150 ಕೋಟಿ ಲಂಚದ ಆಮಿಷ: ಬಿ.ವೈ. ವಿಜಯೇಂದ್ರ ಅವರೇ ಸ್ಪಷ್ಟೀಕರಣ ನೀಡಿ: ಕೃಷ್ಣ ಬೈರೇಗೌಡ

ಬೆಳಗಾವಿ ಡಿಸೆಂಬರ್‌ 16: ವಕ್ಫ್ ವಿಚಾರ ಮಾತನಾಡದಂತೆ ಬಿ.ವೈ. ವಿಜಯೇಂದ್ರ ಅವರು ನನ್ನ ಮೇಲೆ ಒತ್ತಡ ಹೇರಿದ್ದರು. ಅಲ್ಲದೆ, ರೂ.150 ಕೋಟಿ ಲಂಚದ ಆಮಿಷವೊಡ್ಡಿದ್ದರು ಎಂದು ಸ್ವತಃ ಬಿಜೆಪಿ ಮುಖಂಡ ಅನ್ವರ್‌ ಮಾಣಿಪ್ಪಾಡಿ ಆರೋಪಿಸಿದ್ದಾರೆ. ವಿಜಯೇಂದ್ರ ಅವರು ಈ ಸಂಬಂಧ ಸ್ಪಷ್ಟೀಕರಣ ನೀಡಲಿ. ಅದನ್ನು ಬಿಟ್ಟು ರಾಜಕೀಯ ಭಾಷಣ ಮಾಡುತ್ತಾ ಸದನದ ಸಮಯ ವ್ಯರ್ಥ ಮಾಡುವ ಅಗತ್ಯವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಪರಾಕಿ ಹಾಕಿದರು.

ಸೋಮವಾರದ ಕಲಾಪ ಆರಂಭವಾಗುತ್ತಿದ್ದಂತೆ, ವಕ್ಫ್‌ ಹಗರಣಕ್ಕೆ ಸಂಬಂಧಿಸಿ ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟೀಕರಣ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಮಯ ಕೋರಿದ್ದರು. ಆದರೆ, ತಮಗೆ ನೀಡಿದ ಸಮಯದಲ್ಲಿ ಅವರು ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ನೀಡುವುದರ ಬದಲು ಆಡಳಿತ ಪಕ್ಷದ ವಿರುದ್ಧ ಟೀಕಾಪ್ರಹಾರ ಆರಂಭಿಸಿದ್ದರು.

BY Vijayendra himself should stop making political speeches and give clarification Krishna ByreGowda

ಈ ವೇಳೆ ಮಧ್ಯಪ್ರವೇಶಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, ಬಿ ವೈ ವಿಜಯೇಂದ್ರ ಅವರೇ...ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮೀಸಲಿಟ್ಟಿದ್ದ ಸಮಯಾವಕಾಶವನ್ನು ತಮಗೆ ನೀಲಾಗಿದೆ. ಹೀಗಾಗಿ ವಕ್ಫ್‌ ವಿಚಾರದಲ್ಲಿ ತಮ್ಮ ಮೇಲಿನ ಆರೋಪದ ಬಗ್ಗೆ ಸ್ಪಷ್ಟೀಕರಣವನ್ನಷ್ಟೇ ನೀಡಿ. ಅದನ್ನು ಬಿಟ್ಟು ರಾಜಕೀಯ ಭಾಷಣ ಮಾಡುತ್ತಾ ಸದನದ ಸಮಯ ಹಾಳು ಮಾಡಬೇಡಿ. ಒಂದು ವೇಳೆ ರಾಜಕೀಯ ಭಾಷಣ ಮಾಡಿಯೇ ಸಿದ್ದ ಎಂಬುದಾದರೆ ನಮಗೂ ಸದನದಲ್ಲಿ ರಾಜಕೀಯ ಭಾಷಣ ಮಾಡಲು ಅವಕಾಶ ನೀಡಿ ಎಂದು ಸಭಾಧ್ಯಕ್ಷರಲ್ಲಿ ತಮ್ಮ ತಕರಾರನ್ನು ದಾಖಲಿಸಿದರು.

ರಾಜಕೀಯ ಭಾಷಣ ಮಾಡುವುದಾದರೆ ನಾವೂ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ ಅವರು, ಈ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಕಾಂಗ್ರೆಸ್‌ ನಾಯಕರ ಮನೆಗಳ ಮೇಲೆ ಮಾತ್ರ ದಾಳಿ ಮಾಡುತ್ತವೆ, ವಿಚಾರಣೆ ನಡೆಸುತ್ತವೆ. ಆದರೆ, ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ, ಸ್ವತಃ ಬಿಜೆಪಿ ನಾಯಕ ಅನ್ವರ್‌ ಮಾಡಿಪ್ಪಾಡಿ ಅವರು ವಿಜಯೇಂದ್ರ ಅವರ ವಿರುದ್ಧ ರೂ.150 ಕೋಟಿ ಲಂಚದ ಆರೋಪ ಮಾಡಿದ್ದರು. ಆದರೆ, ಸಿಬಿಐ-ಇಡಿ ಈ ಬಗ್ಗೆ ಯಾಕೆ ತನಿಖೆ ಮಾಡಿಲ್ಲ. ಮೋದಿ ಗೆಳೆಯ ಅದಾನಿ ರೂ.2500 ಕೋಟಿ ಲಂಚ ನೀಡಿದ್ದರು ಅಂತ ಅಮೆರಿಕ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಈ ಬಗ್ಗೆ ಸಿಬಿಐ-ಇಡಿ ತನಿಖೆ-ವಿಚಾರಣೆ ಏಕಿಲ್ಲ? ಬನ್ನಿ ಈ ಬಗ್ಗೆಯೂ ಚರ್ಚೆ ಮಾಡೋಣ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸವಾಲೆಸೆದರು.

ಇನ್ನೂ ಸದನ ಇರುವುದು ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದಕ್ಕೇ ವಿನಃ ರಾಜಕೀಯ ಭಾಷಣ ಮಾಡುತ್ತಾ ಕಲಾಪದ ಸಮಯವನ್ನು ಹಾಳು ಮಾಡುವುದಕ್ಕಲ್ಲ. ಶೀಘ್ರದಲ್ಲೇ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ, ಕಳಸ ಬಂಡೂರಿ, ಕೃಷ್ಣ ತುಂಗಭದ್ರಾ ಸೇರಿದಂತೆ ಇಲ್ಲಿನ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಬೇಕಿದೆ. ಹೀಗಾಗಿ ದಯವಿಟ್ಟು ಮೊದಲು ನಿಮ್ಮ ಸ್ಪಷ್ಟೀಕರಣ ನೀಡಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಾಕೀತು ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+