Shivamogga: ಈದ್ ಮಿಲಾದ್ ವೇಳೆ ಗಲಾಟೆ: ಬಿವೈ ವಿಜಯೇಂದ್ರ ಕಿಡಿ
ಶಿವಮೊಗ್ಗ, ಅಕ್ಟೋಬರ್ 02: ಜಿಲ್ಲೆಯ ಶಾಂತಿನಗರ ರಾಗಿಗುಡ್ಡದಲ್ಲಿ ಈದ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ನಡೆದಿದೆ. ಯುವಕರ ಗುಂಪು ಪೊಲೀಸರು ಮೇಲೆ ಕಲ್ಲು ತೂರಿದ್ದಕ್ಕೆ ಅಲ್ಲಿ ನಿಷೇಧಾಜ್ಞೆ ಜಾರಿಮಾಡಲಾಗಿದೆ. ಈ ಘಟನೆ ಮತ್ತು ಉದ್ವಿಗ್ನ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಶಾಂತಿನಗರ ಪ್ರದೇಶದಲ್ಲಿ ಭಾನುವಾರ ಈದ್ ಮಿಲಾದ್ ಮೆರವಣಿಗೆ ನಡೆದಿತ್ತು. ಈ ವೇಳೆ ಸಾವಿವರಾರು ಜನರು ಪಾಲ್ಗೊಂಡಿದ್ದರು. ಈ ವೇಳೆ ಕಟೌಟ್ ವಿಚಾರದಲ್ಲಿ ಉಂಟಾದ ವಾಗ್ವಾದ ತೀವ್ರ ಗಲಾಟೆಗೆ ತಿರುಗಿತ್ತು. ಮುಂಜಾಗೃತಾ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಜಿಲ್ಲೆಯಲ್ಲಿಯೇ ಮೊನ್ನೆ ನಡೆದ ಗಣೇಶ ವಿಸರ್ಜನೆ ವೇಳೆ 'ನಭೂತೋ ನಭವಿಷ್ಯತಿ'ಎಂಬಂತೆ ಗಣಪತಿ ಉತ್ಸವ ಯಾವ ಗಲಭೆ ಆದಂತೆ ಇಡಿ ಭಕ್ತ ಸಾಗರವು ಏಕತೆ ಸಾರಿದೆ. ಹೀಗಿದ್ದರೂ ಸಹ ಬದಲಾದ ರಾಜ್ಯದ ಸರ್ಕಾರದ ವ್ಯವಸ್ಥೆಯ ಲಾಭಪಡೆದು, ಮತಾಂಧತೆ ಪುಚೋದಿಸುವ ಪೈಕ್ ಗಳನ್ನು ಅಳವಡಿಸಿ ಇಂದು ಈದ್ ಮೆರವಣಿಗೆಯಲ್ಲಿ ಕೋಮು ದಳ್ಳುರಿ ಹೊತ್ತಿಸಲಾಗಿದೆ. ಕಲ್ಲು ತೂರಾಟ ನಡೆಸಲಾಗಿದೆ.
ಗಲಾಟೆಗಳಿಗೆ ಕಾರಣವಾದ ದುಷ್ಕರ್ಮಿಗಳನ್ನು ಸದೆ ಬಡಿಯಬೇಕು ಶಿವಮೊಗ್ಗದ ಶಾಂತಿ ಕದಡಿರುವ ದುಷ್ಪ ಶಕ್ತಿಗಳನ್ನು ನಿಗ್ರಹಿಸಿ ಶಾಂತಿ ಕಾಪಾಡದೇ ಹೊದರೆ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ ಹಾಗೂ ಸಮಾಜ ಘಾತುಕ ಶಕ್ತಿಗಳ ಪೋಷಕ ಸರ್ಕಾರ ಎಂದು ಭಾವಿಸಬೇಕಾಗುತ್ತದೆ ಎಂದು ಅವರು ಕಿಡಿ ಕಾರಿದ್ದಾರೆ.
ಘಟನೆ ಹಿನ್ನೆಲೆ ಏನು?
ಮಲೆನಾಡಿನ ಶಿವಮೊಗ್ಗದ ಶಾಂತಿನಗರ-ರಾಗಿಗುಡ್ಡದಲ್ಲಿ ಭಾನುವಾರ ಈದ್ ಮಿಲಾದ್ ಮೆರವಣಿಗೆ ನಡೆದಿತ್ತು. ಈ ವೇಳೆ ಕಟೌಟ್ ವಿಚಾರದಲ್ಲಿ ಯುವರ ಮಧ್ಯೆ ವಾಗ್ವಾದ ನಡೆಯಿತು ಎನ್ನಲಾಗಿದೆ. ಹೆಣ್ಣು ಮತ್ತು ಗಂಡು ಸೇರಿದಂತೆ ಸಾವಿರಾರು ಮಂದಿ ಈ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ವಾಗ್ವಾದ ಹಿಂಸೆಗೆ ತಿರುಗಿ ಪುಂಡರು ಕಲ್ಲು ತೂರಾಟ ನಡೆದರು. ಪೊಲೀಸರು ಸೇರಿದಂತೆ ಕೆಲವರಿಗೆ ಗಾಯಗಳಾಗಿವೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಈ ಸಂಬಂಧ ರಾಗಿಗುಡ್ಡದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಈ ಸಂಬಂಧ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಪೊಲೀಸರು ವಿಶೇಷ ಸಿಬ್ಬಂದಿ ನಿಯೋಜಿಸಲಾಗಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ. ಮನೆ ಮನೆ ತಡಕಾಡಿ ಸುಮಾರು 10 ಮಂದಿ ಗಲಭೆಗೆ ಕಾರಣವಾದವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications