ಸ್ಪಷ್ಟನೆಯ ನಂತರವೂ ಅಸೆಂಬ್ಲಿ ಉಪ ಚುನಾವಣೆಗೆ ವಿಜಯೇಂದ್ರ ಸ್ಪರ್ಧೆಯ ಸುದ್ದಿ!
ಇತ್ತೀಚಿನ ದಿನಗಳಲ್ಲಿ ರಾಜ್ಯ ಬಿಜೆಪಿಯಲ್ಲಿ ಭಾರೀ ಸದ್ದು ಮಾಡುತ್ತಿರುವ ಹೆಸರೆಂದರೆ ಅದು ಬಿ.ವೈ.ವಿಜಯೇಂದ್ರ ಅವರದ್ದು. ಅವರು ರಾಜ್ಯ ಉಪಾಧ್ಯಕ್ಷರು ಎನ್ನುವುದಕ್ಕಿಂತ ಹೆಚ್ಚಾಗಿ ಸಿಎಂ ಯಡಿಯೂರಪ್ಪನವರ ಪುತ್ರ ಎನ್ನುವ ಕಾರಣಕ್ಕಾಗಿಯೇ ಹೆಚ್ಚು ಸುದ್ದಿಯಾಗುತ್ತಿದ್ದಾರೆ.
ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನುವ ಆರೋಪ ಇಂದು ನಿನ್ನೆಯದಲ್ಲ, ಹಾಗೂ, ಒಬ್ಬರು ಇಬ್ಬರದಲ್ಲ. ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಮತ್ತವರ ಪುತ್ರನ ವಿರುದ್ದ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ.
ಇದರ ಜೊತೆಗೆ, ಗ್ರಾಮೀಣಾಭಿವೃದ್ದಿ ಖಾತೆಯ ಸಚಿವ ಕೆ.ಎಸ್.ಈಶ್ವರಪ್ಪ ಕೂಡಾ ರಾಜ್ಯಪಾಲರಿಗೆ ನೇರವಾಗಿ ದೂರು ನೀಡಿರುವ ವಿಚಾರ ಸಂಚಲನವನ್ನು ಮೂಡಿಸಿರುವುದು ಗೊತ್ತಿರುವ ವಿಚಾರ.
ಇವೆಲ್ಲದರ ನಡುವೆ, ಈಗಾಗಲೇ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ವಿಜಯೇಂದ್ರ ಸ್ಪಷ್ಟನೆಯನ್ನು ನೀಡಿದ್ದರೂ, ಮತ್ತೆ ಅವರ ಹೆಸರು ಮುನ್ನಲೆಗೆ ಬರುತ್ತಿದೆ. ಅದು ಉಪ ಚುನಾವಣೆ ನಡೆಯಬೇಕಾಗಿರುವ ಒಂದು ಕ್ಷೇತ್ರಕ್ಕೆ:

ಮಸ್ಕಿ ಕ್ಷೇತ್ರಕ್ಕೆ ಉಸ್ತುವಾರಿಯಾಗಿ ಕಳುಹಿಸಿ, ಎಲ್ಲಾ ಗೊಂದಲಕ್ಕೆ ತೆರೆ
ಮಸ್ಕಿ ಮತ್ತು ಬಸವಕಲ್ಯಾಣ ಉಪ ಚುನಾವಣೆಯ ವೇಳೆಯೂ ವಿಜಯೇಂದ್ರ ಹೆಸರು ಕೇಳಿ ಬರುತ್ತಿತ್ತು. ಬಸವಕಲ್ಯಾಣದಿಂದ ಅವರು ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ ಬಲವಾಗಿ ಹರಿದಾಡುತ್ತಿತ್ತು. ಆದರೆ, ಬಿಜೆಪಿ ವರಿಷ್ಠರು ಅವರನ್ನು ಮಸ್ಕಿ ಕ್ಷೇತ್ರಕ್ಕೆ ಉಸ್ತುವಾರಿಯಾಗಿ ಕಳುಹಿಸಿ, ಎಲ್ಲಾ ಗೊಂದಲಕ್ಕೆ ತೆರೆ ಎಳೆದಿದ್ದರು. ಮಸ್ಕಿಯಲ್ಲಿ ಬಿಜೆಪಿ ಸೋಲು ಅನುಭವಿಸಿತ್ತು.

ಸಿ.ಎಂ.ಉದಾಸಿ ನಿಧನದಿಂದ ತೆರವಾಗಿರುವ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರ
ಈಗ, ಸಿ.ಎಂ.ಉದಾಸಿ ನಿಧನದಿಂದ ತೆರವಾಗಿರುವ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಉಪ ಚುನಾವಣೆಗೆ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎನ್ನುವ ಗುಸುಗುಸು ಸುದ್ದಿ ಹರಿದಾಡುತ್ತಿದೆ. ಕ್ಷೇತ್ರದ ಶಾಸಕರಾಗಿದ್ದ ಉದಾಸಿಯವರು ಜೂನ್ ಎಂಟರಂದು ನಿಧನರಾಗಿದ್ದರು. ಅವರ ಪುತ್ರ ಶಿವಕುಮಾರ್ ಉದಾಸಿಯವರು ಹಾವೇರಿ ಕ್ಷೇತ್ರದ ಸಂಸದರಾಗಿದ್ದಾರೆ.

ನಮ್ಮ ವರಿಷ್ಠರು ನಿರ್ಧರಿಸಲಿದ್ದಾರೆ, ಸಚಿವ ಬೈರತಿ ಬಸವರಾಜ್ ಹೇಳಿಕೆ
ಬಿಜೆಪಿಯ ಭದ್ರಕೋಟೆಯಾಗಿರುವ ಹಾವೇರಿ ಜಿಲ್ಲೆ ಮತ್ತು ಹಾನಗಲ್ ನಲ್ಲಿ ಲಿಂಗಾಯತ ಸಮುದಾಯದ ಮತಬ್ಯಾಂಕ್ ನಿರ್ಣಾಯಕ ಪಾತ್ರವನ್ನು ವಹಿಸಲಿದೆ. ಆ ಕಾರಣಕ್ಕಾಗಿಯೋ ಏನೋ, ವಿಜಯೇಂದ್ರ ಹೆಸರು ಓಡಾಡಲು ಆರಂಭಿಸಿದೆ. "ವಿಜಯೇಂದ್ರ ಅವರು ಸ್ಪರ್ಧಿಸಬೇಕೋ, ಬೇಡವೋ ಎನ್ನುವುದನ್ನು ನಮ್ಮ ವರಿಷ್ಠರು ನಿರ್ಧರಿಸಲಿದ್ದಾರೆ"ಎಂದು ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ.
Recommended Video

ನಿಲ್ಲುವುದಾದರೆ ಯಾವ ಕ್ಷೇತ್ರದಿಂದ ನಿಲ್ಲಬೇಕು ಎಂಬುದು ಎರಡು ವರ್ಷದ ನಂತರ ತೀರ್ಮಾನ
"ಇನ್ನು ನಾನು ಚುನಾವಣೆಗೆ ನಿಲ್ಲಬೇಕೋ ಬೇಡವೋ? ನಿಲ್ಲುವುದಾದರೆ ಯಾವ ಕ್ಷೇತ್ರದಿಂದ ನಿಲ್ಲಬೇಕು ಎಂಬುದು ಎರಡು ವರ್ಷದ ನಂತರ ತೀರ್ಮಾನವಾಗುತ್ತೆ. ನಾನು ಎಲ್ಲಿ ಸ್ಪರ್ಧೆ ಮಾಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ"ಎಂದು ವಿಜಯೇಂದ್ರ ಸ್ಪಷ್ಟನೆಯನ್ನು ನೀಡಿದ ನಂತರವೂ ಅವರ ಸ್ಪರ್ಧೆಯ ವಿಚಾರ ಇನ್ನೂ ಚರ್ಚೆಯ ವಿಷಯವಾಗಿದೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications