Burn Victims: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟ ಸಂತ್ರಸ್ತರಿಗೆ ಪರಿಹಾರ ಸಿಗುತ್ತಿಲ್ಲ: ಕಾರಣ ತಿಳಿಯಿರಿ!
ಬೆಂಗಳೂರು, ಜೂನ್ 07: ವಿಕ್ಟೋರಿಯಾ ಆಸ್ಪತ್ರೆಯು ವಾರ್ಷಿಕವಾಗಿ ನೂರಾರು ಕೌಟುಂಬಿಕ ಹಿಂಸೆ ಹಾಗೂ ಸುಟ್ಟ ಸಂತ್ರಸ್ತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಅವರಲ್ಲಿ ಯಾರೂ ಸಹ ಸರ್ಕಾರದ ಸಂತ್ರಸ್ತ ಪರಿಹಾರ ಯೋಜನೆಯಿಂದ ಪರಿಹಾರವನ್ನು ಪಡೆಯುತ್ತಿಲ್ಲ.
ಸರ್ಕಾರದ ಸಂತ್ರಸ್ತ ಪರಿಹಾರ ಯೋಜನೆಯ ಪರಿಹಾರವನ್ನ ಪಡೆಯದೇ ಇರಲು ಪ್ರಮುಖ ಕಾರಣ ಎಂದರೇ, ಸಂತ್ರಸ್ತರು ಭಯ ಅಥವಾ ಸಾಮಾಜಿಕ ಒತ್ತಡದಿಂದ ಪೊಲೀಸ್ ಕೇಸುಗಳನ್ನು ದಾಖಲಿಸಲು ನಿರಾಕರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸುಟ್ಟ ಸಂಗತಿಗಳಾದರೂ ನಡೆದಾಗ ಘಟನೆಯ ನಂತರ ಹೆಚ್ಚಿನ ಮಹಿಳೆಯರು ತಮ್ಮ ಗಂಡನನ್ನು ಬಿಟ್ಟು ಹೋಗುತ್ತಾರೆ. ಆದರೆ, ಯಾವುದೇ ಆರ್ಥಿಕ ಬೆಂಬಲವಿಲ್ಲದೆ ತಮ್ಮನ್ನು ತಾವು ಉಳಿಸಿಕೊಳ್ಳುವುದು ಕಷ್ಟಕರವಾಗಿದೆ. ಇನ್ನೂ ಗಾಯದ ತೀವ್ರತೆಗೆ ಅನುಗುಣವಾಗಿ ಸುಟ್ಟ ಸಂತ್ರಸ್ತರು ಪರಿಹಾರ ಯೋಜನೆಯಡಿ 2 ರಿಂದ 8 ಲಕ್ಷ ರೂಪಾಯಿಗಳವರೆಗೆ ಪರಿಹಾರವನ್ನು ಪಡೆಯಬಹುದು.
ಇನ್ನೂ ಜನವರಿ 2020 ಮತ್ತು ಏಪ್ರಿಲ್ 2023 ರ ನಡುವೆ, ವಿಕ್ಟೋರಿಯಾ ಆಸ್ಪತ್ರೆಯು ಕೌಟುಂಬಿಕ ಹಿಂಸೆಗೆ ಒಳಗಾದ ಸುಮಾರು 600 ಸುಟ್ಟ ರೋಗಿಗಳನ್ನು ದಾಖಲಿಸಿದೆ ಎಂದು ಸಂತ್ರಸ್ತರನ್ನು ಬೆಂಬಲಿಸಲು ಆಸ್ಪತ್ರೆಯೊಂದಿಗೆ ಕೆಲಸ ಮಾಡುವ ಎನ್ಜಿಒ ಅವೇಕ್ಷಾದ ಸತ್ಯ ದೇವಿ ಹೇಳಿದ್ದಾರೆ. ಪತಿ ತನ್ನ ಹೆಂಡತಿಯನ್ನ ಸುಟ್ಟುಹಾಕಿದ ಪ್ರಕರಣಗಳು ಅಥವಾ ನಿರಂತರ ಕಿರುಕುಳದಿಂದಾಗಿ ಮಹಿಳೆಯರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಗಳು ಇದರಲ್ಲಿ ಸೇರಿವೆ ಎಂದು ಹೇಳಿದ್ದಾರೆ.
ಸುಟ್ಟ ಸಂತ್ರಸ್ತರು ಪರಿಹಾರ ಪಡೆಯಲು ಮೊದಲು ಎಫ್ಐಆರ್ ದಾಖಲಿಸಬೇಕು. ಆದರೆ 33 ಪ್ರಕರಣಗಳಲ್ಲಿ ಮಾತ್ರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಅದರಲ್ಲಿ 28 ಸುಟ್ಟಗಾಯಗಳು, ವರದಕ್ಷಿಣೆ ಸಂಬಂಧಿತ ಹಿಂಸೆ ಮತ್ತು ಆತ್ಮಹತ್ಯೆಗೆ ಪ್ರಚೋದನೆಯಿಂದ ಉಂಟಾದ ಸಾವುಗಳಾಗಿವೆ. ಉಳಿದ ಐವರು ಬದುಕುಳಿದವರು ಎಂದು ತಿಳಿದು ಬಂದಿದೆ.
ಇನ್ನೂ ಸಂತ್ರಸ್ತರು ನ್ಯಾಯಾಲಯದ ವಿಚಾರಣೆಯ ನಂತರ ಪರಿಹಾರವನ್ನು ಪಡೆಯಬಹುದು, ಆದರೆ ಮಧ್ಯಂತರ ಪರಿಹಾರಕ್ಕಾಗಿ, ಅವರು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರವನ್ನು (KSLSA) ಸಂಪರ್ಕಿಸಬಹುದು. ಇಲ್ಲಿಯವರೆಗೆ ಕೇವಲ ಇಬ್ಬರು ಮಾತ್ರ ಪ್ರಾಧಿಕಾರಕ್ಕೆ ಬಂದಿದ್ದಾರೆ ಎಂದು ದೇವಿ ಹೇಳಿದರು. ಸಂತ್ರಸ್ತರು 1.5 ಲಕ್ಷ ರೂ.ಗಳ ಮಧ್ಯಂತರ ಪರಿಹಾರವನ್ನು ಪಡೆದರು.
ಸಂತ್ರಸ್ತರು ಸಾಮಾನ್ಯವಾಗಿ ಸುಟ್ಟಗಾಯಗಳ ನಿಜವಾದ ಕಾರಣವನ್ನು ವೈದ್ಯರಿಗೆ ಅಥವಾ ಪೊಲೀಸರಿಗೆ ಬಹಿರಂಗಪಡಿಸುವುದಿಲ್ಲ ಎಂದು ದೇವಿ ಹೇಳಿದರು. ಅಲ್ಲದೇ ಚಿಕಿತ್ಸೆಯು ಸಾಮಾನ್ಯವಾಗಿ ಆರರಿಂದ ಏಳು ತಿಂಗಳವರೆಗೆ ಇರುತ್ತದೆ ಆದ್ದರಿಂದ, ಸುಟ್ಟ ಸಂತ್ರಸ್ತರು ಆಸ್ಪತ್ರೆಯ ವಾಸ್ತವ್ಯ ಮತ್ತು ಅನುಸರಣಾ ಭೇಟಿಗಳಿಗಾಗಿ ತಮ್ಮ ಗಂಡನ ಮೇಲೆ ಅವಲಂಬಿತರಾಗಿದ್ದಾರೆ. ಆದ್ದರಿಂದ, ಅವರು ಘಟನೆಯನ್ನು ಅಪಘಾತ ಎಂದು ಹೇಳಿತ್ತಾರೆ ಎನ್ನಲಾಗಿದೆ.
ಸುಟ್ಟ ಸಂತ್ರಸ್ತರು ಹೇಳಿಕೊಂಡಂತೆ, ಸುಟ್ಟಗಾಯಗಳು ಅಡುಗೆ ಮನೆಯ ಅಪಘಾತಗಳಿಂದ ಅಲ್ಲ ಎಂಬುದು ಸ್ಪಷ್ಟವಾಗಿದ್ದರೂ ಸಹ ಪೊಲೀಸರು ಪ್ರಕರಣಗಳನ್ನು ತನಿಖೆ ಮಾಡುವುದಿಲ್ಲ. ಸುಟ್ಟ ಗಾಯಗಳಿಂದ ಅವರ ಆರೋಗ್ಯ ಸಮಸ್ಯೆಗಳಿಂದ, ಅವರು ಯೋಗ್ಯವಾದ ಉದ್ಯೋಗಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಅಲ್ಲದೇ ಬಾಡಿಗೆ, ಆಹಾರ ಮತ್ತು ಮಕ್ಕಳ ಶಿಕ್ಷಣ ಎಲ್ಲವೂ ತೊಂದರೆಯಾಗುತ್ತದೆ ಎಂದು ದೇವಿ ಹೇಳಿದರು.
ಇನ್ನೂ KSLSA ಉಪ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಮಾತನಾಡಿ, ಪೊಲೀಸರು ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ತನಿಖೆ ಮಾಡಲು ಮತ್ತು ಎಫ್ಐಆರ್ಗಳನ್ನು ದಾಖಲಿಸಲು ಒಲವು ತೋರುತ್ತಿಲ್ಲ. ಪರಿಹಾರ ನೀಡುವ ಬಗ್ಗೆ ಅರಿವಿನ ಕೊರತೆ ಮತ್ತೊಂದು ಸಮಸ್ಯೆಯಾಗಿದೆ ಎಂದು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications