ಕೋಟ್ಯಧಿಪತಿಯಾಗಿದ್ದರೂ ಬಿಎಸ್ವೈ ಪುತ್ರನ ಬಳಿ ಸ್ವಂತ ಕಾರಿಲ್ಲ: ವಿಜಯೇಂದ್ರ ಆಸ್ತಿ ವಿವರ ಇಲ್ಲಿದೆ
ಬೆಂಗಳೂರು, ಏಪ್ರಿಲ್ 18: ಕರ್ನಾಟಕ ವಿಧಾನಸಭಾ ಚುನಾವಣೆ ಈ ಬಾರಿ ಹಲವು ವಿಶೇಷತೆಗಳಿಗೆ ಕಾರಣವಾಗಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ಹಿಂದೆ ಸರಿದ್ದಾರೆ. ಬದಲಾಗಿ ತಮ್ಮ ಪುತ್ರನನ್ನು ಈ ಬಾರಿಯ ಚುನಾವಣಾ ಕಣಕ್ಕಿಳಿಸಿದ್ದಾರೆ.
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತಮ್ಮ ಕ್ಷೇತ್ರ ಶಿಕಾರಿಪುರವನ್ನು ಪುತ್ರ ಬಿ.ವೈ ವಿಜಯೇಂದ್ರಗೆ ಬಿಟ್ಟು ಕೊಟ್ಟಿದ್ದಾರೆ. ಶಿಕಾರಿಪುರ ಸ್ಪರ್ಧಿಸುವ ಮೂಲಕ ಬಿ.ವೈ ವಿಜಯೇಂದ್ರ ಮೊದಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಪಕ್ಷ ಸಂಘಟನೆಯ ಮೂಲಕ ತಮ್ಮ ಛಾಪು ಹೆಚ್ಚಿಸಿಕೊಂಡಿದ್ದ ವಿಜಯೇಂದ್ರ , ಇದೀಗ ವಿಧಾನಸೌಧ ಪ್ರವೇಶಿಸಲು ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ.

ತಂದೆ ದಿಗ್ವಿಜಯ ಸಾಧಿಸಿರುವ ಕ್ಷೇತ್ರದಿಂದಲೇ ಬಿ.ವೈ ವಿಜಯೇಂದ್ರ ತಮ್ಮ ಮೊದಲ ಚುನಾವಣೆ ಎದುರಿಸುತ್ತಿದ್ದು, ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಏಪ್ರಿಲ್ 17ರಂದು ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿರುವ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ, 47 ವರ್ಷದ ವಿಜಯೇಂದ್ರ ಅವರ ಅವರ ಆಸ್ತಿ ವಿವರದ ಬಗ್ಗೆ ಎಲ್ಲರಲ್ಲೂ ಕುತೂಹಲವಿದ್ದು, ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ವಿಜಯೇಂದ್ರ ತಮ್ಮ ಆಸ್ತಿ ವಿವರ ಸಲ್ಲಿಸಿದ್ದಾರೆ.
ಸ್ವಂತ ಕಾರಿಲ್ಲದ ಬಿ.ವೈ ವಿಜಯೇಂದ್ರ ಆಸ್ತಿ ವಿವರ
ಬಿ.ವೈ ವಿಜಯೇಂದ್ರ ಅವರ ಅಫಿಡವಿಟ್ನಲ್ಲಿ ಅಚ್ಚರಿಯ ವಿಚಾರವೊಂದು ತಿಳಿದು ಬಂದಿದೆ. ಬಿ.ವೈ ವಿಜಯೇಂದ್ರ ಹಾಗೂ ಪತ್ನಿ ಪ್ರೇಮಾ ವಿಜಯೇಂದ್ರ ಕೋಟ್ಯಧಿಪತಿಗಳಾಗಿದ್ದರೂ ಸ್ವಂತ ಕಾರಿಲ್ಲ ಎನ್ನಲಾಗಿದೆ. ಬಿ.ವೈ ವಿಜಯೇಂದ್ರ ದಂಪತಿ ಒಟ್ಟು 126.18 ಕೋಟಿ ರೂ. ಮೌಲ್ಯದ ಆಸ್ತಿಯ ಒಡೆಯರಾಗಿದ್ದಾರೆ.

ವಿಜಯೇಂದ್ರ ಅವರ ಹೆಸರಿನಲ್ಲಿ 46.82 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ ಹಾಗೂ ಅವರ ಪತ್ನಿ ಪ್ರೇಮಾ ವಿಜಯೇಂದ್ರ ಅವರ ಹೆಸರಿನಲ್ಲಿ 7.85 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ ಇದೆ. ಇನ್ನು ಈ ದಂಪತಿ ಪ್ರಸ್ತುತ 70.11 ಕೋಟಿ ರೂ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ ಎನ್ನಲಾಗಿದೆ.
ಶಿಕಾರಿಪುರದಲ್ಲಿ ಕೃಷಿ ಭೂಮಿ, ದೊಡ್ಡಬಳ್ಳಾಪುರ, ರಾಮನಗರ, ಶಿಕಾರಿಪುರ, ಶಿವಮೊಗ್ಗ, ಕಲಬುರಗಿ ಮತ್ತು ಬೆಂಗಳೂರಿನಲ್ಲಿ ಕೃಷಿಯೇತರ ಭೂಮಿ ಜೊತೆಗೆ ಏಳು ಮನೆಗಳಿದ್ದು, ಒಟ್ಟು 1.75 ಲಕ್ಷ ರೂಪಾಯಿ ಮೌಲ್ಯದ ಟ್ರ್ಯಾಕ್ಟರ್ ಹೊಂದಿದ್ದಾರೆ. ವಿಜಯೇಂದ್ರ ಅವರ ಬಳಿ 1.34 ಕೆಜಿ ಚಿನ್ನ ಹಾಗೂ ಅವರ ಪತ್ನಿ ಬಳಿಕ 1.25 ಕೆಜಿ ಚಿನ್ನಾಭರಣ ಸೇರಿದಂತೆ ಒಟ್ಟು ದಂಪತಿ ಬಳಿ 2.29 ಕೋಟಿ ರೂಪಾಯಿ ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ವಸ್ತುಗಳು ಇದೆ ಎಂದು ನಾಮಪತ್ರದಲ್ಲಿ ಸಲ್ಲಿಸಿದ್ದಾರೆ.
ಇನ್ನು ಲೋಕಾಯುಕ್ತದಲ್ಲಿ ದಾಖಲಾದ ಪ್ರಕರಣ ಸೇರಿದಂತೆ ಒಟ್ಟು ಬಿ.ವೈ ವಿಜಯೇಂದ್ರ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದೆ ಎನ್ನುವುದನ್ನು ನಾಮಪತ್ರ ಸಲ್ಲಿಕೆಯಲ್ಲಿ ವಿವರಿಸಿದ್ದಾರೆ.
ಶಿಕಾರಿಪುರ ಬಿಜೆಪಿ ಭದ್ರಕೋಟೆಯಾಗಿದ್ದು, ಮಾಜಿ ಸಿ.ಎಂ ಯಡಿಯೂರಪ್ಪ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಸತತ ಎಂಟು ಬಾರಿ ಗೆಲುವು ಸಾಧಿಸಿದ್ದರು. ಹೀಗಾಗಿ ಕ್ಷೇತ್ರ ಉಳಿಸಿಕೊಳ್ಳಲು ಯಡಿಯೂರಪ್ಪ ಪುತ್ರ ಮೊದಲ ಬಾರಿಗೆ ಕಣಕ್ಕಿಳಿಯುತ್ತಿದ್ದು, ಬಿ.ವೈ ವಿಜಯೇಂದ್ರ ತಮ್ಮ ಗೆಲುವಿಗಾಗಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಮತದಾರರನ್ನು ತಮ್ಮತ್ತ ಸೆಳೆಯುತ್ತಿದ್ದಾರೆ.
ಇನ್ನು ಕರ್ನಾಟಕ ವಿಧಾನಸಭಾ ಚುನಾವಣೆಗೆ ಶಿಕಾರಿಪುರದಿಂದ ಸ್ಪರ್ಧಿಸಲು ಬಹುತೇಕ ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ಘೋಷಣೆಯಾಗಿದೆ. ಬಿ.ವೈ ವಿಜಯೇಂದ್ರ ಬಿಜೆಪಿಯಿಂದ ಸ್ಫರ್ಧಿಸುತ್ತಿದ್ದರೆ, ಜಿ.ಬಿ ಮಾಲತೇಶ ಕಾಂಗ್ರೆಸ್ನಿಂದ ಕಣಕ್ಕಿಳಿದಿದ್ದಾರೆ. ಇನ್ನು ಸುಧಾಕರ್ ಶೆಟ್ಟಿ ಜೆಡಿಎಸ್ ಅಭ್ಯರ್ಥಿಯಾಗಿದ್ದು, ಚಂದ್ರಕಾಂತ್ ರೇವಣ್ಣಕರ ಎಎಪಿಯ ಅಭ್ಯರ್ಥಿಯಾಗಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications