Get Updates
Get notified of breaking news, exclusive insights, and must-see stories!

ಲೋಕಸಭಾ ಚುನಾವಣೆಯಲ್ಲಿ ಅಕ್ರಮ ; 'ಕಾಂಗ್ರೆಸ್ ರಾಜ್ಯದಲ್ಲಿ ಗೆದ್ದದ್ದು ಹೇಗೆ?'

ಬೆಂಗಳೂರು, ಜುಲೈ 25: ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಮೂಲಕ ರಾಹುಲ್ ಗಾಂಧಿಯವರು ಚುನಾವಣಾ ಆಯೋಗದ ಮೇಲೆ ಆರೋಪ ಮಾಡಿದ್ದಾರೆ. ಈ ಮಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡ ಧ್ವನಿಗೂಡಿಸಿದ್ದಾರೆ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಇಟ್ಟರು ಎಂಬ ಗಾದೆ ಮಾತಿದೆ. ಹಾಗಾಗಿದೆ ಇವತ್ತು ಕಾಂಗ್ರೆಸ್ ಪರಿಸ್ಥಿತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಟೀಕಿಸಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಬಿ ವೈ ವಿಜಯೇಂದ್ರ ಅವರು, ಚುನಾವಣಾ ಆಯೋಗ ಒಂದು ಸಾಂವಿಧಾನಿಕ ಸಂಸ್ಥೆ. ರಾಹುಲ್ ಗಾಂಧಿ ಮತ್ತಿತರರು ಇಂಥ ಸಾಂವಿಧಾನಿಕ ಸಂಸ್ಥೆ ಬಗ್ಗೆ ಅನುಮಾನ ವ್ಯಕ್ತಪಡಿಸುವುದು ಆ ಚುನಾವಣಾ ಆಯೋಗದ ಅಪಮಾನ ಮಾತ್ರವಲ್ಲ. ಪ್ರಜಾಪ್ರಭುತ್ವ ವಿರೋಧಿ ನಡೆಯೂ ಹೌದು ಎಂದು ಆಕ್ಷೇಪಿಸಿದರು. ಡಿ.ಕೆ.ಶಿವಕುಮಾರ್ ಅವರು ತಮ್ಮ ಸೋದರ ಡಿ.ಕೆ.ಸುರೇಶ್ ಅವರು ಇದೇ ಅಕ್ರಮದಿಂದ ಸೋತಿದ್ದಾಗಿ ಹೇಳಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

BY Vijayendra Questioned How The Congress Party Won 136 Seats In The State

ಚುನಾವಣಾ ಅಕ್ರಮ ನಡೆದಿದ್ದರೆ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ 136 ಶಾಸಕರ ಬಲದೊಂದಿಗೆ ಯಾಕೆ ಅಧಿಕಾರಕ್ಕೆ ಬರುತ್ತಿತ್ತು ಎಂದು ಕೇಳಿದರು. ಕೇಂದ್ರ ಸರಕಾರ, ನರೇಂದ್ರ ಮೋದಿಜೀ, ಬಿಜೆಪಿ ಸೇರಿ ಚುನಾವಣಾ ಆಯೋಗದ ದುರ್ಬಳಕೆ ಮಾಡಿದ್ದಿದ್ದರೆ ನೀವು ಮುಖ್ಯಮಂತ್ರಿಯಾಗಲು ಸಾಧ್ಯವಿತ್ತೇ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದರು. ಡಿ.ಕೆ.ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಇವತ್ತು ರಾಜ್ಯದಲ್ಲಿ ಅಲೆದಾಡುತ್ತಿಲ್ಲವೇ? ಈಚೆಗೆ 3 ಉಪ ಚುನಾವಣೆಯಲ್ಲೂ ಗೆದ್ದ್ದರಲ್ಲವೇ? ಆಗ ಚುನಾವಣಾ ಆಯೋಗದಿಂದ ದುರ್ಬಳಕೆ ಆಗಿಲ್ಲವೇ ಎಂದು ಬಿ ವೈ ವಿಜಯೇಂದ್ರ ಅವರು ಪ್ರಶ್ನಿಸಿದರು.

ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಅಪಾಯಕಾರಿ ಬೆಳವಣಿಗೆ. ಕಾಂಗ್ರೆಸ್ ನಾಯಕರ ತುರ್ತು ಪರಿಸ್ಥಿತಿಯ ಮನಸ್ಥಿತಿ ಇಂದಿಗೂ ಬದಲಾಗಿಲ್ಲ ಎಂಬುದಕ್ಕೆ ಮತ್ತೊಂದು ನಿದರ್ಶನವಿದು ಎಂದರಲ್ಲದೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ನಾಡಿನ ಜನರ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು. ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ಈಗಾಗಲೇ ಚರ್ಚೆ ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ಹೇಳಿಕೆ ಕೊಡುವುದಾದರೆ ಸುಪ್ರೀಂ ಕೋರ್ಟಿನಲ್ಲಿ ತಿಳಿಸಲಿ. ಚುನಾವಣಾ ಆಯೋಗವನ್ನು ಪ್ರಶ್ನಿಸುವುದು, ಅನುಮಾನದಿಂದ ನೋಡುವುದು ಇವರಿಗೆ ಶೋಭೆ ತರುವುದಿಲ್ಲ ಎಂದು ನುಡಿದರು.

ಮಹದಾಯಿ ವಿಚಾರದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಮಹದಾಯಿ ವಿಚಾರದಲ್ಲಿ ರಾಜಾರೋಷವಾಗಿ ಹೇಳಿಕೆ ನೀಡಿದ್ದಾರೆ. ಮಹದಾಯಿ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ರಾಜ್ಯದೊಂದಿಗೆ ಸದಾ ಇರುತ್ತದೆ. ಗೋವಾ ಮುಖ್ಯಮಂತ್ರಿ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಕೇಂದ್ರದ ಸಚಿವ ಪ್ರಲ್ಹಾದ್ ಜೋಶಿಯವರ ಹೇಳಿಕೆಯನ್ನೂ ತಾವು ಗಮನಿಸಬೇಕು. ಕರ್ನಾಟಕದ ಹಿತಾಸಕ್ತಿ ಬಲಿ ಕೊಡಲು ನಾವು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+