ಕರ್ನಾಟಕ ಬಜೆಟ್ 2021: ಪೆಟ್ರೋಲ್, ಡೀಸೆಲ್ನಿಂದ ತೆರಿಗೆ ಹೊರೆ ಇಲ್ಲ
ಬೆಂಗಳೂರು, ಮಾರ್ಚ್ 8: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಸತತವಾಗಿ ಕಳೆದ 8 ದಿನಗಳಿಂದ ಇಂಧನ ದರ ಪರಿಷ್ಕರಿಸಿಲ್ಲ. ಆದರೆ, ತೈಲ ಬೆಲೆ ತೀವ್ರವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳಿಂದ ವ್ಯಾಟ್, ಸೆಸ್ ಇಳಿಕೆ ಮಾಡುವ ನಿರೀಕ್ಷೆ ಹುಟ್ಟುಕೊಂಡಿತ್ತು. ಆದರೆ ಕರ್ನಾಟಕ ಬಜೆಟ್ ನಲ್ಲಿಂದು ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.
ಬಿ.ಎಸ್ ಯಡಿಯೂರಪ್ಪ ಅವರು ಈ ಬಗ್ಗೆ ಬಜೆಟ್ ಭಾಷಣದಲ್ಲಿ ಸ್ಪಷ್ಟಪಡಿಸಿದ್ದು, ಪೆಟ್ರೋಲ್, ಡೀಸೆಲ್ ಮೇಲೆ ಕರ್ನಾಟಕ ಮಾರಾಟ ತೆರಿಗೆ ( KST) ವಿಧಿಸಲಾಗುತ್ತಿದ್ದು, ಇದು ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲೇ ಅತ್ಯಂತ ಕಡಿಮೆ ದರದಲ್ಲಿದೆ ಎಂದರು.
ಜನ ಸಾಮಾನ್ಯರ ಮೇಲೆ ತೆರಿಗೆ ಹೊರೆ ಹಾಕಲು ಸರ್ಕಾರ ಮುಂದಾಗಿಲ್ಲ. 2021-22ನೇ ಸಾಲಿನಲ್ಲೂ ಇಂಧನದ ಮೇಲೆ ವಿಧಿಸಿರುವ KST ಅದೇ ದರದಲ್ಲಿ ಮುಂದುವರೆಸಲಾಗುತ್ತದೆ, ಸೆಸ್,ವ್ಯಾಟ್ ದರದಲ್ಲಿ ಬದಲಾವಣೆಯಿಲ್ಲ ಎಂದು ಘೋಷಿಸಿದರು.
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ 94.22ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್ಗೆ 86.37 ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.

ಸುಮಾರು 14 ಬಾರಿ ಇಂಧನ ದರ ಪರಿಷ್ಕರಣೆ
ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಕೆ ಕಂಡಿದ್ದರೂ ಭಾರತದಲ್ಲಿ ತೈಲ ಬೆಲೆ ಸ್ಥಿರತೆ ಕಂಡುಕೊಂಡಿದೆ. ಕಳೆದ ಕೆಲವು ದಿನಗಳಲ್ಲಿ ಸರಿ ಸುಮಾರು 23-25 ಪೈಸೆಯಂತೆ ಪೆಟ್ರೋಲ್ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 24-26 ಪೈಸೆ ಪ್ರತಿ ಲೀಟರ್ ನಂತೆ ಏರಿಕೆ ಕಂಡಿತ್ತು. ಒಟ್ಟಾರೆ ಫೆಬ್ರವರಿ 9ರಿಂದ ಸುಮಾರು 14 ಬಾರಿ ಇಂಧನ ದರ ಪರಿಷ್ಕರಣೆಯಾಗಿದ್ದು, ಒಟ್ಟಾರೆ, ಪೆಟ್ರೋಲ್ ಬೆಲೆ 4.22 ರು ಪ್ರತಿ ಲೀಟರ್ ಹಾಗೂ ಡೀಸೆಲ್ 4.34 ಪ್ರತಿ ಲೀಟರ್ ಏರಿಕೆ ಕಂಡಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಶೇ 1.48 ರಷ್ಟು ಏರಿಕೆ ಕಂಡು 70.78ಯುಎಸ್ ಡಾಲರ್ ಪ್ರತಿ ಬ್ಯಾರೆಲ್ ನಷ್ಟಿದೆ. ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ 32. 98ರು ನಷ್ಟಿದೆ.
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ 94.22ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್ಗೆ 86.37 ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.

ಅತ್ಯಧಿಕ ದರದಲ್ಲಿ ಇಂಧನ ಮಾರಾಟವಾಗುತ್ತಿದೆ
ದೇಶದಲ್ಲಿ ರಾಜಸ್ಥಾನದ ಶ್ರೀ ಗಂಗಾನಗರ್ ಎಂಬಲ್ಲಿ ಅತ್ಯಧಿಕ ದರದಲ್ಲಿ ಇಂಧನ ಮಾರಾಟವಾಗುತ್ತಿದೆ. ಇಲ್ಲಿ ಪ್ರತಿ ಲೀಟರ್ಗೆ 101. 83 ರೂಪಾಯಿ ಹಾಗೂ ಡೀಸೆಲ್ ದರವು ಪ್ರತಿ ಲೀಟರ್ಗೆ 93.77 ರೂಪಾಯಿ ಮುಟ್ಟಿದೆ. ಕೆಲ ರಾಜ್ಯಗಳಲ್ಲಿ ಇಂಧನ ಮೇಲಿನ ಸುಂಕ ಇಳಿಕೆ ಮಾಡಲಾಗಿದೆ. ಪಶ್ಚಿಮ ಬಂಗಾಳ, ರಾಜಸ್ಥಾನ, ಅಸ್ಸಾಂ ,ಮೇಘಾಲಯ ಹಾಗೂ ನಾಗಾಲ್ಯಾಂಡ್ ನಲ್ಲಿ ವ್ಯಾಟ್, ಸೆಸ್ ಇಳಿಕೆ ಮಾಡಿರುವುದರಿಂದ ಪೆಟ್ರೋಲ್, ಡೀಸೆಲ್ ಬೆಲೆ ತಗ್ಗಿದೆ. ರಾಜಸ್ಥಾನದಲ್ಲಿ ಪೆಟ್ರೋಲ್ ಬೆಲೆ ಸತತವಾಗಿ 100 ರು ಗಡಿ ದಾಖಲೆ ಬರೆದಿತ್ತು.

ಅಬಕಾರಿ ಸುಂಕ ಇಳಿಕೆ ಸಾಧ್ಯವಿಲ್ಲ ಎಂದ ಕೇಂದ್ರ
ಈ ನಡುವೆ ಇಂಧನ ಮೇಲಿನ ಅಬಕಾರಿ ಸುಂಕ ಇಳಿಕೆ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸ್ಪಷ್ಟಪಡಿಸಿದ್ದಾರೆ. ಆದರೆ, ಕೆಲ ತಿಂಗಳುಗಳಲ್ಲಿ ತೈಲ ಬೆಲೆ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ. ಕೆಲ ರಾಜ್ಯಗಳು ಮಾತ್ರ ತಮ್ಮ ಪಾಲಿನ ವ್ಯಾಟ್, ಸೆಸ್ ಕಡಿಮೆ ಮಾಡಿ ಜನತೆಗೆ ನೆಮ್ಮದಿ ಸುದ್ದಿ ನೀಡಿವೆ. ರಾಜ್ಯಗಳು ಹಾಕುವ ಸೆಸ್ ಕಡಿಮೆ ಮಾಡುವುದರಿಂದ ಕನಿಷ್ಠ 2 ರಿಂದ 5 ರು ತನಕವಾದರೂ ಪ್ರತಿ ಲೀಟರ್ ಮೇಲಿನ ಬೆಲೆ ಹೊರೆಯನ್ನು ತಗ್ಗಿಸಬಹುದಾಗಿದೆ. ಕೇಂದ್ರ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ 32. 98ರು ನಷ್ಟಿದೆ. ದೆಹಲಿಯಲ್ಲಿ 19 ರು ಪ್ರತಿ ಲೀಟರ್ ವ್ಯಾಟ್, ಡೀಲರ್ ಕಮಿಷನ್ 3.67 ರು ಪ್ರತಿ ಲೀಟರ್ ಸೇರಿ ಬೆಲೆ ಇನ್ನಷ್ಟು ಏರಿಕೆಗೆ ಕಾರಣವಾಗಿದೆ.
-
MT Aqua Titan: ಮಂಗಳೂರು ಕರಾವಳಿಗೆ ಆಗಮಿಸಿದ ರಷ್ಯಾದ ಕಚ್ಚಾ ತೈಲ ಹೊತ್ತ ಬೃಹತ್ ನೌಕೆ -
ಭಾರತದಲ್ಲಿ ಇಂಧನ ಭದ್ರತೆಗೆ ಒತ್ತು, ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ: ಮೋದಿ ನೇತೃತ್ವದಲ್ಲಿ ಸಭೆ, ಹಲವು ಮಹತ್ವದ ತೀರ್ಮಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications