ಬಳ್ಳಾರಿ ಬ್ಯಾನರ್ ಘರ್ಷಣೆ; ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ಸೂಕ್ತ ಭದ್ರತೆಗೆ ಬಿ ವೈ ವಿಜಯೇಂದ್ರ ಆಗ್ರಹ
ಬೆಂಗಳೂರು: ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ನಿನ್ನೆಯ ಘಟನೆ ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯವಾಗಿದೆ, ಸದರಿ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ. ಈ ಕೂಡಲೇ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಅವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಒತ್ತಾಯಿಸುವೆ. ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ತನಿಖೆ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.
ಈ ಕುರಿತು ಎಕ್ಸ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರು ಬಿ ವೈ ವಿಜಯೇಂದ್ರ ಅವರು, ಜನಾರ್ಧನ ರೆಡ್ಡಿ ಮತ್ತವರ ಕುಟುಂಬವನ್ನು ಗುರಿಯನ್ನಾಗಿಸಿಕೊಂಡು ನಡೆದಿರುವ ಈ ಘಟನೆಗೆ ಮಹರ್ಷಿ ವಾಲ್ಮೀಕಿ ಪ್ರತಿಮೆಯ ಉದ್ಘಾಟನೆಯ ಕಾರ್ಯಕ್ರಮದ ಬ್ಯಾನರ್ ಅಳವಡಿಸುವುದನ್ನು ನೆಪವಾಗಿಸಿಕೊಳ್ಳಲಾಗಿದೆ. ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿದಿಲ್ಲ. ನಾಗರಿಕ ಸಮಾಜ ನೆಮ್ಮದಿಯಾಗಿ ಬದುಕುವ ವಾತಾವರಣವನ್ನು ವಿಚಲಿತಗೊಳಿಸಿ, ಭಯಗ್ರಸ್ಥ ನಗರವನ್ನಾಗಿಸಲು ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ಅವರ ಬೆಂಬಲಿಗರು ದುಷ್ಕೃತ್ಯಕ್ಕೆ ಇಳಿದಂತಿದೆ.

ಜನಾರ್ದನ ರೆಡ್ಡಿಯವರು ಬಿಜೆಪಿಗೆ ಮರು ಸೇರ್ಪಡೆಯಾದನಂತರ ಸ್ಥಳೀಯವಾಗಿ ಪಕ್ಷಸಂಘಟನೆ ಪ್ರಬಲವಾಗುತ್ತಿರುವುದು, ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಅವರ ನಡುವಿನ ಬಾಂಧವ್ಯ ಹಿಂದಿನಂತೆ ಬೆಸೆದಿರುವುದು ರಾಜಕೀಯ ದುಷ್ಟರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ವಿಪರ್ಯಾಸವೆಂದರೆ ಸ್ಥಳೀಯ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಛೇರಿಗಳಾಗಿ ಮಾರ್ಪಟ್ಟಿವೆ. ಸ್ಥಳೀಯ ಪೊಲೀಸರು ಕಾಂಗ್ರೆಸ್ ಕೈಗೊಂಬೆಯಾಗಿದ್ದಾರೆ, ಪೊಲೀಸರು ಮುನ್ನೆಚ್ಚರಿಕೆ ಕ್ರಮ ವಹಿಸಿದ್ದರೆ ಈ ದುಷ್ಕೃತ್ಯವನ್ನು ತಡೆಯಬಹುದಿತ್ತು.
ಜನಾರ್ದನ ರೆಡ್ಡಿ ಭದ್ರತಾ ವ್ಯವಸ್ಥೆ: ಸುಧಾಕರ ರೆಡ್ಡಿ ಆಗ್ರಹ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಶಾಸಕ ಜನಾರ್ದನ ರೆಡ್ಡಿಯವರಿಗೆ ಸಮರ್ಪಕ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ಆಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಕಾಪಾಡುವಲ್ಲಿ ಈ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ. ಜನಾರ್ದನ ರೆಡ್ಡಿಯವರ ಮೇಲೆ ನಡೆದ ಹಲ್ಲೆಯನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ. ಕರ್ನಾಟಕದಲ್ಲಿ ಮಾದಕವಸ್ತು (ಡ್ರಗ್) ಮಾಫಿಯ ಹೆಚ್ಚಾಗಿದೆ. ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕರ್ನಾಟಕದಲ್ಲಿ ಗೂಂಡಾರಾಜ್ಯ ತಾಂಡವವಾಡುತ್ತಿದೆ. ಕಾಂಗ್ರೆಸ್ ಪ್ರೇರಿತ ಗೂಂಡಾ ವ್ಯವಸ್ಥೆಯಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಶಾಸಕರೇ ಪೊಲೀಸ್ ಠಾಣೆಗೆ ತೆರಳಿ ಬೆದರಿಸಿ ಕಾನೂನನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ಜನಾರ್ದನ ರೆಡ್ಡಿಯವರ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸುವುದಾಗಿ ಅವರು ತಿಳಿಸಿದ್ದಾರೆ. ಹಲ್ಲೆ ಆರೋಪಿಗಳನ್ನು ಮತ್ತು ಇದರ ಹಿಂದಿರುವ ದುಷ್ಟ ಶಕ್ತಿಗಳನ್ನು ತಕ್ಷಣವೇ ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಪರಮೇಶ್ವರ್ ಅವರನ್ನು ಆಗ್ರಹಿಸಿದ್ದಾರೆ. ಈ ಸಮಸ್ಯೆಯನ್ನು ಸಿದ್ದರಾಮಯ್ಯನವರು ತಕ್ಷಣವೇ ಬಗೆಹರಿಸಬೇಕು. ಇದಕ್ಕಾಗಿ ಜನಾರ್ದನ ರೆಡ್ಡಿಯವರಿಗೆ ಭದ್ರತಾ ವ್ಯವಸ್ಥೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. ಇಲ್ಲವಾದರೆ ಮುಂದೆ ಆಗುವ ಸಮಸ್ಯೆಗಳಿಗೆ ಸಿದ್ದರಾಮಯ್ಯರ ನೇತೃತ್ವದ ಸರಕಾರವೇ ಹೊಣೆ ಹೊರಬೇಕು ಎಂದು ಎಚ್ಚರಿಸಿದ್ದಾರೆ.
ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ನಿನ್ನೆಯ ಘಟನೆ ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯವಾಗಿದೆ, ಸದರಿ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುವೆ.
— Vijayendra Yediyurappa (@BYVijayendra) January 2, 2026
ಜನಾರ್ಧನ ರೆಡ್ಡಿ ಮತ್ತವರ ಕುಟುಂಬವನ್ನು ಗುರಿಯನ್ನಾಗಿಸಿಕೊಂಡು ನಡೆದಿರುವ ಈ ಘಟನೆಗೆ ಮಹರ್ಷಿ ವಾಲ್ಮೀಕಿ…
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ












Click it and Unblock the Notifications