ನ.3ಕ್ಕೆ 5 ಕ್ಷೇತ್ರಗಳ ಉಪಚುನಾವಣೆ: ಮೈತ್ರಿ vs ಬಿಜೆಪಿ, ಯಾರ ಪರ ಜನತೆ
ಬೆಂಗಳೂರು, ನವೆಂಬರ್ 02: ಬಹುನಿರೀಕ್ಷಿತ ಪಂಚ ಕ್ಷೇತ್ರಗಳ ಉಪಚುನಾವಣೆ ನಾಳೆ ನಡೆಯಲಿದ್ದು, ರಾಜ್ಯದ ಜನರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪರ ಇದ್ದಾರೆಯೋ ಬಿಜೆಪಿ ಪರ ಇದ್ದಾರೋ ಎಂಬುದು ನಾಳೆ ಮತಯಂತ್ರಗಳಲ್ಲಿ ದಾಖಲಾಗಲಿದೆ.
ಬಳ್ಳಾರಿ, ಮಂಡ್ಯ, ಶಿವಮೊಗ್ಗದಲ್ಲಿ ಲೋಕಸಭೆ ಉಪಚುನಾವಣೆ ನಡೆದರೆ, ರಾಮನಗರ ಹಾಗೂ ಜಮಖಂಡಿ ಕ್ಷೇತ್ರಗಳಲ್ಲಿ ವಿಧಾನಸಭೆ ಉಪಚುನಾವಣೆ ನಡೆಯಲಿದೆ.
ಬಳ್ಳಾರಿಯಲ್ಲಿ ಸಂಸದರಾಗಿದ್ದ ಶ್ರೀರಾಮುಲು, ಮಂಡ್ಯದಲ್ಲಿ ಪುಟ್ಟರಾಜು, ಶಿವಮೊಗ್ಗದಲ್ಲಿ ಸಂಸದ ಯಡಿಯೂರಪ್ಪ ರಾಜೀನಾಮೆ ನೀಡಿದ್ದ ಕಾರಣ ಅಲ್ಲಿ ಉಪಚುನಾವಣೆ ನಡೆಯುತ್ತಿದೆ.
ಜಮಖಂಡಿಯಲ್ಲಿ ಶಾಸಕ ಸಿದ್ದು ನ್ಯಾಮಗೌಡ ಅವರು ಅಕಾಲಿಕವಾಗಿ ಮರಣಹೊಂದಿದ ಕಾರಣ ಹಾಗೂ ರಾಮನಗರದ ಶಾಸಕರಾಗಿ ಆಯ್ಕೆ ಆಗಿದ್ದ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿದ ಕಾರಣ ಉಪಚುನಾವಣೆ ನಡೆಯುತ್ತಿದೆ.
ಚುನಾವಣಾ ಇಲಾಖೆಯು ಮತದಾನಕ್ಕಾಗಿ ಸರ್ವ ತಯಾರಿಯನ್ನೂ ಮಾಡಿಕೊಂಡಿದೆ. ನಾಳೆ ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಚುನಾವಣೆ ನಡೆಯಲಿದೆ. ಮತದಾನದ ಮೂರು ದಿನಗಳ ನಂತರ ಅಂದರೆ ನವೆಂಬರ್ 6 ರಂದು ಫಲಿತಾಂಶ ಹೊರಬೀಳಲಿದೆ.

ಲೋಕಸಭೆ ಉಪಚುನಾವಣೆ ಕಣ
ಬಳ್ಳಾರಿ ಲೋಕಸಭೆ ಉಪಚುನಾವಣೆ ಅತಿ ಹೆಚ್ಚು ಗಮನ ಸೆಳೆದಿದೆ ಅಲ್ಲಿ ಶ್ರೀರಾಮುಲು ಸಹೋದರಿ ಜೆ.ಶಾಂತಾಅ ಅವರು ಬಿಜೆಪಿ ಅಭ್ಯರ್ಥಿಯಾಗಿ ಹಾಗೂ ವಿಎಸ್ ಉಗ್ರಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದು ರಾಮುಲು ಮತ್ತು ಡಿಕೆಶಿ ಮಧ್ಯೆ ಫೈಟ್ ಎನಿಸಿಕೊಂಡಿದೆ. ಶಿವಮೊಗ್ಗದಲ್ಲಿ ಯಡಿಯೂರಪ್ಪ ಪುತ್ರ ರಾಘವೇಂದ್ರ ಮತ್ತು ಜೆಡಿಎಸ್ನ ಮಧು ಬಂಗಾರಪ್ಪ ನಡುವೆ ಪೈಪೋಟಿ ಇದೆ. ಮಧುಗೆ ಕಾಂಗ್ರೆಸ್ ಬೆಂಬಲ ನೀಡಿದೆ. ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಶಿವರಾಮೇಗೌಡ ಮತ್ತು ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಮಧ್ಯೆ ನೇರ ಸ್ಪರ್ಧೆ ಇದೆ. ಇಲ್ಲಿ ಯಾರೇ ಗೆದ್ದರು ಅಂತರ ಕಡಿಮೆ ಎನ್ನಲಾಗಿದೆ.

ವಿಧಾನಸಭೆ ಉಪಚುನಾವಣೆ
ರಾಮನಗರದಲ್ಲಿ ಹಲವು ಕೊನೆ ಕ್ಷಣದ ನಾಟಕೀಯ ಬೆಳವಣಿಗೆ ನಂತರ ಜೆಡಿಎಸ್ನ ಅನಿತಾ ಕುಮಾರಸ್ವಾಮಿ ಅವರು ಕಣದಲ್ಲಿ ಉಳಿದಿರುವ ಏಕಮೇವ ಪ್ರಬಲ ಅಭ್ಯರ್ಥಿ ಆಗಿದ್ದಾರೆ. ಬಿಜೆಪಿಯ ಅಭ್ಯರ್ಥಿ ಕೊನೆಯ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದುದ ಕಾಂಗ್ರೆಸ್ ಸೇರಿದ್ದಾರೆ. ಇನ್ನು ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಹಾಗೂ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಮಧ್ಯೆ ತುರುಸಿನ ಪೈಪೋಟಿ ಇದೆ.

ಮತದಾನಕ್ಕೆ ಸರ್ವ ತಯಾರಿ
ಐದು ಕ್ಷೇತ್ರದ ಉಪಚುನಾಣೆಗಾಗಿ 6453 ಮತಗಟ್ಟೆಗಳನ್ನು ನಿರ್ಮಿಸಲಾಗಿದೆ. ಇವುಗಳಲ್ಲಿ 1502 ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ಐದು ಕ್ಷೇತ್ರಗಳಲ್ಲಿ 53 ಪಿಂಕ್ ಮತಗಟ್ಟೆಗಳನ್ನು ತೆರೆಯಲಾಗಿದೆ. ಐದೂ ಕ್ಷೇತ್ರಗಳಲ್ಲಿ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಒಟ್ಟು 54.45 ಮತದಾರರು
ಐದು ಕ್ಷೇತ್ರಗಳಲ್ಲಿ ಒಟ್ಟು 54.45 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. 27.21 ಲಕ್ಷ ಪುರುಷ ಮತದಾರರು, 27.30 ಲಕ್ಷ ಮಹಿಳಾ ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. ಉಪಚುನಾವಣೆಗಾಗಿ 9822 ಬ್ಯಾಲೆಟ್ ಯುನಿಟ್ ಬಳಸಲಾಗುತ್ತಿದೆ. 8,438 ಕಂಟ್ರೋಲ್ ಯುನಿಟ್, 8,992 ವಿವಿ ಪ್ಯಾಟ್ ಬಳಸಲಾಗುತ್ತಿದೆ. 130 ವಿಡಿಯೋ ಕಾಸ್ಟಿಂಗ್ ಮಾಡಿಸಲಾಗುತ್ತಿದ್ದು, 1312 ಮಂದಿ ಮೈಕ್ರೋ ವೀಕ್ಷಕರನ್ನು ನೇಮಿಸಲಾಗುತ್ತಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications