ನ.3ಕ್ಕೆ 5 ಕ್ಷೇತ್ರಗಳ ಉಪಚುನಾವಣೆ: ಮೈತ್ರಿ vs ಬಿಜೆಪಿ, ಯಾರ ಪರ ಜನತೆ
ಬೆಂಗಳೂರು, ನವೆಂಬರ್ 02: ಬಹುನಿರೀಕ್ಷಿತ ಪಂಚ ಕ್ಷೇತ್ರಗಳ ಉಪಚುನಾವಣೆ ನಾಳೆ ನಡೆಯಲಿದ್ದು, ರಾಜ್ಯದ ಜನರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪರ ಇದ್ದಾರೆಯೋ ಬಿಜೆಪಿ ಪರ ಇದ್ದಾರೋ ಎಂಬುದು ನಾಳೆ ಮತಯಂತ್ರಗಳಲ್ಲಿ ದಾಖಲಾಗಲಿದೆ.
ಬಳ್ಳಾರಿ, ಮಂಡ್ಯ, ಶಿವಮೊಗ್ಗದಲ್ಲಿ ಲೋಕಸಭೆ ಉಪಚುನಾವಣೆ ನಡೆದರೆ, ರಾಮನಗರ ಹಾಗೂ ಜಮಖಂಡಿ ಕ್ಷೇತ್ರಗಳಲ್ಲಿ ವಿಧಾನಸಭೆ ಉಪಚುನಾವಣೆ ನಡೆಯಲಿದೆ.
ಬಳ್ಳಾರಿಯಲ್ಲಿ ಸಂಸದರಾಗಿದ್ದ ಶ್ರೀರಾಮುಲು, ಮಂಡ್ಯದಲ್ಲಿ ಪುಟ್ಟರಾಜು, ಶಿವಮೊಗ್ಗದಲ್ಲಿ ಸಂಸದ ಯಡಿಯೂರಪ್ಪ ರಾಜೀನಾಮೆ ನೀಡಿದ್ದ ಕಾರಣ ಅಲ್ಲಿ ಉಪಚುನಾವಣೆ ನಡೆಯುತ್ತಿದೆ.
ಜಮಖಂಡಿಯಲ್ಲಿ ಶಾಸಕ ಸಿದ್ದು ನ್ಯಾಮಗೌಡ ಅವರು ಅಕಾಲಿಕವಾಗಿ ಮರಣಹೊಂದಿದ ಕಾರಣ ಹಾಗೂ ರಾಮನಗರದ ಶಾಸಕರಾಗಿ ಆಯ್ಕೆ ಆಗಿದ್ದ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿದ ಕಾರಣ ಉಪಚುನಾವಣೆ ನಡೆಯುತ್ತಿದೆ.
ಚುನಾವಣಾ ಇಲಾಖೆಯು ಮತದಾನಕ್ಕಾಗಿ ಸರ್ವ ತಯಾರಿಯನ್ನೂ ಮಾಡಿಕೊಂಡಿದೆ. ನಾಳೆ ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಚುನಾವಣೆ ನಡೆಯಲಿದೆ. ಮತದಾನದ ಮೂರು ದಿನಗಳ ನಂತರ ಅಂದರೆ ನವೆಂಬರ್ 6 ರಂದು ಫಲಿತಾಂಶ ಹೊರಬೀಳಲಿದೆ.

ಲೋಕಸಭೆ ಉಪಚುನಾವಣೆ ಕಣ
ಬಳ್ಳಾರಿ ಲೋಕಸಭೆ ಉಪಚುನಾವಣೆ ಅತಿ ಹೆಚ್ಚು ಗಮನ ಸೆಳೆದಿದೆ ಅಲ್ಲಿ ಶ್ರೀರಾಮುಲು ಸಹೋದರಿ ಜೆ.ಶಾಂತಾಅ ಅವರು ಬಿಜೆಪಿ ಅಭ್ಯರ್ಥಿಯಾಗಿ ಹಾಗೂ ವಿಎಸ್ ಉಗ್ರಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದು ರಾಮುಲು ಮತ್ತು ಡಿಕೆಶಿ ಮಧ್ಯೆ ಫೈಟ್ ಎನಿಸಿಕೊಂಡಿದೆ. ಶಿವಮೊಗ್ಗದಲ್ಲಿ ಯಡಿಯೂರಪ್ಪ ಪುತ್ರ ರಾಘವೇಂದ್ರ ಮತ್ತು ಜೆಡಿಎಸ್ನ ಮಧು ಬಂಗಾರಪ್ಪ ನಡುವೆ ಪೈಪೋಟಿ ಇದೆ. ಮಧುಗೆ ಕಾಂಗ್ರೆಸ್ ಬೆಂಬಲ ನೀಡಿದೆ. ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಶಿವರಾಮೇಗೌಡ ಮತ್ತು ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಮಧ್ಯೆ ನೇರ ಸ್ಪರ್ಧೆ ಇದೆ. ಇಲ್ಲಿ ಯಾರೇ ಗೆದ್ದರು ಅಂತರ ಕಡಿಮೆ ಎನ್ನಲಾಗಿದೆ.

ವಿಧಾನಸಭೆ ಉಪಚುನಾವಣೆ
ರಾಮನಗರದಲ್ಲಿ ಹಲವು ಕೊನೆ ಕ್ಷಣದ ನಾಟಕೀಯ ಬೆಳವಣಿಗೆ ನಂತರ ಜೆಡಿಎಸ್ನ ಅನಿತಾ ಕುಮಾರಸ್ವಾಮಿ ಅವರು ಕಣದಲ್ಲಿ ಉಳಿದಿರುವ ಏಕಮೇವ ಪ್ರಬಲ ಅಭ್ಯರ್ಥಿ ಆಗಿದ್ದಾರೆ. ಬಿಜೆಪಿಯ ಅಭ್ಯರ್ಥಿ ಕೊನೆಯ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದುದ ಕಾಂಗ್ರೆಸ್ ಸೇರಿದ್ದಾರೆ. ಇನ್ನು ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಹಾಗೂ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಮಧ್ಯೆ ತುರುಸಿನ ಪೈಪೋಟಿ ಇದೆ.

ಮತದಾನಕ್ಕೆ ಸರ್ವ ತಯಾರಿ
ಐದು ಕ್ಷೇತ್ರದ ಉಪಚುನಾಣೆಗಾಗಿ 6453 ಮತಗಟ್ಟೆಗಳನ್ನು ನಿರ್ಮಿಸಲಾಗಿದೆ. ಇವುಗಳಲ್ಲಿ 1502 ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ಐದು ಕ್ಷೇತ್ರಗಳಲ್ಲಿ 53 ಪಿಂಕ್ ಮತಗಟ್ಟೆಗಳನ್ನು ತೆರೆಯಲಾಗಿದೆ. ಐದೂ ಕ್ಷೇತ್ರಗಳಲ್ಲಿ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಒಟ್ಟು 54.45 ಮತದಾರರು
ಐದು ಕ್ಷೇತ್ರಗಳಲ್ಲಿ ಒಟ್ಟು 54.45 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. 27.21 ಲಕ್ಷ ಪುರುಷ ಮತದಾರರು, 27.30 ಲಕ್ಷ ಮಹಿಳಾ ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. ಉಪಚುನಾವಣೆಗಾಗಿ 9822 ಬ್ಯಾಲೆಟ್ ಯುನಿಟ್ ಬಳಸಲಾಗುತ್ತಿದೆ. 8,438 ಕಂಟ್ರೋಲ್ ಯುನಿಟ್, 8,992 ವಿವಿ ಪ್ಯಾಟ್ ಬಳಸಲಾಗುತ್ತಿದೆ. 130 ವಿಡಿಯೋ ಕಾಸ್ಟಿಂಗ್ ಮಾಡಿಸಲಾಗುತ್ತಿದ್ದು, 1312 ಮಂದಿ ಮೈಕ್ರೋ ವೀಕ್ಷಕರನ್ನು ನೇಮಿಸಲಾಗುತ್ತಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications