Get Updates
Get notified of breaking news, exclusive insights, and must-see stories!

ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ ಹಲ್ಲೆ; ಅಧಿಕಾರಿ ಅಮಾನತಿಗೆ ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ, ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಬದುಕಿದ್ದರೆ, ಅಧಿಕಾರಿಗಳು ಇದ್ದಾರೆ ಎಂದಾದರೆ ಗೃಹ ಸಚಿವರು ಸಂಬಂಧಿತ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಇಂದು ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಪುಡಾರಿಗಳ ಮಾತನ್ನು ಕಟ್ಟಿಕೊಂಡು ಆ ದಲಿತ ಹೆಣ್ಮಗಳು, ಬಿಜೆಪಿ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿದ್ದಾರೋ, ವಿವಸ್ತ್ರಗೊಳಿಸಿದ್ದಾರೋ, ಆ ಎಲ್ಲ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಹುಬ್ಬಳ್ಳಿಯಲ್ಲಿ ಇಡೀ ರಾಜ್ಯವೇ ತಲೆತಗ್ಗಿಸುವಂಥ ಒಂದು ಘಟನೆ ನಡೆದಿದೆ.

BY Vijayendra demands immediate suspension of officers who stripped and assaulted him

ಸುಜಾತ ಎಂಬ ಬಿಜೆಪಿ ಕಾರ್ಯಕರ್ತೆ ಎಸ್‍ಐಆರ್ (ಮತದಾರರ ವಿಶೇಷ ಪರಿಷ್ಕರಣೆ) ಮ್ಯಾಪಿಂಗ್ ಸಂದರ್ಭದಲ್ಲಿ ಬ್ಲಾಕ್ ಮಟ್ಟದ ಅಧಿಕಾರಿಗಳು (ಬಿಎಲ್‍ಒ) ಹೋಗುತ್ತಿರುವಾಗ ಬಿಎಲ್‍ಎ 2 ಹೋಗಲು ಅವಕಾಶ ಇದೆ. ಅಂಥ ಸಂದರ್ಭದಲ್ಲಿ ಸುನಂದಾ ಎಂಬ ಕಾಂಗ್ರೆಸ್ ಕಾರ್ಪೊರೇಟರ್ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿ, ಬಳಿಕ ನಮ್ಮ ಕಾರ್ಯಕರ್ತರ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಹಿನ್ನೆಲೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೇ ಕಾಂಗ್ರೆಸ್ಸಿಗರ ಮಾತು ಕೇಳಿಕೊಂಡು ಅವರ ಮನೆಗೆ ನುಗ್ಗಿ ಅವರೆಲ್ಲರನ್ನೂ ಬಂಧಿಸಿದ್ದಾರೆ. ಇದನ್ನು ಬಿಜೆಪಿ ಖಂಡಿಸುವುದಾಗಿ ತಿಳಿಸಿದರು.

ಇದಿಷ್ಟೇ ಅಲ್ಲ, ಸುಜಾತ ಒಬ್ಬರು ದಲಿತ ಹೆಣ್ಮಗಳು ಎಂದ ಅವರು, ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಗಳು ಪೊಲೀಸ್ ಠಾಣೆಯನ್ನು ಕಾಂಗ್ರೆಸ್ ಕಚೇರಿಗಳಾಗಿ ಪರಿವರ್ತಿಸಿದ್ದಾರೆ. ಪೊಲೀಸರು ಕಾಂಗ್ರೆಸ್ಸಿನ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಇದರ ಪರಿಣಾಮವಾಗಿ ಸುಜಾತ ಮತ್ತು ಅವರ ಕುಟುಂಬದವರನ್ನು ಬಂಧಿಸಿ ಕರೆದೊಯ್ಯುವ ಸಂದರ್ಭದಲ್ಲಿ ಆ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.

ಶಾಸಕರ ಮೇಲೆ ಹಲ್ಲೆ ಸೇರಿದಂತೆ ಇದೇ ಮಾದರಿಯ ಘಟನಾವಳಿ ಹೆಚ್ಚುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 140 ಶಾಸಕರಿದ್ದಾರೆ ಎಂದು ಕಾಂಗ್ರೆಸ್ ಸರಕಾರ ಅಹಂಕಾರದಿಂದ ನಡೆದುಕೊಳ್ಳುತ್ತಿದೆ. ಬಳ್ಳಾರಿ, ಹುಬ್ಬಳ್ಳಿ, ಬೀದರ್‍ನ ಘಟನೆಗಳನ್ನು ಗಮನಿಸಿದರೆ ಕಾಂಗ್ರೆಸ್ ಪಕ್ಷದ ಪಾಪದ ಕೊಡ ತುಂಬಿದೆ. ಜನರು ಹಿಡಿಶಾಪ ಹಾಕುತ್ತಿದ್ದಾರೆ. ಜನರು ಯಾವಾಗ ಉತ್ತರ ಕೊಡಬೇಕೋ ಆಗ ಉತ್ತರ ಕೊಡುತ್ತಾರೆ ಎಂದು ಬಿ.ವೈ.ವಿಜಯೇಂದ್ರ ಅವರು ಎಚ್ಚರಿಸಿದರು.

ಗೃಹ ಸಚಿವರು ಒಂದು ರೀತಿ ಅಸಹಾಯಕರಾಗಿದ್ದಾರೆ. ಅವರಿಗೆ ಇನ್ನೂ ಕೂಡ ಇದರ ಮಾಹಿತಿ ಇದೆಯೋ ಇಲ್ಲವೋ ಗೊತ್ತಿಲ್ಲ. ಅಸಮರ್ಥರೆಂದು ರಾಜ್ಯದ ಜನರು ಮಾತನಾಡುತ್ತಿದ್ದಾರೆ. ಡಾ. ಬಾಬಾ ಸಾಹೇಬ ಅಂಬೇಡ್ಕರರ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಡಿ.ಕೆ.ಶಿವಕುಮಾರ್ ಅವರು ಇದರಲ್ಲೂ ರಾಜಕಾರಣ ಬೆರೆಸದೇ ಆ ದಲಿತ ಮಹಿಳೆಗೆ ನ್ಯಾಯ ಕೊಡುವ ಕಾರ್ಯ ಮಾಡಬೇಕು. ಅದು ಬಿಜೆಪಿ ಕಾರ್ಯಕರ್ತರಾದರೂ ಆಗಲಿ, ಯಾರಾದರೂ ಆಗಲಿ. ಮಹಿಳೆ ಮಹಿಳೆಯೇ; ಅದರಲ್ಲೂ ಅವರೊಬ್ಬ ದಲಿತ ಮಹಿಳೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ತಕ್ಷಣ ಇಂಥ ನಾಲಾಯಕ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದಲಿತರ ಬಗ್ಗೆ ಮೊಸಳೆಕಣ್ಣೀರು ಸುರಿಸುವ, ಅಹಿಂದ ಹೆಸರು ಹೇಳಿಕೊಂಡು ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯನವರು ದೇವರಾಜ ಅರಸು ಅವರ ದಾಖಲೆ ಮುರಿದುದಾಗಿ ಅವರ ಬೆನ್ನನ್ನು ಅವರು ತಟ್ಟಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಯಾವ ರೀತಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+