ಎದುರಿಸಬೇಕಾಗುತ್ತದೆ ಎಂಬ ಭಯ ಎಲ್ಲರಿಗೂ ಇದೆ. ಇದರಿಂದ ಪಕ್ಷದ ಶಾಸಕರಿಗೆ ಇದು ಮುಜುಗರವನ್ನುಂಟು ಮಾಡಿದೆ. ಈ ನಿಟ್ಟಿನಲ್ಲಿ ಶೀಘ್ರವೇ ವಿಪಕ್ಷ ನಾಯಕರನ್ನು ನೇಮಕಾತಿ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಬೇಕು ಎಂದು ಬಿಜೆಪಿ ಶಾಸಕರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

BS Yediyurappa urges to appoint opposition leaders before winter session

ಬಿಜೆಪಿ ಶಾಸಕರ ಗುಂಪಿನ ಒತ್ತಾಯದ ಮೇರೆಗೆ ಯಡಿಯೂರಪ್ಪ ಅವರು ಪಕ್ಷದ ಕೆಲವು ಮುಖಂಡರೊಂದಿಗೆ ಸಭೆ ನಡೆಸಿ ಪಕ್ಷದ ವಿವಿಧ ಕಾರ್ಯತಂತ್ರಗಳನ್ನು ಪರಿಶೀಲಿಸಿದರು. ಬಳಿಕ ಮಾತನಾಡಿ, ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಸಭೆಯಲ್ಲಿ, ಬಿಜೆಪಿ ಶಾಸಕರು ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಎರಡನೇ ವಿಧಾನಸಭೆ ಅಧಿವೇಶನಕ್ಕೆ ಮುನ್ನ ವಿರೋಧ ಪಕ್ಷದ ನಾಯಕನನ್ನು ನೇಮಿಸುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರುವಂತೆ ಯಡಿಯೂರಪ್ಪ ಅವರನ್ನು ಕೋರಿದರು ಎನ್ನಲಾಗಿದೆ. ವರದಿಗಳ ಪ್ರಕಾರ, ಉಭಯ ಸದನಗಳಲ್ಲಿ ವಿರೋಧ ಪಕ್ಷದ ನಾಯಕರ ಹೆಸರನ್ನು ಹೇಳದೆ ಕಾಂಗ್ರೆಸ್ ನಾಯಕರ ವ್ಯಂಗ್ಯ ಮತ್ತು ಲೇವಡಿಗಳನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕರು ಯಡಿಯೂರಪ್ಪ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಜೊತೆ ಮಾತನಾಡುತ್ತೇನೆ ಎಂದು ಯಡಿಯೂರಪ್ಪ ಬಿಜೆಪಿ ಶಾಸಕರಿಗೆ ಹೇಳಿದ್ದಾರೆ ಎನ್ನಲಾಗಿದೆ. ಹೀನಾಯ ಸೋಲಿನಿಂದ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕತ್ವವನ್ನು ಬದಿಗೊತ್ತಿದೆ ಎನ್ನಲಾಗಿದೆ. ಜೆಡಿಎಸ್ ಜೊತೆಗಿನ ಮೈತ್ರಿ ಮಾತುಕತೆ ವೇಳೆಯೂ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರಿಗೆ ಟಾಸ್ಕ್ ನೀಡಲಾಗಿದ್ದು, ರಾಜ್ಯದ ಯಾವೊಬ್ಬ ನಾಯಕರೂ ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿರಲಿಲ್ಲ ಎಂಬುದು ಗಮನಿಸಬೇಕಾದುದು.

ವಿಪಕ್ಷ ನಾಯಕನ ರೇಸನಲ್ಲಿರುವ ಸಂಭವನೀಯ ಹೆಸರುಗಳು

ಹಿಂದೆ ಮುಖ್ಯಮಂತ್ರಿಯಾಗಿದ್ದವರು ಅವರ ಸರ್ಕಾರ ಅಧಿಕಾರ ಕಳೆದುಕೊಂಡ ಬಳಿಕ ವಿರೋಧ ಪಕ್ಷದ ನಾಯಕನಾಗುವುದು ವಾಡಿಕೆ. ಈಗ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ ಎಂದು ಹೇಳಲಾಗಿದ್ದು, ಆದರೆ ಅವರು ತಮ್ಮ ಮನೆಯಲ್ಲಿ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ.

ಜೆಡಿಎಸ್ ಜೊತೆಗಿನ ಮೈತ್ರಿ ನಂತರ ನಿರ್ಣಾಯಕ ಹುದ್ದೆಗಳ ನೇಮಕಾತಿಗೆ ಜಾತಿ ಲೆಕ್ಕಾಚಾರಗಳು ಬದಲಾಗಿದ್ದು, ಬಿಜೆಪಿ ಹೈಕಮಾಂಡ್ ಸಾಧ್ಯತೆಗಳನ್ನು ಮರುಕಳಿಸಬಹುದು. ವಿಪಕ್ಷ ನಾಯಕ ಹುದ್ದೆಗೆ ಸದ್ಯ ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್ ಅವರ ಹೆಸರು ಮುಂಚೂಣಿಯಲ್ಲಿದೆ ಎಂದು ಹೇಳಲಾಗುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+