ನೆರೆ ಪರಿಹಾರ ಪ್ಯಾಕೇಜ್ ಘೋಷಿಸಿ: ಪ್ರಧಾನಿ ಮೋದಿಗೆ ಯಡಿಯೂರಪ್ಪ ಪತ್ರ
ಬೆಂಗಳೂರು, ಅಕ್ಟೋಬರ್ 24: ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅನೇಕ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ನೆರೆ ಪರಿಹಾರಕ್ಕೆ 10 ಸಾವಿರ ಕೋಟಿ ರೂ ಮೊತ್ತದ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪತ್ರ ಬರೆದಿದ್ದಾರೆ.
ಪ್ರಧಾನಿಗೆ ಅವರು ಅಕ್ಟೋಬರ್ 17ರಂದು ಮೂರು ಪುಟಗಳ ಪತ್ರ ಬರೆದಿದ್ದು, ರಾಜ್ಯದಲ್ಲಿ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಸುರಿದ ಮಳೆಯಿಂದ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ರೈತರು ಹಾಗೂ ಜನಸಾಮಾನ್ಯರಿಗೆ ಪುನರ್ ವಸತಿ ಕಲ್ಪಿಸಲು ಆರ್ಥಿಕ ನೆರವಿನ ಅಗತ್ಯವಿದೆ ಎಂದು ಅವರು ವಿವರಿಸಿದ್ದಾರೆ ಎನ್ನಲಾಗಿದೆ.
ಕಳೆದ ಮೂರು ತಿಂಗಳ ಅವಧಿಯಲ್ಲಿ ಸುರಿದ ಭಾರಿ ಮಳೆಯಿಂದ ರಾಜ್ಯಕ್ಕೆ ಸುಮಾರು 21,609 ಕೋಟಿ ರೂ.ಗಳಿಗೂ ಅಧಿಕ ನಷ್ಟವಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜನರು ಮನೆ-ಮಠ ಕಳೆದುಕೊಂಡಿದ್ದಾರೆ. ಅಪಾರ ಬೆಳೆ ನಾಶವಾಗಿದೆ. ಇವರೆಲ್ಲರಿಗೂ ಕೂಡಲೇ ಪರಿಹಾರ ನೀಡಬೇಕಾಗ ಅಗತ್ಯವಿದೆ. ಹೀಗಾಗಿ ಸಹಾಯ ಹಸ್ತ ಚಾಚುವಂತೆ ಅವರು ಮನವಿ ಮಾಡಿದ್ದಾರೆ. ಮುಂದೆ ಓದಿ.

ಮೂರು ತಿಂಗಳಲ್ಲಿ ನಷ್ಟದ ವಿವರ
ಆಗಸ್ಟ್ನಿಂದ ಸೆಪ್ಟೆಂಬರ್ 15ರವರೆಗೆ ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಹಲವು ಕಡೆಗಳಲ್ಲಿ ಭಾರಿ ಮಳೆಯಿಂದ ಅಂದಾಜು 9,441 ಕೋಟಿ ರೂ ಹಾನಿಯಾಗಿದೆ. ಸೆಪ್ಟೆಂಬರ್ 15ರ ಬಳಿಕ ಉಂಟಾದ ಮಳೆ ಹಾಗೂ ಪ್ರವಾಹದಿಂದ ಸುಮಾರು 5,668 ಕೋಟಿ ರೂ ನಷ್ಟ ಸಂಭವಿಸಿದೆ. ಈಗ ಅಕ್ಟೋಬರ್ ಮೊದಲ ವಾರದಿಂದ ಸುರಿಯುತ್ತಿರುವ ಮಳೆಯಿಂದ ಇದುವರೆಗೂ 6,500 ಕೋಟಿ ರೂ ನಷ್ಟ ಉಂಟಾಗಿದೆ ಎಂದು ಹೇಳಿದ್ದಾರೆ.

30,000 ಮನೆಗಳಿಗೆ ಹಾನಿ
ಈ ಮೂರು ತಿಂಗಳಲ್ಲಿ ಉಂಟಾದ ಮಳೆ-ಪ್ರವಾಹದಿಂದ ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಆರು ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಬೆಳೆ ನಾಶವಾಗಿದೆ. ರಸ್ತೆ, ಸೇತುವೆಗಳು, ಶಾಲೆ ಮತ್ತು ಅಂಗನವಾಡಿ ಕಟ್ಟಡಗಳು ಹಾಗೂ ವಿದ್ಯುತ್ ವ್ಯವಸ್ಥೆಗೆ ತೀವ್ರ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.

ಜನರು ಅತಂಕದಲ್ಲಿದ್ದಾರೆ
ಸತತ ಎರಡು ವರ್ಷಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ತೀವ್ರವಾಗಿದೆ. ಪ್ರವಾಹ, ಭೂಕುಸಿತ ಮುಂತಾದ ಅವಘಡಗಳಿಂದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿ ವರ್ಷವೂ ಉಂಟಾಗುತ್ತಿರುವ ಪ್ರವಾಹದ ಹಾನಿಯಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದ್ದಾರೆ.
Recommended Video

ಪರಿಹಾರ ಕ್ರಮ ಕೈಗೊಳ್ಳಲಾಗಿದೆ
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈಗಾಗಲೇ ವೈಮಾನಿಕ ಸಮೀಕ್ಷೆ ನಡೆಸಿದ್ದೇನೆ. ತಕ್ಷಣದ ಪರಿಹಾರ ಕ್ರಮವಾಗಿ ತಲಾ 10 ಸಾವಿರ ರೂ ನೀಡಲಾಗುತ್ತಿದೆ. ಸಂಪೂರ್ಣ ಮತ್ತು ಭಾಗಶಃ ಮನೆ ಕಳೆದುಕೊಂಡವರಿಗೆ ಮನೆಗಳ ಪುನರ್ ನಿರ್ಮಾಣಕ್ಕೆ ತಲಾ 5 ಲಕ್ಷ ರೂ. ಹಾಗೂ ಮನೆಗಳ ಸಣ್ಣಪುಟ್ಟ ದುರಸ್ತಿಗೆ 50 ಸಾವಿರ ರೂ. ಪರಿಹಾರ ನೀಡಲಾಗುತ್ತಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications