ವಿಧಾನಸಭೆಯಲ್ಲಿ ತಂದೆ-ಮಗಳ ಜುಗಲ್ಬಂದಿ, ಇತಿಹಾಸ ಸೃಷ್ಟಿಸಿದ ಸೌಮ್ಯ ರೆಡ್ಡಿ
Recommended Video

ಬೆಂಗಳೂರು, ಜೂನ್ 14: ನಗರದ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಫಲಿತಾಂಶ ಬುಧವಾರ ಹೊರಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಇಲ್ಲಿ ಜಯಶಾಲಿಯಾಗಿ ಹೊಸ ಇತಿಹಾಸ ಬರೆದಿದ್ದಾರೆ.
ಕರ್ನಾಟಕದ ವಿಧಾನಸಭೆಯ ಮಟ್ಟಿಗೆ ಹಲವು ದಾಖಲೆಗಳಿವೆ. ಇಲ್ಲಿ ತಂದೆ-ಮಗ ಏಕಕಾಲಕ್ಕೆ ಸದಸ್ಯರಾಗಿದ್ದಾರೆ. ಈ ಬಾರಿಯೇ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪುತ್ರ ಡಾ. ಯತೀಂದ್ರ ಗೆದ್ದಿದ್ದಾರೆ. ಅಣ್ಣ-ತಮ್ಮ ಸದಸ್ಯರಾಗಿರುವ ಉದಾಹರಣೆಗಳು ಸಾಕಷ್ಟಿವೆ. ಆದರೆ ಇದೇ ಮೊದಲ ಬಾರಿಗೆ ತಂದೆ ಮತ್ತು ಮಗಳು ಇಬ್ಬರೂ ಏಕಕಾಲಕ್ಕೆ ವಿಧಾನಸಭೆ ಪ್ರವೇಶಿಸಿದ್ದಾರೆ.
ತಂದೆ ರಾಮಲಿಂಗಾ ರೆಡ್ಡಿ ಬಿಟಿಎಂ ಲೇಔಟ್ ನಿಂದ ಸ್ಪರ್ಧಿಸಿ ಜಯಶಾಲಿಯಾಗಿ ವಿಧಾನಸಭೆ ಪ್ರವೇಶಿಸಿದ್ದರೆ, ಮಗಳು ಪಕ್ಕದ ಜಯನಗರದಿಂದ ಗೆದ್ದು ವಿಧಾನಸಭೆಗೆ ಎಂಟ್ರಿ ಕೊಟ್ಟಿದ್ದಾರೆ.

ಹಾಗೆ ನೋಡಿದರೆ ಈ ಬಾರಿ ಹಲವು ರಾಜಕಾರಣಿಗಳ ಮಕ್ಕಳು ಸ್ಪರ್ಧೆಯಲ್ಲಿದ್ದರು. ಈ ಹಿನ್ನೆಲೆಯಲ್ಲಿ ವಂಶ ಪಾರಂಪರ್ಯದ ರಾಜಕೀಯದ ವಿರುದ್ಧ ಭಾರೀ ಟೀಕೆಗಳೂ ಕೇಳಿ ಬಂದಿತ್ತು. ಹೀಗಿದ್ದರೂ ತಮ್ಮ ಮಗಳಿಗೆ ರಾಮಲಿಂಗಾ ರೆಡ್ಡಿ ಟಿಕೆಟ್ ಕೊಡಿಸಿದ್ದರು. ಹೆಚ್ಚಿನವರು ಮಕ್ಕಳು ಈ ಬಾರಿಯ ಚುನಾವಣೆಯಲ್ಲಿ ಮುಗ್ಗರಿಸಿದರೂ ರೆಡ್ಡಿ ಮಾತ್ರ ತಮ್ಮ ಮಗಳನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ.
ಬಿಜೆಪಿ ಅಭ್ಯರ್ಥಿ ಬಿ.ಎನ್. ಪ್ರಹ್ಲಾದ್ ವಿರುದ್ಧ ಜಯನಗರದಲ್ಲಿ 54,458 ಮತಗಳನ್ನು ಪಡೆದ ಸೌಮ್ಯ ರೆಡ್ಡಿ, 2889ಮತಗಳ ಅಂತರದಿಂದ ಗೆದ್ದಿದ್ದಾರೆ.
ಈ ಹಿಂದೆ ದೇವರಾಜ್ ಅರಸು ಅವರ ಪುತ್ರಿ ಚಂದ್ರಪ್ರಭಾ ಅರಸು ಇದೇ ರೀತಿ ವಿಧಾನಸಭೆ ಪ್ರವೇಶಿಸಿದ್ದರು. ಆದರೆ ಆಗ ದೇವರಾಜ ಅರಸು ಬದುಕಿರಲಿಲ್ಲ. ಈ ಬಾರಿ ಮಾತ್ರ ಹಾಗಲ್ಲ, ತಂದೆ-ಮಗಳು ಏಕಕಾಲಕ್ಕೆ ವಿಧಾನಸಭೆ ಪ್ರವೇಶಿಸಿ ದಾಖಲೆ ಬರೆದಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications