ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಟೊಪ್ಪಿ ಧರಿಸಲು ಯಾರಿಗೆ ಹುಟ್ಟಿರಬೇಕು'? ಸಿ.ಟಿ. ರವಿ ಟ್ವೀಟ್

|
Google Oneindia Kannada News

ಬೆಂಗಳೂರು: ಉಪಚುನಾವಣೆಯ ಬಹಿರಂಗ ಪ್ರಚಾರದ ಅಂತಿಮ ದಿನ ಬಿಜೆಪಿಯ ಸಿ.ಟಿ. ರವಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರಿತು ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದಾರೆ.

ಪಕ್ಷ ನಿಂದನೆ, ವೈಯಕ್ತಿಕ ನಿಂದನೆ, ನಾ ಮೇಲು- ತಾ ಮೇಲು ಎಂದು ಮಾತನಾಡುತ್ತಿರುವ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ "ಯಾರಿಗೆ ಹುಟ್ಟಿರಬೇಕು" ಎಂಬಂತಹ ಕೀಳು ಪದಗಳನ್ನು ಬಳಸುವ ಮೂಲಕ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿದ್ದಾರೆ.

 ಬೊಮ್ಮಾಯಿ- ಸಿದ್ದರಾಮಯ್ಯ- ಕುಮಾರಸ್ವಾಮಿ ನಡುವೆ 'ಕುರಿ - ಕಂಬಳಿ ಫೈಟ್' ಜೋರು! ಬೊಮ್ಮಾಯಿ- ಸಿದ್ದರಾಮಯ್ಯ- ಕುಮಾರಸ್ವಾಮಿ ನಡುವೆ 'ಕುರಿ - ಕಂಬಳಿ ಫೈಟ್' ಜೋರು!

ಉಪಚುನಾವಣಾ ಸಮಯದಲ್ಲಿ ಕಂಬಳಿಯ ವಿಷಯದಲ್ಲಿ ಭಾರಿ ಫೈಟ್ ನಡೆದಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ಮಧ್ಯೆ ಕುರಿ ಕಂಬಳಿ ಜಗಳ ಜೋರಾಗಿ ನಡೆಯುತ್ತಿದೆ.

By elections: CT Ravi Made Derogatory Tweet on Siddaramaiah on Last Day of Campaign

ಈ ಮಧ್ಯೆ ಟ್ವೀಟ್ ಮಾಡಿರುವ ಸಿ.ಟಿ. ರವಿ, "ಕಂಬಳಿ ಹಾಕಲು ಕುರುಬ ಜಾತಿಯವರೇ ಆಗಬೇಕು ಎಂಬ ನಿಮ್ಮ ವಾದದ ಪ್ರಕಾರ ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೇ?'' ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪೂರಕವಾಗಿ ಸಿದ್ದರಾಮಯ್ಯ ಅವರು ಮುಸ್ಲಿಂ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಟೊಪ್ಪಿ ಧರಿಸಿ, ಪುಸ್ತಕ ಓದುತ್ತಾ ಕುಳಿತಿರುವ ಫೋಟೋವೊಂದನ್ನು ಟ್ಯಾಗ್ ಮಾಡಿದ್ದಾರೆ.

By elections: CT Ravi Made Derogatory Tweet on Siddaramaiah on Last Day of Campaign

ಸಿ.ಟಿ. ರವಿ ಮತ್ತೊಂದು ಟ್ವೀಟ್‌ನಲ್ಲಿ "ಕುಲಕುಲವೆಂದು ಬಡಿದಾಡದಿರಿ, ನಿಮ್ಮ ಕುಲದ ನೆಲೆಯನ್ನೇನಾದರೂ ಬಲ್ಲಿರಾ ಬಲ್ಲಿರಾ..

ದಾಸ ಶ್ರೇಷ್ಟ ಕನಕದಾಸರ ಈ ಮಾತುಗಳನ್ನು ಎಂದೋ ಮರೆತುಬಿಟ್ಟು ಕುಲಗಳನ್ನು ಒಡೆದು, ಸಮಾಜವನ್ನು ಅಸ್ಥಿರಗೊಳಿಸಿ, ತಮ್ಮ ಬೇಳೆ ಬೇಯಿಸಿಕೊಳ್ಳುವುದೇ ರಾಜಕೀಯ ಎಂದು ಭಾವಿಸಿದ್ದು ದುರಂತ''.

English summary
Hanagal, Sindagi By elections: CT Ravi Made Derogatory Tweet on Congress Leader Siddaramaiah on Last Day of Campaign. Read on.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X