ಪೇಜಾವರ ಮಠಕ್ಕೆ 600 ಕೋಟಿ ದೇಣಿಗೆಯ ವಿಷಯ ಏನಾಯ್ತು?
ಏಪ್ರಿಲ್ ಎರಡರಂದು ಬೆಂಗಳೂರಿನಲ್ಲಿ ಹೈದರಾಬಾದಿನ ಉದ್ಯಮಿಯೊಬ್ಬರು ಮಠಕ್ಕೆ ನೀಡುವ ದೇಣಿಗೆ ವಿಚಾರದಲ್ಲಿ ಭಾರೀ ಸುದ್ದಿಮಾಡಿದ್ದರು.
ರಾಜ್ಯದ ಯಾವುದೇ ಮಠವೊಂದರ ಇತಿಹಾಸದಲ್ಲಿ ಕಂಡುಕೇಳರಿಯದ ಬರೋಬ್ಬರಿ ಆರು ನೂರು ಕೋಟಿ ರೂಪಾಯಿಯನ್ನು ಉಡುಪಿಯ ಪೇಜಾವರ ಅಧೋಕ್ಷಜ ಮಠಕ್ಕೆ ದೇಣಿಗೆ ನೀಡುತ್ತೇನೆಂದು ಹೇಳಿ ಭಾರೀ ಸಂಚಲನ ಮೂಡಿಸಿದ್ದರು.
ಹದಿನೈದು ದಿನದೊಳಗೆ ದುಡ್ಡನ್ನು ಪೇಜಾವರ ಮಠಕ್ಕೆ ತಲುಪಿಸುತ್ತೇನೆಂದು ಶ್ರೀಸತಿ ಗೋಪಾಲಕೃಷ್ಣ ಫೌಂಡೇಷನಿನ ಗೋಪಾಲಕೃಷ್ಣ ರೆಡ್ಡಿ ಹೇಳಿಕೆ ನೀಡಿದ್ದರು. (ಪೇಜಾವರ ಮಠಕ್ಕೆ ಒಲಿದ ಆಧುನಿಕ ಕುಬೇರ)
ಆದರೆ, ಹದಿನೈದು ದಿನ ಕಳೆದು ತಿಂಗಳಾದರೂ ಘೋಷಿಸಿದ ಆರು ನೂರು ಕೋಟಿ ರೂಪಾಯಿಯಲ್ಲಿ ಒಂದು ಬಿಡಿಗಾಸು ಉದ್ಯಮಿ ಕಡೆಯಿಂದ ಮಠಕ್ಕೆ ಇದುವರೆಗೆ ಬಂದಿಲ್ಲ.

ಲಂಡನ್ ಬ್ಯಾಂಕಿನಲ್ಲಿರುವ ಈ ಹಣವನ್ನು ರೂಪಾಯಿಗೆ ಪರಿವರ್ತಿಸಿ ತರಲು ಹದಿನೈದು ದಿನದ ಕಾಲಾವಕಾಶ ಬೇಕಾಗುತ್ತದೆ ಎಂದಿದ್ದ ಉದ್ಯಮಿ ಗೋಪಾಲಕೃಷ್ಣ ರೆಡ್ಡಿ ಕಡೆಯಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಉದ್ಯಮಿ ಟೋಕನ್ ರೂಪದಲ್ಲಿ ಕೊಟ್ಟಿದ್ದ ಒಂದು ಲಕ್ಷ ರೂಪಾಯಿ ಚೆಕ್ ಬೌನ್ಸ್ ಆಗಿದೆ ಎಂದು ಸುದ್ದಿಯಾಗಿತ್ತು. ಆದರೆ ಉದ್ಯಮಿ ಯಾವುದೇ ಚೆಕ್ ನೀಡಿಲ್ಲ ಎಂದು ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ಸ್ಪಷ್ಟ ಪಡಿಸಿದೆ.
ಪೇಜಾವರ ಮಠದ ವತಿಯಿಂದ ಹಲವು ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕೆಲಸಗಳು ನಡೆಯುತ್ತಿವೆ. ಎಲ್ಲಾ ಕೆಲಸಗಳು ಭಕ್ತರ ಸಹಕಾರದಿಂದ ಮತ್ತು ಶ್ರೀಕೃಷ್ಣನ ಅನುಗ್ರಹದಿಂದ ಮಾತ್ರ ನಡೆಯಲು ಸಾಧ್ಯ.
ಉದ್ಯಮಿಯೊಬ್ಬರು ದೇಣಿಗೆ ನೀಡುತ್ತಾರೆನ್ನುವ ಭರವಸೆಯಿಂದ ಯಾವುದೇ ಕೆಲಸ ನಾವು ಆರಂಭಿಸಿಲ್ಲ, ಭಕ್ತರ ಸಹಕಾರದಿಂದ ನಮ್ಮೆಲ್ಲಾ ಸಾಮಾಜಿಕ ಕೆಲಸಗಳು ಮುಂದುವರಿಯಲಿವೆ ಎಂದು ಪೇಜಾವರ ಮಠದ ಅಧಿಕಾರಿಗಳು ತಿಳಿಸಿದ್ದಾರೆ.
ಉದ್ಯಮಿ ಗೋಪಾಲಕೃಷ್ಣ ರೆಡ್ಡಿ ನೀಡುವ ದೇಣಿಗೆ ಹಣವನ್ನು ಉಡುಪಿ ಹಾಗೂ ಬೆಂಗಳೂರಿನಲ್ಲಿರುವ ಗೋ ಶಾಲೆಗಳಿಗೆ 100 ಕೋಟಿ ರೂಪಾಯಿ, ಶ್ರೀಕೃಷ್ಣ ಸೇವಾಶ್ರಮ ಆಸ್ಪತ್ರೆಗೆ 250 ಕೋಟಿ ರೂಪಾಯಿ ಬಳಕೆ ಮಾಡಲು ನಿರ್ಧರಿಸಲಾಗಿದೆ ಎಂದು ಪೇಜಾವರ ಶ್ರೀಗಳು ಹೇಳಿಕೆ ನೀಡಿದ್ದರು.
ಪೇಜಾವರ ಮಠದ ಜೊತೆಗೆ ಮಂತ್ರಾಲಯ ರಾಘವೇಂದ್ರ ಮಠಕ್ಕೂ ಈ ಉದ್ಯಮಿ ನೂರು ಕೋಟಿ ದೇಣಿಗೆ ನೀಡುತ್ತಾರೆಂದು ಸುದ್ದಿಯಾಗಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications