ಅನ್ನಭಾಗ್ಯ ಯೋಜನೆ: ಮೋದಿ ಜೀ “ಸ್ವಾಭಿಮಾನದ ಭಾಗ್ಯ” ಎಂದ ಬಿ.ವೈ ವಿಜಯೇಂದ್ರ
ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಸಚಿವ ಮಧುಬಂಗಾರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನಡುವೆ ವಾಕ್ಸಮರ ಮುಂದುವರಿದಿದೆ. ಇದೀಗ ಈ ವಿಚಾರವಾಗಿ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಸಚಿವ ಮಧು ಬಂಗಾರಪ್ಪ ಅವರೇ ಅನ್ನ ಭಾಗ್ಯ ಕಾಂಗ್ರೆಸ್ಸಿಗರ ಕಿಸೆಯಿಂದ ಬಂದ ಭಾಗ್ಯವಲ್ಲ, ಪ್ರಧಾನಿ ನರೇಂದ್ರ ಜೀ ಅವರು 'ಹಸಿವು ಮುಕ್ತ ಭಾರತ'ಕ್ಕಾಗಿ ತೊಟ್ಟ ಮಹಾ ಸಂಕಲ್ಪದ ಫಲ 'ಗರೀಬ್ ಕಲ್ಯಾಣ್' ಯೋಜನೆಯ ಮೂಲಕ ದೇಶದ ಉದ್ದಗಲಕ್ಕೂ ಪಸರಿಸಿದ ಬಡವರ "ಸ್ವಾಭಿಮಾನದ ಭಾಗ್ಯ" ಎಂದು ಹೇಳಿದ್ದಾರೆ.
ನಿಮ್ಮ ಕಲ್ಪನೆಯಲ್ಲಿ "ಅನ್ನಭಾಗ್ಯ ಜನರಿಗೆ ನೀಡುವ ಭಿಕ್ಷೆ ಎಂದು ಭಾವಿಸಿದಂತಿದೆ, ಅದು ಭಿಕ್ಷೆಯಲ್ಲ ಜನರ ಹಕ್ಕು" ಎಂಬ ಪರಿಜ್ಞಾನ ನಿಮಗಿರಲಿ, ಈ ಹಕ್ಕು ಪಡೆಯಲು ನಿಮ್ಮ ಮನೆಯ ಕೆಲಸಗಾರನಿಂದಿಡಿದು ದೇಶದ ಕಟ್ಟ ಕಡೆಯ ಪ್ರಜೆಗೂ ದಕ್ಕುವ ಸಂವಿಧಾನದ ಸೌಭಾಗ್ಯ. ತ್ರಿವಿಧ ದಾಸೋಹದ ಈ ನಾಡಿನಲ್ಲಿ ಅನ್ನಭಾಗ್ಯದ ಹೆಸರಿನಲ್ಲಿ ಬಡವರನ್ನು ಹಂಗಿಸುವ ಮೂಲಕ ಚಾಲನೆ ವೃತ್ತಿ ಆರಿಸಿಕೊಂಡಿರುವ ಶ್ರಮಿಕ ಚಾಲಕ ಸಮೂಹವನ್ನು ನೀವು ಅವಮಾನಿಸಿದ್ದೀರಿ.

ರಾಜ್ಯದಲ್ಲಿ ಮಕ್ಕಳು'ಅಕ್ಷರಭಾಗ್ಯ'ಪಡೆಯುವಲ್ಲಿ ನಿತ್ಯ ಬವಣೆ ಅನುಭವಿಸುತ್ತಿದ್ದಾರೆ, ಮೊದಲು ಅದರತ್ತ ಗಮನ ಕೊಡಿ, ಸಾವಿರಾರು ಸರ್ಕಾರಿ ಶಾಲೆಗಳು ಮೂಲಭೂತ ಸೌಲಭ್ಯಗಳಿಲ್ಲದೇ ನಲುಗುತ್ತಿವೆ, ಕಟ್ಟಡಗಳ ಮೇಲ್ಛಾವಣಿ ಕುಸಿದು ಅವಘಡಗಳು ಸಂಭವಿಸುತ್ತಿವೆ, ಇಂದಿಗೂ ಅದೆಷ್ಟೋ ಶಾಲೆಗಳಲ್ಲಿ ಶೌಚಾಲಯಗಳಿಲ್ಲದೆ ಮಕ್ಕಳು ಮುಜುಗರ ಅನುಭವಿಸುತ್ತಿದ್ದಾರೆ.
ಮೊದಲು ಊರು ಸುತ್ತಿಬನ್ನಿ, ಹಳ್ಳಿಗಾಡಿನ ಶಾಲೆಗಳ ಸ್ಥಿತಿ ನೋಡಿ ಬನ್ನಿ, ಅಗತ್ಯ ಶಿಕ್ಷಕರಿಲ್ಲದೇ ಮಕ್ಕಳು ಅಕ್ಷರ ವಂಚಿತರಾಗುತ್ತಿರುವ ಬಗ್ಗೆ ನಿತ್ಯ ವರದಿಯಾಗುತ್ತಿದೆ 'ವಿದ್ಯಾಭಾಗ್ಯ'ಕ್ಕೆ ಆಗುತ್ತಿರುವ ಕಂಟಕವನ್ನು ತಪ್ಪಿಸುವ ಸಾಮರ್ಥ್ಯವಿಲ್ಲದ ನೀವು 'ಅನ್ನ ಭಾಗ್ಯ'ದ ಹೆಸರಿನಲ್ಲಿ ಬಡವರನ್ನು ಅವಮಾನಿಸಲು ಲಜ್ಜೆಗೇಡಿತನದ ವರ್ತನೆ ಪ್ರದರ್ಶಿಸಿದ್ದೀರಿ. ಶಿಕ್ಷಣ ಸಚಿವ ಸ್ಥಾನದ ಸಜ್ಜನಿಕೆ ಬಿಟ್ಟು ಮಾತನಾಡುವ ನಿಮ್ಮಿಂದ "ಶಿಕ್ಷಣ ಇಲಾಖೆಯನ್ನು ದೇವರೇ ಕಾಪಾಡಬೇಕಾದ ಸ್ಥಿತಿ ಬಂದೊದಗಿರುವುದು ಈ ನಾಡಿನ ದೌರ್ಭಾಗ್ಯವಾಗಿದೆ" ಎಂದು ಹೇಳಿದ್ದಾರೆ.ಇದೀಗ ಈ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಜನರ ರಿಯಾಕ್ಷನ್ ಏನಿದೆ ?
ಇನ್ನು ಈ ಟ್ವೀಟ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅನ್ನಭಾಗ್ಯ ಯೋಜನೆ 2013. ಮೋದಿ ಪ್ರಧಾನಿ ಮಂತ್ರಿ ಆಗಿದ್ದು 2014 ಎಂದು ಕಮೆಂಟ್ ಮಾಡಿದ್ದಾರೆ. ಅನ್ನ ಭಾಗ್ಯ ಬಂದಿದ್ದು 2013ರಲ್ಲಿ ಮೋದಿಯವರು ಪ್ರಧಾನಿಯಾಗಿದ್ದು 2014ರಲ್ಲಿ ಬಿಜೆಪಿಯ ರವರು ಕಾಂಗ್ರೆಸ್ ಮಾಡಿದ ಯೋಜನೆಯನ್ನು ಹೆಸರು ಬದಲಿಸಿ ಯೋಜನೆ ತರುತ್ತಾರೆ ಅಷ್ಟೇ ಮಾನ್ಯ ಬಿಜೆಪಿ ರಾಜ್ಯಾಧ್ಯಕ್ಷರು ಸ್ವಲ್ಪ ತಿಳಿದುಕೊಂಡು ಮಾತಾಡಬೇಕು ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.
ಇನ್ನು ಮಧುಬಂಗಾರಪ್ಪ ಅವರ ಹೇಳಿಕೆಗೂ ವಿರೋಧ ವ್ಯಕ್ತವಾಗಿದೆ. ಈ ಸಂದೇಶಕ್ಕೆ ಏನು ಉತ್ತರ ನೀಡಬೇಕು ಗೊತ್ತಿಲ್ಲ ಕಾರಣ ಡ್ರೈವರಗೆ ಅನ್ನಭಾಗ್ಯ ಆಗಲಿ , ಅಥವಾ ಕುಟುಂದ ಆದಾಯ ಅರ್ಹತೆ ಇರುವ ವ್ಯಕ್ತಿ ಡ್ರೈವರ ಆದ ಮಾತ್ರಕ್ಕೆ ಸರಕಾರಿ ಸೌಲಭ್ಯ ಪಡಿಯಬೇಡ ಎಂಬ ಮಾನದಂಡ ಇದೇಯೇ. ನಿಮ್ಮ ನಿಮ್ಮ ರಾಜಕೀಯ ಧೋರಣೆಗೆ ಆ ಚಾಲಕನ ಕುಟುಂಬಕ್ಕೆ ಅನ್ನಭಾಗ್ಯ ಪಲಾನುಭವಿ ಕಣ್ಣು ಏಕೆ. ಈ ವಿಷಯದ ಮೇಲೆ ರಾಜಕೀಯವೇ ಎಂದೂ ಕೆಲವರು ಪ್ರಶ್ನೆ ಮಾಡಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications