ಉಪಚುನಾವಣೆ 2018 ಮತದಾನ ಅಂತ್ಯ: ಇಲ್ಲಿದೆ ಹೈಲೈಟ್ಸ್
ಬೆಂಗಳೂರು, ನವೆಂಬರ್ 03: ಪಂಚ ಕ್ಷೇತ್ರಗಳ ಉಪಚುನಾವಣೆ ಶಾಂತಿಯುತವಾಗಿ ಅಂತ್ಯವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರವಾಗಿದೆ.
ಬಳ್ಳಾರಿ, ಶಿವಮೊಗ್ಗ, ಮಂಡ್ಯ ಲೋಕಸಭೆ ಕ್ಷೇತ್ರಗಳಿಗೆ ಹಾಗೂ ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯಿತು. ಮೈತ್ರಿ ಸರ್ಕಾರದ ಅಭ್ಯರ್ಥಿಗಳು ಮತ್ತು ಬಿಜೆಪಿ ನಡುವೆ ಏರ್ಪಟ್ಟಿದ್ದ ಚುನಾವಣೆ ಇದು.
ಬಹುತೇಕ ಶಾಂತಿಯುತವಾಗಿ ಚುನಾವಣೆ ಮುಗಿದಿದೆ, ಎಲ್ಲಿಯೂ ಗಲಾಟೆ ಆದ ವರದಿ ಆಗಿಲ್ಲ. ಮತಯಂತ್ರ ಕೈಕೊಟ್ಟ ಪ್ರಸಂಗ ಸಹ ವರದಿ ಆಗದೇ ಇರುವುದು ಪೊಲೀಸ್ ಇಲಾಖೆ ಮತ್ತು ಚುನಾವಣಾ ಆಯೋಗ ತೆಗೆದುಕೊಂಡಿದ್ದ ಮುನ್ನೆಚ್ಚರಿಕಾ ಕ್ರಮಗಳನ್ನು ತೋರುತ್ತದೆ.
ಶೇಕಡಾವಾರು ಮತದಾನವನ್ನು ಗಮನಿಸಿದಲ್ಲಿ ಜಮಖಂಡಿಯಲ್ಲಿ ವಿಧಾನಸಭೆ ಉಪಚುನಾವಣೆಗೆ ಬಿರುಸಿನಿಂದ ಮತದಾನ ನಡೆದಿದೆ. ಮಂಡ್ಯದ ಲೋಕಸಭಾ ಉಪಚುನಾವಣೆಗೆ ನೀರಸವಾಗಿ ಮತದಾನ ನಡೆದಿದ್ದು ಅಲ್ಲಿ ಶೇ 50 ಸಹ ಮತದಾನ ಆಗಿಲ್ಲ.
ಬಳ್ಳಾರಿಯ ಹಗರಿನಡೋಣಿ ಹಳ್ಳಿಯ ಜನ ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ಚುನಾವಣೆಯನ್ನು ಬಹಿಷ್ಕರಿಸಿದ್ದವು. ಜಿಲ್ಲಾಧಿಕಾರಿ, ತಹಶೀಲ್ದಾರ್ ಅವರುಗಳ ಮನವೊಲಿಕೆ ನಂತರ ಮಧ್ಯಾಹ್ನದ ನಂತರ ಅಲ್ಲಿ ಚುನಾವಣೆ ನಡೆದಿದೆ.

ಮತಗಟ್ಟೆಗೆ ಹಾವು
ರಾಮನಗರದಲ್ಲಿ ಮತಗಟ್ಟೆಯೊಂದಕ್ಕೆ ಹಾವೊಂದು ಏಕಾ-ಏಕಿ ಪ್ರವೇಶಿಸಿ ಆತಂಕ ಸೃಷ್ಠಿಸಿತು. ಬಿಟ್ಟಂತೆ ಬಳ್ಳಾರಿಯಲ್ಲಿ ಚುನಾವಣಾ ಕರ್ತವ್ಯಕ್ಕೆಂದು ಬಂದಿದ್ದ ಅಧಿಕಾರಿ ಒಬ್ಬರು ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ತೆರಳಿ ಅಲ್ಲಿ ಪ್ರಾಣ ಬಿಟ್ಟಿರುವ ಘಟನೆ ಸಹ ನಡೆಯಿತು.

ಮತಚಲಾಯಿಸಿದ ಗಣ್ಯರು
ಚುನಾವಣೆಯಲ್ಲಿ ಅಂಬರೀಶ್, ಶ್ರೀರಾಮುಲು, ಯಡಿಯೂರಪ್ಪ ಕುಟುಂಬ, ಈಶ್ವರಪ್ಪ ಮತ್ತು ಕುಟುಂಬ, ಶಾಮನೂರು ಶೀವಶಂಕರಪ್ಪ ಮತ್ತು ಕುಟುಂಬ, ಮಧು ಬಂಗಾರಪ್ಪ, ಕುಮಾರ ಬಂಗಾರಪ್ಪ ಸೇರಿ ಇನ್ನೂ ಹಲವು ಪ್ರಮುಖ ರಾಜಕಾರಣಿಗಳು ತಮ್ಮಿಷ್ಟದ ಪಕ್ಷಕ್ಕೆ ಮತಚಲಾಯಿಸಿದರು.

ಖಾಸಗಿ ವಾಹನದಲ್ಲಿ ಇವಿಎಂ
ಜಮಖಂಡಿ ಕ್ಷೇತ್ರದ ಚುನಾವಣೆಗೆ ಇವಿಎಂ ಯಂತ್ರಗಳನ್ನು ಎಂಬಿ ಪಾಟೀಲ್ ಅವರಿಗೆ ಸೇರಿದ ಖಾಸಗಿ ವಾಹನದಲ್ಲಿ ತರಲಾಗಿದೆ ಎಂಬ ಆರೋಪ ಕೇಳಿಬಂದಿತು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಬಿಜೆಪಿ ಹೇಳಿದೆ.

ರಾಮನಗರದಲ್ಲಿ ಬಿಜೆಪಿಗೆ ಬೇಸರ
ರಾಮನಗರದ ಬಿಜೆಪಿಗೆ ಈ ಉಪಚುನಾವಣೆ ಬಹು ಬೇಸರ ತರಿಸಿದ ಚುನಾವಣೆ. ತಮ್ಮ ಅಭ್ಯರ್ಥಿಯೇ ಕೈಕೊಟ್ಟ ನಂತರ ಪಕ್ಷಕ್ಕಾಗಿ ಪ್ರಚಾರ ಮಾಡಿದ್ದರು. ಆದರೆ ಇಂದು ಮತ್ತೆ ಏಟು ಕೊಟ್ಟ ಬಿಜೆಪಿ ಪಲಾಯನ ಅಭ್ಯರ್ಥಿ ಬಿಜೆಪಿಯ ಬೂತ್ ಏಜೆಂಟ್ಗಳ ಮಾನ್ಯತೆ ರದ್ದು ಮಾಡಿದರು. ಬಿಜೆಪಿ ಏಜೆಂಟ್ ಸಹ ಇಲ್ಲದೆ ರಾಮನಗರದಲ್ಲಿ ಚುನಾವಣೆ ನಡೆದಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications