ಕರ್ನಾಟಕ ಬಜೆಟ್; ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಏನು?
ಬೆಂಗಳೂರು, ಫೆಬ್ರವರಿ 24; ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4ರಂದು 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ತಮ್ಮ ಚೊಚ್ಚಲ ಬಜೆಟ್ನಲ್ಲಿ ಯಾವ ಘೋಷಣೆ ಮಾಡಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಬಜೆಟ್ನಲ್ಲಿ ಕೆಲವು ಘೋಷಣೆಗಳನ್ನು ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದೆ. ಸರ್ಕಾರಿ ನೌಕರರಿಗೆ ಯಾವ ಕೊಡಗೆ ಸಿಗಲಿದೆ? ಎಂದು ಕಾದು ನೋಡಬೇಕಿದೆ.
ನೌಕರ-ವಿರೋಧಿ ಎನ್. ಪಿ. ಎಸ್. ಯೋಜನೆಯನ್ನು ರದ್ದುಗೊಳಿಸಿ ನಿಶ್ಚಿತ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಬೇಕು. 7ನೇ ವೇತನ ಆಯೋಗ ರಚನೆ ಮತ್ತು ಖಾಲಿ ಹುದ್ದೆಗಳ ಭರ್ತಿಗಾಗಿ ಮಾಡುವ ಕುರಿತು ಮಹತ್ವದ ನಿರ್ಧಾರವನ್ನು ಘೋಷಿಸಬೇಕಯ ಎಂದು ಒಕ್ಕೂಟದ ಆಗ್ರಹಿಸಿದೆ.

1/4/2006 ರಿಂದ ರಾಜ್ಯದಲ್ಲಿ ಜಾರಿಗೆ ತರಲಾಗಿರುವ ಪಿ. ಎಫ್. ಆರ್. ಡಿ. ಎ ಕಾಯ್ದೆ ಪ್ರಾಯೋಜಿತ ಎನ್. ಪಿ. ಎಸ್ ಯೋಜನೆಯಿಂದಾಗಿ ರಾಜ್ಯ ಸರ್ಕಾರಿ ನೌಕರರಿಂದ ನಿಶ್ಚಿತ ಪಿಂಚಣಿಯನ್ನು ಕಸಿದುಕೊಳ್ಳಲಾಗಿರುತ್ತದೆ ಎಂದು ಒಕ್ಕೂಟ ಆರೋಪಿಸಿದೆ.
ಎನ್. ಪಿ. ಎಸ್ ಯೋಜನೆಯಡಿ ಸಂಗ್ರಹವಾಗುವ ಶೇ10ರಷ್ಟು ನೌಕರರ ವಂತಿಕೆ ಮತ್ತು ಶೇ12 ರಷ್ಟು ಸರ್ಕಾರದ ವಂತಿಕೆಯನ್ನು ಪಿ. ಎಫ್. ಆರ್. ಡಿ. ಎ ಸಂಸ್ಥೆಯು ಫಂಡ್ ಮ್ಯಾನೇಜರುಗಳ ಮೂಲಕ ಷೇರು ಮಾರುಕಟ್ಟೆಯಲ್ಲಿ ತೊಡಗಿಸುತ್ತಿದೆ ಎಂದು ಹೇಳಿದೆ.
ಕಳೆದ 18 ವರ್ಷಗಳ ಅನುಭವ ತೋರಿಸಿಕೊಟ್ಟಿರುವುದೇನೆಂದರೆ, ಸರ್ಕಾರಿ ನೌಕರರ ಹಣ ಖಾಸಗಿ ಕಂಪನಿಗಳ ಷೇರು ಖರೀದಿಗೆ ವಿನಿಯೋಗವಾಗುತ್ತಿದ್ದು, ಷೇರು ಮಾರುಕಟ್ಟೆಯು ಜೂಜುಕೋರ ವ್ಯವಸ್ಥೆಯಾಗಿರುವುದರಿಂದ, ನಿವೃತ್ತಿಯಾಗುತ್ತಿರುವ ನೌಕರರಿಗೆ/ ಮರಣ ಹೊಂದಿರುವ ನೌಕರರ ಕುಟುಂಬಕ್ಕೆ ಮಾಸಿಕ ಪಿಂಚಣಿ ಕೇವಲ 2,000 ರೂ. ದಿಂದ 3,000 ರೂ. ಮಾತ್ರವೇ ಬರುತ್ತಿದ್ದು, ಇದು ಮನೆಯ ಬಾಡಿಗೆಯಿರಲಿ, ವಿದ್ಯುತ್ ಮತ್ತು ನೀರಿನ ಶುಲ್ಕ ಕಟ್ಟಲು ಸಾಕಾಗುತ್ತಿಲ್ಲ ಎಂದು ಒಕ್ಕೂಟ ತಿಳಿಸಿದೆ.
ಹಲವು ವರ್ಷಗಳ ನಂತರ ರಾಜಸ್ಥಾನ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ತನ್ನ ರಾಜ್ಯದ ಬಜೆಟ್ ನಲ್ಲಿ ಘೋಷಿಸಿದ್ದು,ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಉದ್ಯೋಗಿಗಳು ಭವಿಷ್ಯದ ಬಗ್ಗೆ ಸುರಕ್ಷಿತವಾಗಿರಬೇಕು ಎಂದು ನಮಗೆಲ್ಲರಿಗೂ ತಿಳಿದಿದೆ, ಆಗ ಮಾತ್ರ ಅವರು ಸೇವಾ ಅವಧಿಯಲ್ಲಿ ಉತ್ತಮ ಆಡಳಿತಕ್ಕಾಗಿ ತಮ್ಮ ಅಮೂಲ್ಯ ಕೊಡುಗೆಯನ್ನು ನೀಡಬಹುದು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದರು.
2022ನೇ ಆಯವ್ಯಯದಲ್ಲಿ 2004ರ ಜನವರಿ-1ರ ನಂತರದ ನೇಮಕಾತಿಗಳಿಗೂ ಅನ್ವಯವಾಗುವಂತೆ ಎನ್. ಪಿ. ಎಸ್. ಯೋಜನೆಯನ್ನು ರದ್ದುಗೊಳಿಸಿ ನಿಶ್ಚಿತ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವುದಾಗಿ ಘೋಷಿಸಿದ್ದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ವೇತನ ಹೆಚ್ಚಳವನ್ನು ಸಹ ಮಾಡುವುದಾಗಿ ಘೋಷಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, 2022ನೇ ಆಯವ್ಯಯದಲ್ಲಿ ಕೆಳಕಂಡ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮಹತ್ವದ ಘೋಷಣೆಗಳನ್ನು ಮಾಡಬೇಕೆಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಆಗ್ರಹಿಸಿದೆ.
ಬೇಡಿಕೆಗಳು
* ದಿನಾಂಕ 1/4/2006ರಿಂದ ನೇಮಕಗೊಂಡ ಎಲ್ಲ ನೌಕರರಿಗೆ ಎನ್. ಪಿ. ಎಸ್ ಯೋಜನೆಯನ್ನು ರದ್ದುಗೊಳಿಸಿ ನಿಶ್ಚಿತ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಬೇಕು.
* ರಾಜ್ಯ 7ನೇ ವೇತನ ಆಯೋಗವನ್ನು ಹೈಕೋರ್ಟ್ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ರಚನೆ ಮಾಡುವುದು.
* 2ನೇ ಆಡಳಿತ ಸುಧಾರಣೆ ಆಯೋಗವು ಹುದ್ದೆಗಳ ಕಡಿತವನ್ನು/ ಅನುಕಂಪ-ಆಧಾರಿತ ಉದ್ಯೋಗವನ್ನು ರದ್ದುಗೊಳಿಸಬೇಕೆಂಬ ಅವೈಜ್ಞಾನಿಕ ಶಿಫಾರಸ್ಸನ್ನು ತಿರಸ್ಕರಿಸಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ












Click it and Unblock the Notifications