ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಬಿಎಸ್ ಪಿ ಸ್ವತಂತ್ರ ಸ್ಪರ್ಧೆ
Recommended Video

ಬೆಂಗಳೂರು, ಅಕ್ಟೋಬರ್ 5: ಕರ್ನಾಟಕದ ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷವಾದ ಬಹುಜನ ಸಮಾಜವಾದಿ ಪಕ್ಷ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ವಾಗಿ ಸ್ಪರ್ಧಿಸಲಿದ್ದು, ಜೆಡಿಎಸ್ ಗೆ ಮುಜುಗರ ಉಂಟು ಮಾಡಿದೆ.
ಛತ್ತೀಸ್ ಗಢ, ಮಧ್ಯಪ್ರದೇಶ ಒಳಗೊಂಡಂತೆ ಪಂಚರಾಜ್ಯ ಗಳ ವಿಧಾನಸಭೆ ಚುನಾವಣೆ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ಬಿಎಸ್ ಪಿ ನಿರ್ಧರಿಸಿದೆ.
ಮುಖ್ಯಸ್ಥೆ ಮಾಯಾವತಿ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರದಲ್ಲೂ ಸ್ವತಂತ್ರ ಅಭ್ಯರ್ಥಿ ಸ್ಪರ್ಧೆಗೆ ಸಿದ್ಧತೆ ನಡೆದಿದೆ.ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲೂ ಸ್ಪರ್ಧೆಗೆ ಸಿದ್ಧತೆ ನಡೆಸಲಾಗಿದೆ. ಆದರೆ, ಈವರೆಗೆ ಮಾಯಾವತಿ ಅವರೊಂದಿಗೆ ಯಾವುದೇ ಚರ್ಚೆ ಮಾಡಿಲ್ಲ, ಮತ್ತು ಅವರಿಂದ ನಿರ್ದೇಶನ ಬಂದಿಲ್ಲ ಎಂದು ಸಚಿವ ಎನ್. ಮಹೇಶ್ ತಿಳಿಸಿದ್ದಾರೆ.
ಛತ್ತೀಗಢ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಕಡಿತ ಆಗಿರುವುದಕ್ಕೂ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಭಾಗವಾಗಿರುವುದಕ್ಕೂ ಯಾವುದೇ ಸಂಬಂಧವಿಲ್ಲ, ರಾಜ್ಯದಲ್ಲಿ ಜೆಡಿಎಸ್ ನೊಂದಿಗೆ ಚುನಾವಣಾಪೂರ್ವ ಮೈತ್ರಿ ಮಾಡಿಕೊಂಡಿದ್ದ ಕಾರಣಕ್ಕೆ ನಾನು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸಂಪುಟದಲ್ಲಿ ಸಚಿವನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಮೈತ್ರಿ ಕೂಟದಲ್ಲಿ ಒಡಕಿನ ನೋಟ, ಜೆಡಿಎಸ್ ಗೆ ಎದುರಾಯ್ತು ಹೊಸ ಕಾಟ
ಒಂದೆಡೆ ಆಪರೇಷನ್ ಕಮಲ ನಡೆಸಿ ಬಿಜೆಪಿ ಗೆದ್ದೆ ಎಂದು ಬೀಗುವುದರೊಳಗೆ ಏನೇನೋ ಸಾಹಸ ಮಾಡಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ತಮ್ಮ ಸಚಿವರು, ಶಾಸಕರನ್ನು ಉಳಿಸಿಕೊಳ್ಳಲು ಸಫಲವಾಯಿತು. ಆದರೆ ಇದೀಗ ಪಕ್ಷೇತರರು ತಮ್ಮ ನಡೆಯನ್ನು ಬದಲಿಸಿರುವುದು ಜೆಡಿಎಸ್ ಗೂ ಕಂಟಕವಾಗಿ ಪರಿಣಮಿಸಿದೆ.

ಅಲ್ಲಿ ಮಾಯಾವತಿ ಮುನಿಸು, ಎಲ್ಲಿ ಎನ್ ಮಹೇಶ್ ಸಿಡುಕು
ಮಾಯಾವತಿ ಕಾಂಗ್ರೆಸ್ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಲೋಕಸಭಾ ಚುನಾವಣೆಗೆ ಬಿಎಸ್ ಪಿಯನ್ನು ಏಕಾಂಗಿಯಾಗಿ ಕಣಕ್ಕಿಳಿಸುತ್ತೇನೆ ಎನ್ನುವ ಮಾತುಗಳು ಅವರಿಗೆ ಕಾಂಗ್ರೆಸ್ ಪಕ್ಷದ ವಿರುದ್ಧ ಇರುವ ಮುನಿಸು ಗೋಚರಿಸುತ್ತದೆ. ಇಲ್ಲಿ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿರುವ ಎನ್ ಮಹೇಶ್ ಗೆ ಹೊಂದಾಣಿಕೆಯಾಗುತ್ತಿಲ್ಲ, ಪಕ್ಷದಲ್ಲಿದ್ದುಕೊಂಡೇ ಜೆಡಿಎಸ್, ಕಾಂಗ್ರೆಸ್ ವಿರುದ್ಧವಾಗಿ ಮಾತನಾಡಲು ಆರಂಭಿಸಿದ್ದಾರೆ.

ಬಿಎಸ್ ಪಿಗೆ ಸಿಗುವುದು ಕಷ್ಟ ಅನ್ಯರ ಸಾಂಗತ್ಯ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ಮಹಾಮೈತ್ರಿ ಮೂಲಕ ಕಾದಾಡುವ ಮಹತ್ವಾಕಾಂಕ್ಷೆಗೆ ರಾಜ್ಯ ವೇದಿಕೆಯಾಗಿತ್ತು. ಕಳೆದ ಮೇ ತಿಂಗಳಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಪದಗ್ರಹಣ ಸಮಾರಂಭದಲ್ಲಿ ದೇಶದ ಬಿಜೆಪಿಯೇತರ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಒಗ್ಗಟ್ಟಿನ ಪ್ರದರ್ಶನ ಮಾಡಿದ್ದರು. ಆದರೆ ಮಹಾಮೈತ್ರಿ ಕನಸು ಆರಂಭದಲ್ಲೇ ಭಗ್ನಗೊಂಡಿದೆ. ವರ್ಷಾಂತ್ಯಕ್ಕೆ ನಡೆಯುವ ಪಂಚರಾಜ್ಯಗಳ ಚುನಾವಣೆಗೆ ಏಕಾಂಗಿ ಸ್ಪರ್ಧೆಯ ತೀರ್ಮಾನವನ್ನು ಬಿಎಸ್ ಪಿ ಯ ಮಾಯಾವತಿ ಪ್ರಕಟಿಸಿದ್ದಾರೆ.

ಬಿಎಸ್ ಪಿಗೆ ದಲಿತರ ಅಭಿವೃದ್ಧಿಯೇ ಹಿತ
ದೇಶದಲ್ಲಿ ಜಾತಿ ವ್ಯವಸ್ಥೆ ನಾಶ ಮಾಡಲು ಸಾಧ್ಯವಾಗಿಲ್ಲ ಎಂದು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನು ನಾನು ಉದ್ದೇಶಿಸಿ ಮಾತನಾಡಿದ್ದೇನೆಯೇ ಹೊರತು, ಜೆಡಿಎಸ್ ಬಗ್ಗೆ ಈ ಮಾತು ಹೇಳಿಲ್ಲ, ಜೆಡಿಎಸ್ ಒಂದು ಪ್ರಾದೇಶಿಕ ಪಕ್ಷ ನಾನು ಕಾಂಗ್ರೆಸ್ ಪಕ್ಷದ ಬಗ್ಗೆಯೂ ಲಘುವಾಗಿ ಮಾತನಾಡಿಲ್ಲ ಎಂದು ಸಚಿವ ಮಹೇಶ್ ಹೇಳಿದ್ದಾರೆ.

ಸಚಿವ ಎನ್ ಮಹೇಶ್ ಗೆ ಸಚಿವ ಸ್ಥಾನ ಕಳೆದುಕೊಳ್ಳುವ ಭಯ
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ವಿರುದ್ಧ ಟೀಕೆಗಳನ್ನು ಮಾಡುತ್ತಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಅವರು ಸಚಿವ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಂದೆಡೆ ಕರ್ನಾಟಕದಲ್ಲಿಯೂ ಸ್ವತಂತ್ರವಾಗಿ ಲೋಕಸಭಾ ಚುನಾವಣೆಗೆ ಕಣಕ್ಕಿಳಿಸುವ ಪ್ರಯತ್ನವನ್ನು ಬಿಎಸ್ ಪಿ ಮಾಡುತ್ತಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications