ಹಿರಿಯೂರು ಬಳಿ ಬೀಕರ ಬಸ್ ಅಪಘಾತ: ಬೊಮ್ಮಾಯಿ, ಡಿಕೆಶಿ ಸೇರಿದಂತೆ ಗಣ್ಯರ ಸಂತಾಪ
ಬೆಂಗಳೂರು: ರಾಜಧಾನಿ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಸ್ಲೀಪರ್ ಬಸ್ ಚಿತ್ರದುರ್ಗದ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ 20 ಮಂದಿ ಮೃತಪಟ್ಟಿದ್ದಾರೆ. ಬಸ್ ಸುಟ್ಟು ಕರಕಲಾಗಿದೆ. ಈ ಘಟನೆ ಕುರಿತು ಕಳವಳ ವ್ಯಕ್ತಪಡಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮೃತರಿಗೆ ಸಂತಾಪ ತಿಳಿಸಿ ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್ ಮಾಡಿದ್ದಾರೆ.
'ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ' ಎಂದು ಅವರು ಪ್ರಾರ್ಥಿಸಿದ್ದಾರೆ.

ಸ್ಥಳಕ್ಕೆ ಖುದ್ದು ಸಾರಿಗೆ ಆಯುಕ್ತರ ಭೇಟಿಗೆ ಸಚಿವರ ಸೂಚನೆ
ಈ ರಸ್ತೆ ಅಪಘಾತ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಖುದ್ದು ಸಾರಿಗೆ ಇಲಾಖೆ ಆಯುಕ್ತರಿಗೆ ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ ಅವರು ತಿಳಿಸಿದ್ದಾರೆ. 'ಚಿತ್ರದುರ್ಗದ ಹಿರಿಯೂರು ಬಳಿ ಇಂದು ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸದ್ಯಕ್ಕೆ ಬಂದ ಮಾಹಿತಿ ಪ್ರಕಾರ 11ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದನ್ನು ಕೇಳಿ ಅತ್ಯಂತ ದುಃಖವಾಯಿತು ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು (median) ಹಾರಿ ಬಸ್ಗೆ ಡಿಕ್ಕಿ ಹೊಡೆದಿರುವುದೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಸಾರಿಗೆ ಆಯುಕ್ತರಾದ ಯೋಗೇಶ್ವರ್ ಹಾಗೂ ಸಹಾಯಕ ಆಯುಕ್ತರಾದ ಓಂಕಾರೇಶ್ವರಿ ಅವರು ಹೋಗುತ್ತಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಚಿತ್ರದುರ್ಗದ ಹಿರಿಯೂರು ಬಳಿ ಇಂದು ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸದ್ಯಕ್ಕೆ ಬಂದ ಮಾಹಿತಿ ಪ್ರಕಾರ 11ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದನ್ನು ಕೇಳಿ ಅತ್ಯಂತ ದುಃಖವಾಯಿತು.
— Ramalinga Reddy (@RLR_BTM) December 25, 2025
ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು (median) ಹಾರಿ ಬಸ್ಗೆ ಡಿಕ್ಕಿ… pic.twitter.com/OmmTmqIuaf
ಭೀಕರ ರಸ್ತೆ ಅಪಘಾತ
ಬೆಂಗಳೂರಿನಿಂದ ಹೊರಟಿದ್ದ ಖಾಸಗಿ ಬಸ್ ಲಾರಿ ನಡುವೆ ಡಿಕ್ಕಿ ಆಗಿದೆ. ಈ ಘಟನ ಚಿತ್ರದುರ್ಗದ ಹಿರಿಯೂರಿನ ರಸ್ತೆ (NH 48) ಗೊರ್ಲತ್ತು ಕ್ರಾಸ್ ಬಳಿ ಇಂದು ಗುರುವಾರ ಬೆಳಗಿನ ಜಾವ ನಡೆದಿದೆ. ಘಟನೆಯನ್ನು ಸುಮಾರು 20ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಚಾಲಕ, ನಿರ್ವಾಹಕ ಸೇರಿ 30 ಮಂದಿ ಬಸ್ನಲ್ಲಿದ್ದರು ಎಂದು ಮೂಲಗಳು ತಿಳಿಸಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಪೊಲೀಸರು, ಸಾರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಅತ್ಯಂತ ದುಃಖಕರ: ಬೊಮ್ಮಾಯಿ ಸಂತಾಪ
ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಚಿತ್ರದುರ್ಗದ ಹಿರಿಯೂರಿನ ಬಳಿ ಅಪಘಾತಕ್ಕೆ ಒಳಗಾಗಿ ಅಗ್ನಿ ಅವಘಡ ಸಂಭವಿಸಿದ್ದು ಅದರಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ ಎಂದು ತಿಳಿದು ಅತ್ಯಂತ ದುಃಖವಾಯಿತು.
ರಾಜ್ಯ ಸರ್ಕಾರವು ಮೃತಪಟ್ಟ ಕುಟುಂಬದವರಿಗೆ ಕೂಡಲೇ ಪರಿಹಾರ ಘೋಷಿಸಿಬೇಕು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಎಲ್ಲ ರೀತಿಯ ಕ್ರಮಕೈಗೊಳ್ಳಲು ಆಗ್ರಹಿಸುತ್ತೇನೆ. ದೇವರು ಮೃತರ ಆತ್ಮಕ್ಕೆ ಶಾಂತಿ ಕರುಣಿಸಲಿ, ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಗಾಯಾಳು ಗುಣಮುಖರಾಗಲಿ: ಆರ್.ಅಶೋಕ್
ಘಟನೆ ಸಂಬಂಧ ಸಂತಾಪ ಸೂಚಿಸಿರುವ ವಿಪಕ್ಷ ನಾಯಕ. ಆರ್.ಅಶೋಕ್ ಅವರು, 'ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಹಿರಿಯೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಸಜೀವ ದಹನಗೊಂಡಿರುವುದು ತಿಳಿದು ತೀವ್ರ ಆಘಾತವಾಗಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಮೃತರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ. ಈ ಅಪಘಾತದಲ್ಲಿ ಗಾಯಗೊಂಡವರು ಶೀಘ್ರದಲ್ಲೇ ಸಂಪೂರ್ಣ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications