ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಜೆಟ್ 2021: ಸಾರಿಗೆ ವಲಯಕ್ಕೆ ನೀಡಿದ ಕೊಡುಗೆಗಳೇನು?

|
Google Oneindia Kannada News

ಬೆಂಗಳೂರು, ಮಾರ್ಚ್ 05: ಕೊರೊನಾ ಸೋಂಕಿನಿಂದಾಗಿ ನಷ್ಟ ಅನುಭವಿಸಿರುವ ಸಾರಿಗೆ ವಲಯಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಸ್ತುತ ಸಾಲಿನ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

2021-22ರ ಸಾಲಿನಲ್ಲಿ 7,515 ಕೋಟಿ ರೂ. ಆದಯಾ ಸಂಗ್ರಹಣೆಯ ಗುರಿಯನ್ನು ಹಾಕಲಾಗಿದೆ. ಈ ವರ್ಷ ರಾಜ್ಯದಲ್ಲಿ 52 ಬಸ್‌ ನಿಲ್ದಾಣ, 16 ಬಸ್‌ ಘಟಕಗಳ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಲಾಗಿದೆ.

ಕರ್ನಾಟಕ ಬಜೆಟ್ 2021: ಯಾವ ಕ್ಷೇತ್ರಕ್ಕೆ ಯಾವ ಕೊಡುಗೆ? ಮುಖ್ಯಾಂಶಗಳುಕರ್ನಾಟಕ ಬಜೆಟ್ 2021: ಯಾವ ಕ್ಷೇತ್ರಕ್ಕೆ ಯಾವ ಕೊಡುಗೆ? ಮುಖ್ಯಾಂಶಗಳು

2020-21ರ ಹಣಕಾಸು ವರ್ಷದಲ್ಲಿ ಸಾರಿಗೆ ಇಲಾಖೆ 7,115 ಕೋಟಿ ರೂ.ಗಳ ಆದಾಯವನ್ನು ನಿರೀಕ್ಷಿಸಲಾಗಿತ್ತು. ಆದರೆ ಜನವರಿ ಅಂತ್ಯಕ್ಕೆ 4,294 ಕೋಟಿ ರೂ. ಮಾತ್ರ ಆದಾಯ ಸಂಗ್ರಹವಾಗಿದೆ.

Karnataka Budget 2021: Major Announcements For Transport Sector

ಸಿಎಂ ಯಡಿಯೂರಪ್ಪ ಅವರು ಮಹಿಳೆಯರಿಗೆ ಬಿಎಂಟಿಸಿ ಬಸ್‌ಪಾಸ್‌ನಲ್ಲಿ ರಿಯಾಯಿತಿ ನೀಡುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಪ್ರಸ್ತುತ ಸಾಲಿನ ಬಜೆಟ್ ಮಂಡಿಸಿದ್ದು, ಆಗಸ್ಟ್ ತಿಂಗಳೊಳಗೆ ಒಂದು ರಾಷ್ಟ್ರ ಒಂದು ಕಾರ್ಡ್ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ನಮ್ಮ ಮೆಟ್ರೋ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಳಲ್ಲಿ ಈ ಕಾರ್ಡ್ ಬಳಕೆ ಮಾಡಬಹುದಾಗಿದೆ. ಇದರಿಂದಾಗಿ ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಎರಡರಲ್ಲೂ ಪ್ರಯಾಣಿಸುವವರಿಗೆ ಅನುಕೂಲವಾಗಲಿದೆ.

ಕೇವಲ ಕರ್ನಾಟಕದ ಮೆಟ್ರೋ ಮಾತ್ರವಲ್ಲದೆ ದೇಶದಲ್ಲಿರುವ ಇನ್ಯಾವುದೇ ರಾಜ್ಯದ ಮೆಟ್ರೋದಲ್ಲಿ ಬೇಕಾದರೂ ಈ ಕಾರ್ಡ್‌ಗಳನ್ನು ಬಳಸಬಹುದಾಗಿದೆ.ಈ ಕಾರ್ಡಿನ ಸಹಾಯದಿಂದಾಗಿ ಸಾರ್ವಜನಿಕರು ಯಾವುದೇ ಸಾರ್ವಜನಿಕ ಸಾರಿಗೆ ಸೇರಿದಂತೆ ಇತರೆ ಸೇವೆಗಳಿಗೆ ಪಾವತಿ ಕಾರ್ಯವನ್ನು ಸುಲಭದಲ್ಲಿ ಮಾಡಲು ಸಾಧ್ಯವಾಗುತ್ತದೆ.

Recommended Video

Karnataka Budget 2021 : ಯಡಿಯೂರಪ್ಪ ಅವರ 2021 ಬಜೆಟ್ ! | Oneindia Kannada

English summary
Karnataka Budget 2021, Chief minister BS Yediyurappa Announced Some scheme for Transport Sector.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X