ಅಮಿತ್ ಶಾ ಬೆನ್ನು ತಟ್ಟಿ ಮಾತಾಡಿಸಿದ್ದು ಆನೆ ಬಲ ಬಂದಂತಾಗಿದೆ: ವಿರೋಧಿಗಳಿಗೆ ಟಾಂಗ್ ಕೊಟ್ಟ ವಿಜಯೇಂದ್ರ
ಬೆಂಗಳೂರು, ಮಾರ್ಚ್ 24: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರವನ್ನ ನಡೆಸುತ್ತಿವೆ. ಇತ್ತ ಆಡಳಿತರೂಢ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಪಣ ತೊಟ್ಟಿದೆ.
ಇನ್ನೂ ಚುನಾವಣೆ ಹೊತ್ತಲಿ ರಾಜ್ಯ ಬಿಜೆಪಿಯಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ವಿಜಯೇಂದ್ರ ವಿರುದ್ದ ಬಿಜೆಪಿ ಕೆಲ ನಾಯಕರು ತಿರುಗಿಬಿದ್ದಿದ್ದಾರೆ. ಈಗಾಗಾಲೇ ದೆಹಲಿಯ ಹೈಕಮಾಂಡ್ ನಾಯಕರಿಗೆ ವಿಜಯೇಂದ್ರ ವಿರುದ್ದ ದೂರು ನೀಡಿದ್ದಾರೆ.

ಚುನಾವಣಾ ರಣತಂತ್ರ ರೂಪಿಸಲು ರಾಜ್ಯಕ್ಕೆ ಆಗಮಿಸಿರುವ ಅಮಿತ್ ಶಾ ಅವರನ್ನ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ನಿವಾಸಕ್ಕೆ ಉಪಹಾರಕ್ಕೆ ಆಹ್ವಾನಿಸಿದ್ದರು. ಹೀಗಾಗಿ ಇಂದು(ಶುಕ್ರವಾರ) ಬೆಳಿಗ್ಗೆ ಬಿ ಎಸ್ ಯಡಿಯೂರಪ್ಪ ನಿವಾಸಕ್ಕೆ ಅಮಿತ್ ಶಾ ಆಗಮಿಸಿದ್ದರು, ಕಾರಿನಿಂದ ಇಳಿದ ಕೂಡಲೇ ಅಮಿತ್ ಶಾ, ಯಡಿಯೂರಪ್ಪನವರ ಕಡೆಗೆ ನಗುಮೊಗ ಬೀರಿದರಾದರೂ ಕಾರು ಇಳಿಯುತ್ತಲೇ, ಯಡಿಯೂರಪ್ಪನವರಿಗೆ ನಿಮ್ಮ ಕೈಯ್ಯಲ್ಲಿರುವ ಹೂಗುಚ್ಛವನ್ನು ನಿಮ್ಮ ಮಗನ ಕೈಗೆ ನೀಡಿ ಎಂದರು.
ಇದನ್ನು ನಿರೀಕ್ಷಸದ ಯಡಿಯೂರಪ್ಪನವರಿಗೆ ಮೊದಲಿಗೆ ಅರ್ಥವಾಗಲೇ ಇಲ್ಲ. ಅದನ್ನು ಗಮನಿಸಿದ ಶಾ, ಮತ್ತೆ ಹೂಗುಚ್ಛವನ್ನು ಅವರಿಗೆ ಕೊಡಿ, ಅವರಿಗೆ ಕೊಡಿ ಅಂತ ಕೈ ತೋರಿಸಿ ಹೇಳಿದರು. ಆಗ ಯಡಿಯೂರಪ್ಪನವರು ತಮ್ಮ ಕೈಯ್ಯಲ್ಲಿದ್ದ ಗುಲಾಬಿ ಹೂಗುಚ್ಛವನ್ನು ವಿಜಯೇಂದ್ರ ಅವರಿಗೆ ಕೊಟ್ಟರು. ನಂತ್ರ ವಿಜಯೇಂದ್ರ ಅವರಿಂದ ಹೂಗುಚ್ಚ ಪಡೆದು ವಿಜಯೇಂದ್ರ ಬೆನ್ನು ತಟ್ಟಿ, ಖುಷಿಯಿಂದ ಯಡಯೂರಪ್ಪ ನಿವಾಸಕ್ಕೆ ಆಗಮಿಸಿದರು.
ಅಮಿತ್ ಶಾ ಬ್ರೇಕ್ ಫಾಸ್ಟ್ ಮಿಟೀಂಗ್ ನಂತರ ಬಿ.ವೈ. ವಿಜಯೇಂದ್ರ ಮಾತನಾಡಿ, ಅಮಿತ್ ಶಾ ಅವರು ನನ್ನ ಬೆನ್ನು ತಟ್ಟಿ ಮಾತಾಡಿಸಿದ್ದು ಆನೆ ಬಲ ಬಂದಂತಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಇದು ರಾಜಕೀಯ ಸಂದೇಶವೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಅಮಿತ್ ಶಾ ಬೆನ್ನು ತಟ್ಟಿ ಮಾತಾಡಿಸಿದ್ದು ಆನೆ ಬಲ ಬಂದಂತಾಗಿದೆ. ಇದು ಸಹಜ, ಇದು ರಾಜಕೀಯದಲ್ಲಿ ಸಹಜ
ಆನೆ ಬಲ ಬಂದಂತಾಗಿದೆ ಎನ್ನುವ ಮೂಲಕ ಸ್ವಪಕ್ಷದಲ್ಲೆ ಇರುವ ವಿರೋಧಿಗಳಿಗೆ ವಿಜಯೇಂದ್ರ ಟಾಂಗ್ ನೀಡಿದ್ದಾರೆ.
ಅಮಿತ್ ಶಾ ಉಪಹಾರಕ್ಕೆ ಬಂದಿದ್ದರು,ಕೆಲಸದ ಒತ್ತಡದ ನಡುವೆಯೂ ಬಿಡುವು ಮಾಡುಕೊಂಡು ಬಂದಿದ್ದರು. ರಾಜ್ಯದಲ್ಲಿ ಚನಾವಣೆ ಎದುರಿಸಸಬೇಕಿದೆ, ಅದಕ್ಕಾಗಿ ಎಲ್ಲ ನಾಯಕರೂ ಸೇರಿ ಸುದೀರ್ಘ ಸಮಾಲೋಚನೆ ನಡೆಸಿದರು. ಮುಂದಿನ ದಿನಗಳಲ್ಲಿ ಚುನಾವಣೆ ನಂತರ ರಾಜ್ಯದಲ್ಲಿ ಅತಂತ್ರ ಸ್ಥಿತಿ ಸೃಷ್ಟಗೆ ಬಿಡಲ್ಲ, ಕೇಂದ್ರ, ರಾಜ್ಯ ಸರ್ಕಾರದ ಯೊಜನೆ ಮನೆ ಮನೆಗೆ ತಲುಪಿಸುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂದು ಚರ್ಚೆ ನಡೆಸಲಾಯಿತು. ರಾಜಕಾರಣ ಬಿಟ್ಟು ಬೇರೆ ಏನು ಚರ್ಚೆ ಆಗಿಲ್ಲ.ಆಗಲು ಸಾಧ್ಯವೂ ಇಲ್ಲ ಎಂದರು.

ವರುಣಾದಿಂದ ವಿಜಯೇಂದ್ರ ಸ್ಪರ್ಧೆ ಮಾಡುತ್ತಾರಾ ಎಂಬ ಕುರಿತು ಮಾತನಾಡಿ, ನಾನು ಶಿಕಾರಿಪುರದಲ್ಲಿ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದೇನೆ, ಶಿಕಾರಿಪುರ ಕ್ಷೇತ್ರದ ಜನತೆ, ಮತದಾರರ ಅಭಿಪ್ರಾಯ ಮೇರೆಗೆ ಅಲ್ಲಿ ಸ್ಪರ್ಧೆ ಮಾಡುತ್ತೇನೆ. ಆದರೂ ಕೇಂದ್ರದ ನಿರ್ಧಾರಕ್ಕೆ ಈ ವಿಚಾರವನ್ನು ಬಿಡಲಾಗಿದೆ ಎಂದು ಹೇಳಿದರು.
ಯಡಿಯೂರಪ್ಪ ರಾಜೀನಾಮೆ ಬಳಿಕ ಸಾಕಷ್ಟು ಚರ್ಚೆ ಆಗಿತ್ತು. ಅನೇಕ ಬಾರಿ ಚರ್ಚೆ ಆಗಿದೆ, ಸಿಎಂ ಆಗಿದ್ದಾಗ ಹೇಗೆ ಇದ್ದರೂ ಈಗಲೂ ಅದೇ ಬದ್ದತೆಯಿಂದ ಯಡಿಯೂರಪ್ಪ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications