ಬಜೆಟ್ 2021: ನೀರಾವರಿ ಕ್ಷೇತ್ರಕ್ಕೆ 20,996 ಕೋಟಿ ಅನುದಾನ
ಬೆಂಗಳೂರು, ಮಾರ್ಚ್ 8: ನೀರಾವರಿ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ ಬಜೆಟ್ ಎಂದು ವಿಪಕ್ಷ ಕಾಂಗ್ರೆಸ್ ದನಿಯೆತ್ತಿರುವ ಬೆನ್ನಲ್ಲೇ ಬಿಜೆಪಿ ಕರ್ನಾಟಕ ಸರಣಿ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದೆ.
ಆಯವ್ಯಯದಲ್ಲಿ ಎಲ್ಲ ವರ್ಗಗಳಿಗೆ, ಎಲ್ಲ ವಲಯಗಳಿಗೆ ಹಾಗೂ ಎಲ್ಲ ಜಿಲ್ಲೆಗಳಿಗೆ ಪ್ರಾಮುಖ್ಯತೆ ನೀಡುವ ಮೂಲಕ ಸಮತೋಲನ ಕಾಯ್ದುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ'' ಎಂದು ಸಿಎಂ ಯಡಿಯೂರಪ್ಪ ಅವರು ಬಜೆಟ್ ಭಾಷಣದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ನೀರಾವರಿ ಕ್ಷೇತ್ರಕ್ಕೆ ಸಿಕ್ಕಿದ್ದ ಅನುದಾನದ ಮುಖ್ಯಾಂಶಗಳು:
* ರಾಜ್ಯದ ನೀರಾವರಿ ಯೋಜನೆಗಳನ್ನು ಆದ್ಯತೆ ಮೇರೆಗೆ ಜಾರಿಗೊಳಿಸಲು ಅನುಕೂಲವಾಗುವಂತೆ ರೂ. 20,996 ಕೋಟಿ ಅನುದಾನ.

* ಕೃಷ್ಣಾ ಮೇಲ್ದಂಡೆ ಹಂತ 3, ಮಹದಾಯಿ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆದ್ಯತೆ.
* ಭದ್ರಾ ಮೇಲ್ದಂಡೆ ಯೋಜನೆಗೆ ರೂ. 21,477 ಕೋಟಿ ಅನುದಾನ.
* ಬೇಡ್ತಿ-ವರದಾ ನದಿ ಜೋಡಣೆಗೆ ಪ್ರಸ್ತಾವನೆ. ಈ ಯೋಜನೆಯಡಿ ಒಟ್ಟು 22 ಟಿ.ಎಂ.ಸಿ. ನೀರು ಬಳಸಿಕೊಳ್ಳುವ ಉದ್ದೇಶವಿದ್ದು, ಯೋಜನಾ ವರದಿಯನ್ನು National Perspective Plan ಅಡಿಯಲ್ಲಿ ಸಿದ್ಧಪಡಿಸಲು NWDAಗೆ ಮನವಿ. ಈ ನಿರ್ಧಾರದಿಂದ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅನುಕೂಲವಾಗಲಿದೆ.
* ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಕ್ರಮ.
* ಪ್ರಾಧಿಕಾರದ ಆದೇಶದಂತೆ ಕಳಸಾ- ಬಂಡೂರಿ ಯೋಜನೆಯಡಿ ನೀರು ಹರಿಸಲು 1,677 ಕೋಟಿ ರು ಮೀಸಲು.
* ವಿಶ್ವ ಬ್ಯಾಂಕ್ ನೆರವಿನ ಡ್ರಿಪ್ ಯೋಜನೆಯಡಿ ರೂ. 1,500 ಕೋಟಿ ಮೊತ್ತದಲ್ಲಿ ರಾಜ್ಯದ 58 ಆಣೆಕಟ್ಟುಗಳ ಪುನಶ್ವೇತನ ಮತ್ತು ಅಭಿವೃದ್ಧಿಗೆ ಪ್ರಸ್ತಾವನೆ.
ಇದಲ್ಲದೆ, ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಭರಪೂರ ಅನುದಾನ ನೀಡಿರುವ ಸರ್ಕಾರ, ಕೃಷಿ ಕ್ಷೇತ್ರದ ಅಭ್ಯುದಯ, ಅನ್ನದಾತ ರೈತರ ಕಲ್ಯಾಣಕ್ಕಾಗಿ ಒಟ್ಟು ರೂ. 31,028 ಕೋಟಿ ಅನುದಾನ ಮೀಸಲು ಇಟ್ಟಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications