ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಜೆಟ್ ಅಧಿವೇಶನ ಅರ್ಥಹೀನ, ಸರ್ಕಾರಕ್ಕೆ ಸಂಖ್ಯಾಬಲವಿಲ್ಲ : ಶ್ರೀರಾಮುಲು

|
Google Oneindia Kannada News

ಬೆಂಗಳೂರು, ಫೆಬ್ರವರಿ 07: ವಿಧಾನಮಂಡಲದ ಜಂಟಿ ಹಾಗೂ ಬಜೆಟ್ ಅಧಿವೇಶನದ ಎರಡನೇ ದಿನವೂ ಹೈ ಡ್ರಾಮಾ ಮುಂದುವರೆದಿದೆ. ಮೈತ್ರಿ ಸರ್ಕಾರವು ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಸರ್ಕಸ್ ಮಾಡುತ್ತಿದ್ದರೆ, ಸರಣಿ ಸುದ್ದಿಗೋಷ್ಠಿಗಳ ಮೂಲಕ ಕುಮಾರಸ್ವಾಮಿ ಅವರ ಸರ್ಕಾರ ಅಸ್ತಿತ್ವ ಕಳೆದುಕೊಂಡಿದೆ ಎಂದು ಬಿಜೆಪಿ ಪ್ರತಿಪಾದಿಸಿದೆ.

ಬಜೆಟ್ ಅಧಿವೇಶನ LIVE: ನಿಲ್ಲದ ಗಲಾಟೆ, ಕಲಾಪ ನಾಳೆಗೆ ಮುಂದೂಡಿಕೆಬಜೆಟ್ ಅಧಿವೇಶನ LIVE: ನಿಲ್ಲದ ಗಲಾಟೆ, ಕಲಾಪ ನಾಳೆಗೆ ಮುಂದೂಡಿಕೆ

ಈ ನಡುವೆ ಶಾಸಕ ಬಿ . ಶ್ರೀರಾಮುಲು ಮಾತನಾಡಿ, ಎಚ್. ಡಿ ಕುಮಾರಸ್ವಾಮಿ ಅವರು ಬಜೆಟ್ ಮಂಡಿಸುವ ಅರ್ಹತೆ ಕಳೆದುಕೊಂಡಿದ್ದಾರೆ. ಸಮ್ಮಿಶ್ರ ಸರ್ಕಾರಕ್ಕೆ ಬಹಮತವೇ ಇಲ್ಲ. ಕಾಂಗ್ರೆಸ್ ಅಲ್ಲದೆ, ಜೆಡಿಎಸ್ ಶಾಸಕರು ಕೂಡಾ ಸ್ವಇಚ್ಛೆಯಿಂದ ಬಿಜೆಪಿ ಕಡೆಗೆ ಬರುತ್ತಿದ್ದಾರೆ. ಜೆಡಿಎಸ್ ಶಾಸಕ ನಾರಾಯಣಸ್ವಾಮಿ ಅವರು ಮುಂಬೈಯಲ್ಲಿದ್ದಾರೆ. ಕೂಡಲೇ ಕುಮಾರಸ್ವಾಮಿ ಅವರು ರಾಜೀನಾಮೆ ನೀಡುವುದು ಒಳ್ಳೆಯದು ಎಂದಿದ್ದಾರೆ.

Karnataka Budget session 2019 : Kumaraswamy govt lost majority : B Sriramulu

ಕಾಂಗ್ರೆಸ್​ನ ಅತೃಪ್ತ ಶಾಸಕರು ಎರಡು ದಿನವು ಕೈ ನಾಯಕರ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬ ಸುದ್ದಿ ಬಂದಿದೆ. ಕಾಂಗ್ರೆಸ್ಸಿನ ಆರು ಮಂದಿ ಅತೃಪ್ತ ಶಾಸಕರು ಬಜೆಟ್ ಅಧಿವೇಶನಕ್ಕೆ ಗೈರಾಗಬಹುದು ಎಂಬ ಶಂಕೆ ಇತ್ತು. ಆದರೆ, ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

ಬಜೆಟ್ ಜಂಟಿ ಅಧಿವೇಶನಕ್ಕೆ ಎಷ್ಟು ಮಂದಿ ಶಾಸಕರು ಗೈರು ಹಾಜರಿ?ಬಜೆಟ್ ಜಂಟಿ ಅಧಿವೇಶನಕ್ಕೆ ಎಷ್ಟು ಮಂದಿ ಶಾಸಕರು ಗೈರು ಹಾಜರಿ?

ಇತ್ತ ವಿಧಾನಸಭೆಯ ಇಂದು ಕೂಡಾ ಬಿಜೆಪಿ ಶಾಸಕರು ಬಾವಿಗಿಳಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಕಲಾಪಕ್ಕೆ ಅಡ್ಡಿಪಡಿಸಿದರು. ಪ್ರತಿಭಟನೆ, ಕೂಗಾಟ ತೀವ್ರಗೊಂಡಿದ್ದರಿಂದ ಸದನದ ಕಲಾಪವನ್ನು ನಾಳೆ 12.30ಕ್ಕೆ ಸ್ಪೀಕರ್ ರಮೇಶ್ ಕುಮಾರ್ ಅವರು ಮುಂದೂಡಿದರು.

English summary
Karnataka Budget session 2019 : HD Kumaraswamy led JDS -Congress coalition government has lost majority and are not eligible to present Budget claims Sriramulu
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X