ಡಿ ಕೆ ಶಿವಕುಮಾರ್ ಸಿಎಂ ಮಾಡಿದ್ರೆ ಬಿಜೆಪಿ ಬಾಹ್ಯ ಬೆಂಬಲ: ಬಿ ವೈ ವಿಜಯೇಂದ್ರ ಹೇಳಿದ್ದೇನು?
ಬೆಂಗಳೂರು, ನವೆಂಬರ್ 27: ಬಿಜೆಪಿ ನಿಲುವು ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟದಲ್ಲಿ ನಮಗೆ ಆಸಕ್ತಿ ಇಲ್ಲ, ಸರಕಾರದಲ್ಲಿ ಡಿ.ಕೆ.ಶಿವಕುಮಾರ್ ಆಗಲೀ, ಮತ್ಯಾರಾದರೂ ಹೊರಗೆ ಬಂದರೆ ಅವರಿಗೆ ಬಾಹ್ಯ ಬೆಂಬಲ ಕೊಡುವುದಾಗಲೀ, ಅಥವಾ ಬೆಂಬಲ ಪಡೆಯುವುದಾಗಲೀ ಪ್ರಶ್ನೆ ಉದ್ಭವವಾಗುವುದಿಲ್ಲ. ಮತದಾರರು ನಮ್ಮನ್ನು ವಿಪಕ್ಷವಾಗಿ ಕೂರಿಸಿದ್ದಾರೆ. ವಿಪಕ್ಷವಾಗಿ ಜವಾಬ್ದಾರಿಯುತ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಹೇಳಿದರು.
ಕಾಂಗ್ರೆಸ್ಸಿನ 140 ಶಾಸಕರಿದ್ದೂ ಆಡಳಿತ ನಡೆಸಲು ಸಾಧ್ಯವಿಲ್ಲವೆಂದಾದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸವಾಲೆಸೆದಿದ್ದಾರೆ.
ಬೆಳಗಾವಿಗೆ ಬಂದು ಸುಮ್ಮನೇ ಕಾಟಾಚಾರಕ್ಕೆ ಅಧಿವೇಶನ ಮಾಡದಿರಿ ಎಂದು ಎಚ್ಚರಿಸಿದರು. ರೈತರು ಚಳಿಗಾಲದ ಅಧಿವೇಶನವನ್ನು ಕಾತರದಿಂದ ಕಾಯುತ್ತಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆ ಜೋಳ, ಭತ್ತ ಬೆಳೆಯುವ ರೈತರಿಗೆ ಸರಕಾರವು ಪರಿಹಾರ ಕೊಡುವುದಾಗಿ ರೈತರು ಕಾಯುತ್ತಿದ್ದಾರೆ ಎಂದು ಗಮನ ಸೆಳೆದರು. ಅಡಿಕೆ ಬೆಳೆಗಾರರೂ ಸಂಕಷ್ಟದಲ್ಲಿದ್ದು, ಇದ್ಯಾವುದಕ್ಕೂ ಪರಿಹಾರ ನೀಡುವ ಲಕ್ಷಣ ಕಾಣುತ್ತಿಲ್ಲ ಎಂದು ಆಕ್ಷೇಪಿಸಿದರು.

ಆಡಳಿತ ನಡೆಸಲು ಸಾಧ್ಯವಿದ್ದರೆ ನಡೆಸಿ, ಇದೇ ರೀತಿ ಕಿತ್ತಾಟ ಮಾಡಿಕೊಂಡು ದೆಹಲಿಯಲ್ಲಿ ನಾಲ್ಕು ದಿನ, ಬೆಂಗಳೂರಿನಲ್ಲಿ 3 ದಿನ ಇರುವುದಾದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ ಎಂದು ಆಗ್ರಹಿಸಿದರು. ಪ್ರಶ್ನೆಗೆ ಉತ್ತರಿಸಿದ ಅವರು, ಇವರು ಬೀದಿಗಿಳಿದು ಬಡಿಗೆ ತೆಗೆದುಕೊಂಡು ಹೊಡೆದಾಡುವ ಸನ್ನಿವೇಶ ಸೃಷ್ಟಿಯಾಗಿದೆ. ಅವರು ಹೊಡೆದಾಡಿಕೊಂಡರೆ ನಾವೇನು ಮಾಡಬೇಕೆಂದು ಯೋಚಿಸುತ್ತೇವೆ ಎಂದು ತಿಳಿಸಿದರು.
ಕಾಂಗ್ರೆಸ್ಸಿನ ಒಳಗಿನ ಬಡಿದಾಟದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ ಎಂದು ಟೀಕಿಸಿದರು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಇದರ ನಡುವೆ ಕಬ್ಬು ಬೆಳೆಗಾರರು, ತೊಗರಿ, ಹುರುಳಿ ಬೆಳೆಗಾರರು ಸೇರಿ ರೈತರು ಸಂಕಷ್ಟದಲ್ಲಿದ್ದಾರೆ. ಮೆಕ್ಕೆಜೋಳ, ಭತ್ತ ಬೆಳೆಯುವ ರೈತರು ಖರೀದಿ ಕೇಂದ್ರ ಪ್ರಾರಂಭಿಸಲು ಬೊಬ್ಬೆ ಹೊಡೆಯುತ್ತಿದ್ದಾರೆ ಎಂದು ವಿವರಿಸಿದರು. ಪಾಪ; ಮುಖ್ಯಮಂತ್ರಿಗಳಿಗೆ ಸಮಸ್ಯೆಗಳನ್ನು ಪರಿಹರಿಸಲು ಸಮಯ ಸಿಗುತ್ತಿಲ್ಲ ಎಂದು ಆಕ್ಷೇಪಿಸಿದರು.
ಮೆಕ್ಕೆಜೋಳದ ಸಂಬಂಧ ಮುಖ್ಯಮಂತ್ರಿಗಳು ಕಳೆದ ವಾರ ಸಭೆ ಕರೆದಾಗ ಕೃಷಿ ಸಚಿವರು ದೆಹಲಿಯಲ್ಲಿದ್ದರು. ರಾಜ್ಯದ ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲದೇ ಅವರ ಸಮಸ್ಯೆಗಳಿಗೆ ಪರಿಹಾರ ಕೊಡದೇ ಗೊಂದಲವನ್ನು ಆಡಳಿತ ಪಕ್ಷದ ಸದಸ್ಯರೇ ಸೃಷ್ಟಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ದೂರಿದರು.
-
ಕರ್ನಾಟಕದ ಏಳು ಕೋಟಿ ಕನ್ನಡಿಗರಿಗೆ ಒಪ್ಪಿಸಿರುವ ಪ್ರಾಮಾಣಿಕ ಲೆಕ್ಕಪತ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications