"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು''
ಕರ್ನಾಟಕದಲ್ಲಿ ಶೋಷಿತರ ಅಭಿವೃದ್ಧಿಯ ಹೆಸರಲ್ಲಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ, ದಲಿತರಿಗೆ ಮೀಸಲಿಟ್ಟ ಹಣದಲ್ಲಿ ಕೋಟ್ಯಾಂತರ ರೂಪಾಯಿ ದುರ್ಬಳಕೆ ಮಾಡಿಕೊಂಡಿದೆ. ಅಸಾಮರ್ಥ್ಯ ಮುಚ್ಚಿಕೊಳ್ಳಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳ ಬೆನ್ನಿಗೆ ನಯವಾಗಿ ಇರಿಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ದೂರಿದ್ದಾರೆ.
ಇಂದು ಎಕ್ಸ್ ಪೋಸ್ಟ್ ಮಾಡಿರುವ ಬಿ.ವೈ.ವಿಜಯೇಂದ್ರ ಅವರು, ಪ್ರಸ್ತಕ ಸಾಲಿನ (2026-27) ಬಜೆಟ್ನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ (SCSP) ಮತ್ತು ಬುಕಟ್ಟು ಉಪಯೋಜನೆ (TSP) ಅಡಿಯಲ್ಲಿ ಮೀಸಲಿಟ್ಟ ಒಟ್ಟು 44,632 ಕೋಟಿ ರೂಪಾಯಿಯಲ್ಲಿ ಬರೋಬ್ಬರಿ 14,200 ಕೋಟಿ ರೂ.ನಷ್ಟು ಹಣವನ್ನು ಪಂಚ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ ಎಂದು ಅವರು ದೂರಿದರು.

ಹಣ ಹೊಂದಿಸುವಲ್ಲಿ ಸರ್ಕಾರ ವಿಫಲ
ಕಳೆದ ಮೂರು ವರ್ಷಗಳಲ್ಲಿ ಸುಮಾರು 53,000 ಕೋಟಿ ರೂ.ಗಳಿಗೂ ಅಧಿಕ ಪರಿಶಿಷ್ಟ ಜಾತಿ, ಪಂಗಡಗಳ ಹಕ್ಕಿನ ಹಣವನ್ನು ಬೇರೆಡೆಗೆ ತಿರುಗಿಸಿರುವುದು ಈ ಕಾಂಗ್ರೆಸ್ ಸರ್ಕಾರದ "ದಲಿತ ವಿರೋಧಿ" ಮನಸ್ಥಿತಿಗೆ ಸಾಕ್ಷಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಶೋಷಿತರ ಹಣ ವರ್ಗಾಯಿಸಿ, ನಿಮ್ಮ ಗ್ಯಾರಂಟಿಗಳಿಗೆ ಹಣ ಹೊಂದಿಸಲಾಗದ ವೈಫಲ್ಯಗಳನ್ನು ಮುಚ್ಚಿಕೊಳ್ಳುವುದೇ ನಿಮ್ಮ ಸಾಮಾಜಿಕ ನ್ಯಾಯವೇ? ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.
ಒಂದೆಡೆ ದಲಿತರ ಕಲ್ಯಾಣದ ನಿಧಿಯನ್ನು ಲೂಟಿ ಮಾಡುತ್ತಿರುವ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಇನ್ನೊಂದೆಡೆ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷರಿಗೆ ತಿಂಗಳಿಗೆ 5.98 ಲಕ್ಷ ರೂ. ವೇತನ ನೀಡುವ ಮೂಲಕ ತೆರಿಗೆದಾರರ ಹಣ ಪೋಲು ಮಾಡುತ್ತಿದೆ. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗಿಂತಲೂ ದುಪ್ಪಟ್ಟು ಸಂಬಳವನ್ನು ತನ್ನ ಪಕ್ಷದ ಕಾರ್ಯಕರ್ತರಿಗೆ ಹಂಚುತ್ತಿರುವ ನಿಮಗೆ ಯಾವ ನೈತಿಕತೆ ಉಳಿದಿದೆ. ಇದು ಕೇವಲ ಜನರ ಹಣದ ದುರುಪಯೋಗ ಮಾತ್ರವಲ್ಲ, ನಿಮ್ಮ ಅಧಿಕಾರದ ದರ್ಪ, ದೌಲತ್ತುಗಳ ನಿರ್ಲಜ್ಜ ಪ್ರದರ್ಶನ! ನಿಮ್ಮ ಈ ಎಲ್ಲ ಕರ್ಮಕಾಂಡಗಳಿಗೆ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
ಇದೇ ವಿಚಾರವಾಗಿ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಆರ್.ಅಶೋಕ್ ಅವರು, ಪರಿಶಿಷ್ಟರಿಗೆಲ್ಲಿದೆ SCSP/TSP ಅನುದಾನ ಗ್ಯಾರೆಂಟಿ? 4 ವರ್ಷಗಳಲ್ಲಿ 53,000 ಕೋಟಿ ರೂಪಾಯಿ ದಲಿತರ ಹಣವನ್ನು ಕಾಂಗ್ರೆಸ್ ಸರ್ಕಾರ ವಂಚಿಸಿದೆ ಎಂದು ಯಾವ ಯಾವ ವರ್ಷ ಎಷ್ಟು ಹಣ ಬಳಕೆ ಆಗಿದೆ ಎಂದು ಅವರು ಲೆಕ್ಕ ಕೊಟ್ಟಿದ್ದಾರೆ.
ದಲಿತರಿಗೆ ಸಿದ್ದರಾಮಯ್ಯರ ಕೊಡುಗೆ ಏನು?
2023-24ನೇ ಸಾಲಿನಲ್ಲಿ 11,114 ಕೋಟಿ ರೂಪಾಯಿ 2024-25ನೇ ಸಾಲಿನಲ್ಲಿ 14,282.38 ಕೋಟಿ ರೂಪಾಯಿ, 2025-26ನೇ ಸಾಲಿನಲ್ಲಿ 13,433 ಕೋಟಿ ರೂಪಾಯಿ, 2026-27ನೇ ಸಾಲಿನಲ್ಲಿ 14,198.93 ಕೋಟಿ ರೂಪಾಯಿ ವಂಚಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ದಲಿತರು, ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ನಿಮ್ಮ ಕೊಡಗೆಯಾದರೂ ಏನು ಸ್ವಾಮಿ? ದಲಿತರು, ಹಿಂದುಳಿದ ವರ್ಗಗಳ ಹೆಸರಿನಲ್ಲಿ ಅಹಿಂದ ರಾಜಕೀಯ ಮಾಡಿ, ಅವರು ವೋಟು ಗಿಟ್ಟಿಸಿಕೊಂಡು ಅಧಿಕಾರದ ಮೋಜು ಮಾಡಿದ್ದು ಬಿಟ್ಟರೆ ತಮ್ಮ ಸಾಧನೆಯಾದರೂ ಏನು ಸ್ವಾಮಿ? ಎಂದು ಲೇವಡಿ ಮಾಡಿದರು.
ದಿವಂಗತ ಮಾಜಿ ಸಿಎಂ ದೇವರಾಜು ಅರಸು ಅವರ ಮುಖ್ಯಮಂತ್ರಿ ಅಧಿಕಾರಾವಧಿಯ ರೆಕಾರ್ಡ್ ಮುರಿದಿದ್ದೀರಿ. ಆದರೆ ನಿಮ್ಮ ರಾಜಕೀಯ ಜೀವನದ ಅತ್ಯಂತ ದೊಡ್ಡ ದಾಖಲೆ ಅಂದರೆ ಪರಿಶಿಷ್ಟರ ಹಣವನ್ನು ಅವರ ಕಲ್ಯಾಣಕ್ಕೆ ವಿನಿಯೋಗಿಸದೆ ಬೇರೆ ಕಾರ್ಯಗಳಿಗೆ ಬಳಸಿ ಫಲಾನುಭವಿಗಳಿಗೆ ವಂಚಿಸಿದ್ದು ಎಂದರು.
ಎಷ್ಟು ವರ್ಷ ಕುರ್ಚಿಯಲ್ಲಿ ಕೂತಿದ್ದೀರಿ ಎನ್ನುವ ರೆಕಾರ್ಡ್ ಗಿಂತ, ಕುರ್ಚಿಯಲ್ಲಿದ್ದಾಗ ಹಿಂದುಳಿದ ವರ್ಗಗಳಿಗೆ ಏನು ಮಾಡಿದ್ದೀರಿ ಎನ್ನುವ ಟ್ರ್ಯಾಕ್ ರೆಕಾರ್ಡ್ ಮುಖ್ಯ. ಪರಿಶಿಷ್ಟರ ಕಲ್ಯಾಣಕ್ಕೆ ವಿನಿಯೋಗವಾಗಬೇಕಾದ ಹಣವನ್ನು ಕಬಳಿಸಿ ಅನ್ಯಾಯ ಮಾಡುತ್ತಿರುವುದು ಈ ದಲಿತ ವಿರೋಧಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಂದು ಅವರು ಕಿಡಿ ಕಾರಿದ್ದಾರೆ.
-
Samarth Shamanur: ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಫೈಟ್ ಅಂತ್ಯ: ಶಾಮನೂರು ಕುಟುಂಬದ ಕುಡಿ ಸಮರ್ಥ್ ಕಣಕ್ಕೆ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ













Click it and Unblock the Notifications