ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಉಪಚುನಾವಣೆಗೆ ದಿನಾಂಕ ನಿಗದಿ, ಇಂದಿನಿಂದಲೇ ನೀತಿ ಸಂಹಿತೆ ಜಾರಿ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 21: ಕಾಂಗ್ರೆಸ್-ಜೆಡಿಎಸ್ ಶಾಸಕರ ಅನರ್ಹತೆಯಿಂದ ತೆರವಾಗಿರುವ ರಾಜ್ಯದ 17 ವಿಧಾನಸಭಾ ಕ್ಷೇತ್ರಗಳಲ್ಲಿ 15 ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ಪ್ರಕಟವಾಗಿದೆ.

ಅಕ್ಟೋಬರ್ 21 ಕ್ಕೆ ಹದಿನೈದು ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣೆ ಆಯೋಗ ಇಂದು ಪ್ರಕಟಿಸಿದ್ದು, ಅಕ್ಟೋಬರ್ 24 ರಂದು ಫಲಿತಾಂಶ ಪ್ರಕಟವಾಗಲಿದೆ.

ಮಹಾರಾಷ್ಟ್ರ ಮತ್ತು ಹರ್ಯಾಣದಲ್ಲಿ ಅ.21 ರಂದು ವಿಧಾನಸಭೆ ಚುನಾವಣೆಮಹಾರಾಷ್ಟ್ರ ಮತ್ತು ಹರ್ಯಾಣದಲ್ಲಿ ಅ.21 ರಂದು ವಿಧಾನಸಭೆ ಚುನಾವಣೆ

ರಾಜ್ಯದಲ್ಲಿ ಒಟ್ಟು ಹದಿನೇಳು ಕ್ಷೇತ್ರಗಳು ಪ್ರಸ್ತುತ ಶಾಸಕರಿಲ್ಲದೆ ಖಾಲಿ ಇವೆ. ಇವುಗಳಲ್ಲಿ ಹದಿನೈದು ಕ್ಷೇತ್ರಕ್ಕೆ ಮಾತ್ರವೇ ಉಪಚುನಾವಣೆ ಘೋಷಣೆ ಆಗಿದ್ದು, ಆರ್.ಆರ್.ನಗರ ಮತ್ತು ಮಸ್ಕಿ ಕ್ಷೇತ್ರಗಳ ಚುನಾವಣೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವ ಕಾರಣ ಈ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ಇರುವುದಿಲ್ಲ.

By Election Date Announce For Karnatakas 15 Constituency

ಸೆಪ್ಟೆಂಬರ್ 23 ಕ್ಕೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಸೆಪ್ಟೆಂಬರ್ 30 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಅಕ್ಟೋಬರ್ 3 ನಾಮಪತ್ರ ಹಿಂಪಡೆಯಲು ಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್ 24 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಹಾಗೂ ಇಂದಿನಿಂದಲೇ ಹದಿನೈದು ಕ್ಷೇತ್ರಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಆಗಲಿದೆ.

English summary
Central Election Commission today announce date for by election in 15 assembly constituency of Karnataka. voting will happen on October 21.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X