1 ಗ್ರಾಂ ಅಕ್ಕಿ ಕಡಿಮೆ ಕೊಟ್ಟರೂ ಜನ ಒಪ್ಪಲ್ಲ: ಸಿದ್ದರಾಮಯ್ಯ ಸರ್ಕಾರಕ್ಕೆ BSY ವಾರ್ನಿಂಗ್!
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ವಿಚಾರದಲ್ಲಿ ಬಿಜೆಪಿ & ಕಾಂಗ್ರೆಸ್ ವಾರ್ ಮುಂದುವರಿದಿದೆ. ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಕೂಡ ಅಖಾಡ ಪ್ರವೇಶ ಮಾಡಿದ್ದು ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ. ಈ ಮೂಲಕ ಕೇಂದ್ರ & ರಾಜ್ಯ ಸರ್ಕಾರದ ಅಕ್ಕಿ ಫೈಟ್ ಕೂಡ ಮತ್ತಷ್ಟು ಜೋರಾಗುವ ಸೂಚನೆ ಸಿಕ್ಕಂತಾಗಿದೆ.
ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಬಿಎಸ್ವೈ 'ಕೈ' ವಿರುದ್ಧ ವಾಗ್ದಾಳಿ ನಡೆಸಿದ್ರು. 'ರಾಜ್ಯದ ಜನರಿಗೆ 10 ಕೆ.ಜಿ. ಅಕ್ಕಿ ಕೊಡುವ ಗ್ಯಾರಂಟಿ ಅನುಷ್ಠಾನದ ವಿಚಾರದಲ್ಲಿ ಕೇಂದ್ರದ ವಿರುದ್ಧ ಆರೋಪ ಮಾಡುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಸುಮ್ಮನೆ ಗೊಂದಲ ಸೃಷ್ಟಿಸಿದೆ.' ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಮತ್ತೊಂದು ಗಂಭೀರ ಆರೋಪವನ್ನೂ ರಾಜ್ಯ ಸರ್ಕಾರದ ವಿರುದ್ಧ ಬಿಎಸ್ವೈ ಮಾಡಿದ್ದು, ಅದರ ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ.

ಕೇಂದ್ರದಿಂದ 5 ಕೆ.ಜಿ ಅಕ್ಕಿ ಉಚಿತ!
ಅಕ್ಕಿ ವಿಚಾರಕ್ಕೆ ಕಿರಿಕ್ ಜೋರಾಗುತ್ತಿದೆ, ಕಳೆದ ಕೆಲವು ದಿನಗಳಿಂದ ರಾಜ್ಯ ಕಾಂಗ್ರೆಸ್ ಪಡೆ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿತ್ತು. ಆದರೆ ಈಗ ಅದಕ್ಕೆ ಉತ್ತರ ನೀಡಿರುವ ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯದ ಜನರಿಗೆ ಪಡಿತರ ವ್ಯವಸ್ಥೆಯ ಮೂಲಕ ಈಗಾಗಲೇ ಪಿಎಂ ನರೇಂದ್ರ ಮೋದಿ ಸರ್ಕಾರ 5 ಕೆ.ಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ. ಕಾಂಗ್ರೆಸ್ ಸರ್ಕಾರ ಹೆಚ್ಚುವರಿ ಕೊಡುವುದಾಗಿ ಹೇಳಿದ್ದ 5 ಕೆ.ಜಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಒಪ್ಪಿರಲಿಲ್ಲ. ಆ ಅಕ್ಕಿ ಹೊಂದಿಸಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಹೀಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಬಾಕಿ ಅಕ್ಕಿಯನ್ನ ಎಲ್ಲಿಯಾದ್ರೂ ಖರೀದಿ ಮಾಡಿಕೊಡಲಿ ಎಂದು ಬಿಎಸ್ವೈ ಆಗ್ರಹ ಮಾಡಿದ್ದಾರೆ.
1 ಗ್ರಾಂ ಅಕ್ಕಿ ಕಡಿಮೆ ಕೊಟ್ಟರೂ..!
ಹಾಗೇ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಎಚ್ಚರಿಕೆ ನೀಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ. ಕಾಂಗ್ರೆಸ್ ನಾಯಕರು 10 ಕೆ.ಜಿ. ಅಕ್ಕಿಯನ್ನ ಕೊಡುತ್ತೇವೆ ಅಂತಾ ಚುನಾವಣೆಗೆ ಮುನ್ನ ಭರವಸೆ ಕೊಟ್ಟಿದ್ದರು. ಅದರಂತೆ ಅಷ್ಟೂ ಅಕ್ಕಿ ವಿತರಣೆ ಮಾಡಬೇಕಿದೆ. 1 ಗ್ರಾಂ ಕಡಿಮೆಯಾದರೂ ರಾಜ್ಯದ ಜನರು ಒಪ್ಪಲ್ಲ. ಅವರು ಕೊಟ್ಟ ಭರವಸೆ ಈಡೇರಿಸಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದ್ದಾರೆ. ಅಲ್ಲದೆ ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ್ದ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ ಬಿಎಸ್ವೈ. ಹೀಗೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಅಕ್ಕಿ ಹಂಚಿಕೆ ಫೈಟ್ ಮತ್ತಷ್ಟು ತೀವ್ರವಾಗಿದೆ.
ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆ ವಿಚಾರದಲ್ಲಿ ಕೇಂದ್ರದ ಮೇಲೆ ಗೂಬೆ ಕೂರಿಸಬೇಡಿ, ನೀವು ಘೋಷಿಸಿದ ಯೋಜನೆಗೆ ಕೇಂದ್ರ ಹೊಣೆಯಲ್ಲ. ಯಾವ ಸಂದರ್ಭದಲ್ಲೂ ನರೇಂದ್ರ ಮೋದಿ ಅವರ ಸರ್ಕಾರ ಹೆಚ್ಚುವರಿ ಅಕ್ಕಿಯನ್ನು ಕೊಡುತ್ತೇವೆ ಅಂತಾ ಹೇಳಿರಲಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಈ ವಿಚಾರದಲ್ಲಿ ವಿನಾಕಾರಣ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಟೀಕಿಸಿದರು. ಹೀಗೆ ರಾಜ್ಯ ಸರ್ಕಾರ VS ಕೇಂದ್ರ ಸರ್ಕಾರದ ನಡುವೆ ನಡೆಯುತ್ತಿದ್ದ ಅಕ್ಕಿ ಕಿರಿಕ್ಗೆ ಮಾಜಿ ಸಿಎಂ ಕೂಡ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಮುಂದೆ ಈ ಕಿರಿಕ್ ಎಲ್ಲಿಗೆ ಬಂದು ನಿಲ್ಲುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications