ಸುಗಮ ಉದ್ದಿಮೆ ನೀತಿ: ರಾಜ್ಯಕ್ಕೆ 13ನೇ ಸ್ಥಾನ
ಬೆಂಗಳೂರು, ನವೆಂಬರ್, 3: ಸುಗಮ ಉದ್ದಿಮೆ ನೀತಿ ಅನುಷ್ಠಾನದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ 13ನೇ ಸ್ಥಾನವನ್ನ ನೀಡಿದೆ. ಮತ್ತು ಬಂಡವಾಳ ಆಕರ್ಷಣೆಯಲ್ಲಿ ಹಿಂದೆ ಬಿದ್ದಿರುವ ಆಂಧ್ರಪ್ರದೇಶಕ್ಕೆ ಪ್ರಥಮ ಸ್ಥಾನ ನೀಡಲಾಗಿದೆ.
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಟ್ಟಿಯ ವಿರುದ್ಧ ಬೃಹತ್ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಂಡವಾಲ ಹೂಡಿಕೆಯಲ್ಲಿ ಹಿಂದೆ ಬಿದ್ದಿರುವ ರಾಜ್ಯಗಳಿಗೆ ಉತ್ತಮ ಅಂಕವನ್ನು ನೀಡಲಾಗಿದೆ ಸರ್ಕಾರದ ಮಾನದಂಡವೇ ಅರ್ಥವಾಗುತ್ತಿಲ್ಲ ಎಂದು ಆಕ್ಷೇಪಿಸಿದರು.

ಈ ಕುರಿತು ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಹಿಂದೆ ಕೇಂದ್ರ ಸರ್ಕಾರದ ಕೈಗಾರಿಕಾ ನೀತಿ ಮತ್ತು ಉತ್ತೇಜನಾ ಸಚಿವಾಲಯ ಜುಲೈನಲ್ಲಿ ಪ್ರಕಟಿಸಿದ್ದ ವರದಿಯು 2016ರ ಜನವರಿ-ಜುಲೈ ಅವಧಿಯಲ್ಲಿ ರೂ.1.09ಲಕ್ಷಕೋಟಿ ಮೊತ್ತದ ಬಂಡವಾಳ ಆಕರ್ಷಿಸಿ ಮೊದಲ ಸ್ಥಾನದಲ್ಲಿದೆ ಎಂದು ಸೂಚಿಸಿತ್ತು.
ಸುಗಮ ವ್ಯಾಪಾರ ನೀತಿಯನ್ನು ಸಮರ್ಪಕವಾವಿ ಅನುದಾನ ಮಾಡದೇ ಇದ್ದರೆ ಬಂಡವಾಳ ಹೇಗೆ ಹರಿದು ಬರುತ್ತಿತ್ತು. ಉದ್ದಿಮೆ ನೀತಿ ಅನುಷ್ಠಾನದಲ್ಲಿ ಕೇಂದ್ರ ಸರ್ಕಾರ ಅನುಸರಿಸಿರುವ ಮಾನದಂಡವೇ ಸರಿಯಿಲ್ಲ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.
2015ರಲ್ಲಿ ರಾಜ್ಯ ಶೇ.48.50 ಅಂಕ ಪಡೆದು 9ನೇ ಸ್ಥಾನದಲ್ಲಿತ್ತು. ಈ ವರ್ಷ 88.39 ಅಂಕ ಪಡೆದರೂ 13ನೇ ಸ್ಥಾನ ನೀಡಲಾಗಿದೆ ಎಂದು ದೇಶಪಾಂಡೆ ಅವರು ತಿಳಿಸಿದರು.
ಈ ಪಟ್ಟಿಯಿಂದ ರಾಜ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ "ಮುಂದೆಯೂ ಬಂಡವಾಳ ಆಕರ್ಷಣೆಯಲ್ಲಿ ರಾಜ್ಯವೇ ಪ್ರಥಮ ಸ್ಥಾನದಲ್ಲಿ ನಿಲ್ಲಲಿದೆ" ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಂಡವಾಳ ಆಕರ್ಷಣೆ, ಒಪ್ಪಂದ, ಹೂಡಿಕೆ, ಹೂಡಿಕೆದಾರರಿಗೆ ಮೂಲಸೌಕರ್ಯ ಕಲ್ಪಿಸುವಲ್ಲಿ ನೀಡಿದ ಆದ್ಯತೆ ಇವೆಲ್ಲವನ್ನೂ ಮಾನದಂಡವಾಗಿ ಪರಿಗಣಿಸಿ ಕರ್ನಾಟಕಕ್ಕೆ ಮೊದಲ ಸ್ಥಾನ ನೀಡಬೇಕಿತ್ತು ಎಂದು ಅವರು ಪ್ರತಿಪಾದಿಸಿದರು.
ಉದ್ದಿಮೆ ವಹಿವಾಟು ಸುಧಾರಣೆ ಕ್ರಿಯಾ ಯೋಜನೆಯಲ್ಲಿ 340 ಅಂಶಗಳನ್ನು ಪರಿಗಣಿಸಲಾಗಿತ್ತು. ಈ ಪೈಕಿ 301 ಸಮರ್ಪಕವಾಗಿದ್ದು, ಕೇವಲ 39 ಅಂಶಗಳಲ್ಲಿ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳಿಗೆ ಕೇಂದ್ರ ಸಮ್ಮತಿಸಿಲ್ಲ.
ಅಷ್ಟೇ ಅಲ್ಲದೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಎಂಟು ವಿವಿಧ ಹಂತಗಳಲ್ಲಿ ಒಪ್ಪಿಗೆ ಪಡೆಯಬೇಕಿದೆ ಈ ಕಾರಣಗಳಿಂದ ರಾಜ್ಯಕ್ಕೆ ಉತ್ತಮ ಅಂಕ ದೊರೆತಿಲ್ಲ ಎಂದು ವಿಶ್ಲೇಷಿಸಲಾಗಿದೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications