ಬಿಜೆಪಿ- ಜೆಡಿಎಸ್‍ನಿಂದ 30 ಜನ ಶಾಸಕರು ಕಾಂಗ್ರೆಸ್ಸಿಗೆ: ನಿಮ್ಮ 136 ಶಾಸಕರನ್ನ ಉಳಿಸಿಕೊಳ್ಳಿ ಎಂದು ವಿಜಯೇಂದ್ರ ಸವಾಲ್‌

ಬೆಂಗಳೂರು, ಜನವರಿ 21: ಮುಡಾ ವಿಚಾರದಲ್ಲಿನ ಬೆಳವಣಿಗೆಗಳು, ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಆಗುವ ಕುರಿತ ಹಪಾಹಪಿ, ಇವರ ಗುದ್ದಾಟ, ಜಗ್ಗಾಟ ಬಹಿರಂಗವಾಗಿದೆ. ದಿನನಿತ್ಯ ಟಿವಿ, ಪತ್ರಿಕೆಗಳಲ್ಲಿ ಇದನ್ನು ನೋಡುತ್ತಿದ್ದೇವೆ. ಅದನ್ನು ಉಳಿಸಿಕೊಂಡರೆ ಸಾಕಾಗಿದೆ. ಅಭಿವೃದ್ಧಿಗೆ ಅನುದಾನವಿಲ್ಲದೇ ಆಡಳಿತ ಪಕ್ಷದ ಶಾಸಕರೇ ಪರದಾಡುತ್ತಿದ್ದಾರೆ. ಇದರ ಮಧ್ಯೆ ಬಿಜೆಪಿ- ಜೆಡಿಎಸ್‍ನಿಂದ 30 ಜನ ಶಾಸಕರು ಕಾಂಗ್ರೆಸ್ಸಿಗೆ ಕರೆದುಕೊಂಡು ಇವರೇನು ಕಡಿಯಲಿಕ್ಕಿದೆ ಎಂದು ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ಕಾಂಗ್ರೆಸ್ ನವರು ಇರುವ ಶಾಸಕರನ್ನು ಉಳಿಸಿಕೊಳ್ಳಲಿ. ಅಭಿವೃದ್ಧಿ ಬಗ್ಗೆ ಗಮನ ಕೊಡಲಿ. ನಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಹಣ ಕೊಡಲಿ. 136 ಶಾಸಕರು ಈಗಾಗಲೇ ಆಡಳಿತ ಪಕ್ಷದಲ್ಲಿದ್ದು, ಇನ್ನು ಬಿಜೆಪಿ- ಜೆಡಿಎಸ್‍ನಿಂದ ಕರೆದುಕೊಂಡು ಏನು ಮಾಡಲಿದ್ದಾರೆ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಎಂ.ಬಿ.ಪಾಟೀಲ್ ಆದಿಯಾಗಿ ಹೇಳಿಕೆ ಕೊಡುವ ಎಲ್ಲರಿಗೂ ಎಚ್ಚರಿಕೆ ಇರಬೇಕು. ಮೊದಲು ಅವರು ಇರುವ ಶಾಸಕರನ್ನು ಉಳಿಸಿಕೊಳ್ಳಲಿ ಎಂದು ಸವಾಲೆಸೆದರು.

BY Vijayendra challenges to retain 136 Congress MLAs

ಪಕ್ಷದ ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡಲು ಬಂದಿದ್ದೇನೆ. ಕೆಲಸ ಮಾಡುತ್ತಿದ್ದೇನೆ. ಕೆಲಸ ಇಲ್ಲದೇ ಮಾತನಾಡುವುದರ ಕುರಿತು ಹೇಳಿಕೆ ಕೊಡಲು ಹೋಗುವುದಿಲ್ಲ. ರಾಜ್ಯದ ಕಾನೂನು- ಸುವ್ಯವಸ್ಥೆ ಕುಸಿತದಿಂದ ಪೊಲೀಸ್ ವ್ಯವಸ್ಥೆ ಬಗ್ಗೆ ಜನತೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.

ಹೊನ್ನಾವರದಲ್ಲಿ ಗೋವಿನ ರುಂಡ ಕತ್ತರಿಸಿ, ಅಮಾನುಷ- ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಅದರ ಜೊತೆಗೇ ಬಿಜಾಪುರದಲ್ಲಿ ಹಾಡಹಗಲಲ್ಲೇ ವ್ಯಕ್ತಿಯನ್ನು ಥಳಿಸಿದ ಘಟನೆ ನಡೆದಿದೆ ಎಂದು ಕಳವಳ ವ್ಯಕ್ತಪಡಿಸಿದರು. ಈಚೆಗೆ ಚಾಮರಾಜಪೇಟೆಯಲ್ಲೂ ಹಸುವಿನ ಕೆಚ್ಚಲು ಕತ್ತರಿಸಿದ ಘಟನೆ ನಡೆದಿತ್ತು. ಅದು ರಾಜ್ಯಾದ್ಯಂತ ಮಾತ್ರವಲ್ಲದೆ, ದೇಶಾದ್ಯಂತ ಸುದ್ದಿಯಾಗಿದೆ ಎಂದು ಗಮನ ಸೆಳೆದರು.

ಕಾನೂನು- ಸುವ್ಯವಸ್ಥೆ ಸರಿಯಾಗಿದೆ ಎಂಬಂತೆ ರಾಜ್ಯದ ಗೃಹ ಸಚಿವರು ಬಿಂಬಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಈ ಕಾಂಗ್ರೆಸ್ ಸರಕಾರವು ಎಲ್ಲೋ ಒಂದು ಕಡೆ ಈ ಥರ ಘಟನೆಗಳು ನಡೆದಾಗ ಮೃದು ಧೋರಣೆ ಅನುಸರಿಸುತ್ತದೆ. ದೇಶದ್ರೋಹಿಗಳು, ಹಿಂದೂ ವಿರೋಧಿ ಶಕ್ತಿಗಳು ರಾಜ್ಯದಲ್ಲಿ ಕೆಲಸ ಮಾಡುತ್ತಿದ್ದು, ಇವರಿಗೆ ಭಯವೇ ಇಲ್ಲವಾಗಿದೆ ಎಂದು ಟೀಕಿಸಿದರು.

ರಾಜ್ಯ ಸರಕಾರ, ಮುಖ್ಯಮಂತ್ರಿಗಳು, ಗೃಹ ಸಚಿವರು ಎಚ್ಚತ್ತುಕೊಳ್ಳಬೇಕಿದೆ ಎಂದು ಆಗ್ರಹಿಸಿದರು. ಒಂದೆಡೆ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ. ಇನ್ನೊಂದೆಡೆ ರಾಜ್ಯದಲ್ಲಿ ಕೋಮು ಸೌಹಾರ್ದತೆ ಹಾಳಾಗುವ ವಾತಾವರಣ ನಿರ್ಮಾಣವಾಗುತ್ತಿದೆ. ಇದರ ಕುರಿತು ಗೃಹ ಸಚಿವರು, ಮುಖ್ಯಮಂತ್ರಿಗಳು ಈಗಲಾದರೂ ಎಚ್ಚತ್ತುಕೊಳ್ಳಲಿ ಎಂದು ಒತ್ತಾಯಿಸಿದರು.

ಈ ಸರಕಾರ ಬಂದ ಮೇಲೆ ಕಳೆದೊಂದು ವರ್ಷದಲ್ಲಿ ಈ ರೀತಿಯ ಘಟನೆ ನಡೆಯುತ್ತಿದೆ. ಗೋಹತ್ಯೆ ನಿಷೇಧ ಸಂಬಂಧ ರಾಜ್ಯ ಸರಕಾರದ ನಿಲುವು ಬಯಲಾಗಿದೆ. ಮತ್ತೊಂದು ಕಡೆ ಬಿಜಾಪುರದಲ್ಲಿ ಕಾರ್ಮಿಕನನ್ನು ಥಳಿಸಿದ್ದು, ಮನುಷ್ಯತ್ವ ಇರುವವರು ಈ ರೀತಿ ನಡೆದುಕೊಳ್ಳಲು ಸಾಧ್ಯವಿಲ್ಲ ಎಂದು ವಿಶ್ಲೇಷಿಸಿದರು. ದುಷ್ಟರನ್ನು ಒದ್ದು ಒಳಗೆ ಹಾಕಿ ಕಾನೂನು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+