ಉಪ ಚುನಾವಣೆ: RSS ನೀಡಿದ ಗುಪ್ತ ಮಾಹಿತಿಯಲ್ಲಿ ಬಿಜೆಪಿಗೆ ಶಾಕ್?
ಬೆಳಗಾವಿ ಲೋಕಸಭಾ ಮತ್ತು ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರ ಇನ್ನೆರಡು ದಿನದಲ್ಲಿ ಮುಗಿಯಲಿದೆ. ಇದೇ ಶನಿವಾರ (ಏ 17) ಚುನಾವಣೆ ನಡೆಯಲಿದ್ದು, ಮೇ ಎರಡರಂದು ಫಲಿತಾಂಶ ಹೊರಬೀಳಲಿದೆ.
ಆಪರೇಶನ್ ಕಮಲದ ಮೂಲಕ ಯಡಿಯೂರಪ್ಪನವರ ಸರಕಾರ ಅಧಿಕಾರಕ್ಕೆ ಬಂದ ನಂತರ ಈಗಾಗಲೇ ಹದಿನೈದು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆದಿದ್ದು, ಇದರಲ್ಲಿ ಬಿಜೆಪಿ ಹದಿಮೂರರಲ್ಲಿ ಗೆಲುವು ಸಾಧಿಸಿದೆ.
ಆಡಳಿತ ಪಕ್ಷವಾಗಿರುವ ಕಾರಣ ಸಹಜವಾಗಿಯೇ ಬಿಜೆಪಿ ಸದ್ಯದ ಮಟ್ಟಿಗೆ ಡ್ರೈವರ್ ಸೀಟ್ ನಲ್ಲಿದೆ. ಆದರೂ, ಕಳೆದ ಉಪ ಚುನಾವಣೆಗೂ, ಈಗ ನಡೆಯುತ್ತಿರುವ ಚುನಾವಣೆಯ ಚಿತ್ರಣ ಬದಲಾಗಿರುವುದರಿಂದ ಬಿಜೆಪಿಗೆ ಕಠಿಣ ಸ್ಪರ್ಧೆ ಇದೆ ಎನ್ನುವುದು ಸದ್ಯದ ಗ್ರೌಂಡ್ ರಿಪೋರ್ಟ್.
ಬಿಜೆಪಿ ಗೆಲುವಿನಲ್ಲಿ ಸದಾ ಪ್ರಮುಖ ಪಾತ್ರವನ್ನು ವಹಿಸುವ ಪಕ್ಷದ ಮಾತೃ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ, ಮೂರು ಕ್ಷೇತ್ರಗಳ ಜನರ ಮೂಡ್ ಹೇಗಿದೆ ಎನ್ನುವುದರ ಬಗ್ಗೆ ಮಾಹಿತಿಯನ್ನು ಸಿಎಂ ಬಿಎಸ್ವೈಗೆ ಮತ್ತು ವರಿಷ್ಠರಿಗೆ ನೀಡಿದೆ ಎಂದು ಹೇಳಲಾಗುತ್ತಿದೆ. ಮುಂದೆ ಓದಿ..

ದಿವಂಗತ ಸುರೇಶ್ ಅಂಗಡಿಯವರಿಗೆ ಇದ್ದ ವರ್ಚಸ್ಸು
ಬೆಳಗಾವಿಯಲ್ಲಿ ಜಾರಕಿಹೊಳಿ ಸಿಡಿ ಪ್ರಕರಣ ಬಿಜೆಪಿಗೆ ಮುಳುವಾಗುವ ಸಾಧ್ಯತೆ ಕಮ್ಮಿ. ಮತದಾರ ಸ್ಥಳೀಯ ವಿಚಾರದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ತೋರುತ್ತಿರುವುದರಿಂದ, ಜೊತೆಗೆ, ಬೆಲೆ ಏರಿಕೆಯೂ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿಲ್ಲದಿಲ್ಲ. ಇವೆಲ್ಲಕ್ಕಿಂತ ಹೆಚ್ಚಾಗಿ, ಕ್ಷೇತ್ರದಲ್ಲಿ ದಿವಂಗತ ಸುರೇಶ್ ಅಂಗಡಿಯವರಿಗೆ ಇದ್ದ ವರ್ಚಸ್ಸು ಮತ್ತು ಅವರ ಪತ್ನಿಯೇ ಕಣದಲ್ಲಿ ಇರುವುದರಿಂದ ಅನುಕಂಪದ ಅಲೆಯೂ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಲಿದೆ.

ಬೆಳಗಾವಿಯಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗೆಸ್ಸಿಗೆ ಸಾಧ್ಯವಿಲ್ಲ
ಸದ್ಯದ ಮಟ್ಟಿಗೆ ಬೆಳಗಾವಿಯಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗೆಸ್ಸಿಗೆ ಸಾಧ್ಯವಿಲ್ಲ ಎನ್ನುವ ವಾತಾವರಣವಿದೆ. ಚುನಾವಣೆಗೆ ಇನ್ನೂ ಮೂರ್ನಾಲ್ಕು ದಿನಗಳು ಇರುವುದರಿಂದ, ಇದೇ ಲಯದಲ್ಲಿ ಪ್ರಚಾರ ವೇಗವನ್ನು ಪಡೆದುಕೊಳ್ಳಬೇಕು ಎನ್ನುವ ಸೂಚನೆಯನ್ನು ಸಂಘ ಪರಿವಾರ ಬಿಜೆಪಿ ವರಿಷ್ಠರಿಗೆ ನೀಡಿದೆ ಎನ್ನುವ ಸುದ್ದಿಯಿದೆ. ಆದರೆ, ಅಸೆಂಬ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಪರಿಸ್ಥಿತಿ ತುಸು ಗಂಭೀರವಾಗಿದೆ.

ಬಸವಕಲ್ಯಾಣದಲ್ಲಿ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಕಣದಲ್ಲಿ
ಮಸ್ಕಿ ಮತ್ತು ಬಸವಕಲ್ಯಾಣದಲ್ಲಿ ಪರಿಸ್ಥಿತಿ ಬಿಜೆಪಿಗೆ ಅಷ್ಟಾಗಿ ಪೂರಕವಾಗಿಲ್ಲ. ಬಸವಕಲ್ಯಾಣದಲ್ಲಿ ದಿವಂಗತ ಶಾಸಕರ ಪತ್ನಿ ಮತ್ತು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಕಣದಲ್ಲಿ ಇರುವುದರಿಂದ ಬಿಜೆಪಿ ಇಲ್ಲಿ ಬೆವರಿಳಿಸಿ ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕಿದೆ. ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.
Recommended Video

ಮಸ್ಕಿ ಗೆಲುವು ಬಿಎಸ್ವೈಗೆ ಇನ್ನೂ ಪ್ರಮುಖ, ಕಾರಣ ವಿಜಯೇಂದ್ರ ಅಲ್ಲಿನ ಉಸ್ತುವಾರಿ
ಮಸ್ಕಿಯಲ್ಲಿ 25ಸಾವಿರ ಮತಗಳ ಅಂತರದಿಂದ ನಾವು ಗೆಲುವು ಸಾಧಿಸುತ್ತೇವೆ ಎನ್ನುವ ವಿಶ್ವಾಸದ ಮಾತನ್ನು ಯಡಿಯೂರಪ್ಪ ಆಡಿದ್ದಾರೆ. ಆದರೆ, ಅಲ್ಲಿ ಗೆಲುವು ಅಷ್ಟೇನೂ ಸುಲಭವಿಲ್ಲ. ಮಸ್ಕಿಯಲ್ಲಿನ ಗೆಲುವು ಬಿಎಸ್ವೈಗೆ ಇನ್ನೂ ಪ್ರಮುಖವಾಗಿರಲು ಕಾರಣ ಅವರ ಪುತ್ರ ವಿಜಯೇಂದ್ರ ಅಲ್ಲಿನ ಉಸ್ತುವಾರಿ. ಒಟ್ಟಿನಲ್ಲಿ RSS ನೀಡಿದ ಗುಪ್ತ ಮಾಹಿತಿಯ ಪ್ರಕಾರ, ಮಸ್ಕಿ ಮತ್ತು ಬಸವಕಲ್ಯಾಣದಲ್ಲಿ ಫಲಿತಾಂಶ ಹೇಗೂ ತಿರುಗಬಹುದು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications