ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರ v/s ಸಾರಿಗೆ ನೌಕರರು: 8ನೇ ದಿನಕ್ಕೆ ಕಾಲಿಟ್ಟ ಮುಷ್ಕರ

|
Google Oneindia Kannada News

ಬೆಂಗಳೂರು, ಏಪ್ರಿಲ್ 14: 6ನೇ ವೇತನ ಶಿಫಾರಸ್ಸು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಅದು ಇದೀಗ 8ನೇ ದಿನಕ್ಕೆ ಕಾಲಿಟ್ಟಿದೆ.

ನಮ್ಮ ಬೇಡಿಕೆಗಳು ಈಡೇರಿಕೆ ಆಗುವವರೆಗೂ ಮುಷ್ಕರ ನಿಲ್ಲುವುದಿಲ್ಲ ಎಂದು ಸಾರಿಗೆ ನೌಕರರರು ಪಟ್ಟು ಹಿಡಿದಿದ್ದು, ಇತ್ತ ಸಿಎಂ ಯಡಿಯೂರಪ್ಪ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಕೂಡ ಇನ್ನು ಒಂದು ತಿಂಗಳು ಮುಷ್ಕರ ಮಾಡಿದರೂ ಡೋಂಟ್ ಕೇರ್ ಎನ್ನುವಂತೆ ಇದ್ದಾರೆ.

ಮುಷ್ಕರ ಹಿಂದಿನ ರೋಚಕ ಸತ್ಯಗಳನ್ನು ಬಿಚ್ಚಿಟ್ಟ ಬಿಎಂಟಿಸಿ ನಿರ್ವಾಹಕ ಮುಷ್ಕರ ಹಿಂದಿನ ರೋಚಕ ಸತ್ಯಗಳನ್ನು ಬಿಚ್ಚಿಟ್ಟ ಬಿಎಂಟಿಸಿ ನಿರ್ವಾಹಕ

ಸಾರಿಗೆ ನೌಕರರ ಮುಷ್ಕರವನ್ನು ನಿರ್ಲಕ್ಷಿಸಿರುವ ರಾಜ್ಯ ಸರ್ಕಾರ, ಪ್ರಯಾಣಿಕರಿಗಾಗಿ ಈಗಾಗಲೇ ಖಾಸಗಿ ವಾಹನಗಳನ್ನು ಓಡಿಸುತ್ತಿದೆ. ಹೀಗಾಗಿ ಸಾರಿಗೆ ನೌಕರರು ತಮ್ಮ ಕುಟುಂಬದ ಸದಸ್ಯರನ್ನು ಪ್ರತಿಭಟನೆಗೆ ಕರೆತರುವ ಮೂಲಕ ದಿನೇ ದಿನೇ ವಿನೂತನ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

Karnataka Bus Strike: Transport Employees Strike Contiues To 8th Day

ಬುಧವಾರ ಕೂಡ ರಾಜ್ಯದಲ್ಲಿ ಖಾಸಗಿ ಬಸ್ಸುಗಳ ದರ್ಬಾರ್ ಮುಂದುವರೆದಿದ್ದು, ಖಾಸಗಿ ಬಸ್ ಇದ್ದರೂ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ಬಸ್ಸುಗಳು ಬುಧವಾರ ಸಹ ರಸ್ತೆಗಿಳಿಯುವುದಿಲ್ಲ.

ದಿನದಿಂದ ದಿನಕ್ಕೆ ಸಾರಿಗೆ ನೌಕರರು ಕಳೆದ ಎರಡು ದಿನಗಳಿಂದ ಮುಷ್ಕರವನ್ನು ಚಳವಳಿ ರೂಪದಲ್ಲಿ ಮುಂದುವರೆಸುತ್ತಿದ್ದಾರೆ. ಬುಧವಾರದಿಂದ ರಾಜ್ಯಾದ್ಯಂತ ಸಾರಿಗೆ ನೌಕರರಿಂದ ಡಾ.‌ಬಿ.ಆರ್ ಅಂಬೇಡ್ಕರ್ ಪ್ರತಿಮೆ ಹಾಗೂ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದಾರೆ.

Recommended Video

ತಮಿಳುನಾಡಿನಲ್ಲಿ ವರುಣನ ಆರ್ಭಟ: ಬೆಂಗಳೂರಿನಲ್ಲೂ ಮಳೆ | Oneindia Kannada

English summary
Employees of Karnataka State Road Transport Corporation Strike continues 8th day, demanding pay revision and various demands as recommended by the Sixth Pay Commission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X