Byrathi Suresh: ಸಚಿವ ಬೈರತಿ ಸುರೇಶ್ ಫೇಸ್ಬುಕ್ ಖಾತೆಯಿಂದ ಕೆಟ್ಟ ಕೆಟ್ಟ ಕಾಮೆಂಟ್
ರಾಜ್ಯ ಕಾಂಗ್ರೆಸ್ ಸರ್ಕಾರದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಅವಾಚ್ಯವಾಗಿ ನಿಂದಿಸಿ ಕಾಮೆಂಟ್ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಸುರೇಶ್ ಅವರ ಅಧಿಕೃತ ಖಾತೆಯಿಂದಲೇ ಈ ಕಾಮೆಂಟ್ ಬಂದಿದ್ದು, ಈ ಕಾಮೆಂಟ್ ಅನ್ನು ಸುರೇಶ್ ಅವರೇ ಮಾಡಿದ್ದಾರೆ ಎಂದು ಎಲ್ಲರೂ ದೂರಿದ್ದಾರೆ. ಕೆಲವರು ಸಚಿವರಾಗಿ ಇಂತಹ ಕೀಳು ಭಾಷೆ ಬಳಸಿದ್ದೀರಲ್ಲ ಎಂದು ತರಾಟೆ ಕೂಡ ತೆಗೆದುಕೊಂಡಿದ್ದಾರೆ. ಆದರೆ ಕೊನೆಗೆ ತಮ್ಮ ಫೇಸ್ಬುಕ್ ಖಾತೆ ಹ್ಯಾಕ್ ಆಗಿರುವುದಾಗಿ ಸಚಿವ ಬೈರತಿ ಸುರೇಶ್ ಅವರು ಸ್ಪಷ್ಟನೆ ನೀಡಿದ್ದಾರೆ. ಇಷ್ಟಕ್ಕೂ ಆ ಕಾಮೆಂಟ್ ಏನು? ಎಂಬುದರ ವಿವರ ಇಲ್ಲಿದೆ..
ಸಚಿವರಾದ ಕಾರಣ ಬೈರತಿ ಸುರೇಶ್ ಅವರು ತಮ್ಮ ದೈನಂದಿನ ವಿಚಾರಗಳನ್ನು ಫೇಸ್ಬುಕ್ನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಪ್ರತಿದಿನ ಅವರು ಪಾಲ್ಗೊಳ್ಳುವ ಕಾರ್ಯಕ್ರಮಗಳ ಮಾಹಿತಿ ಫೋಟೋ ಹಾಗೂ ವಿಡಿಯೋಗಳನ್ನು ಕೂಡ ಶೇರ್ ಮಾಡಿಕೊಳ್ಳುತ್ತಾರೆ. ಅದರಂತೆ ಉಚಿತ ನೀರು ಪೂರೈಸುವ ನೀರಿನ ಟ್ಯಾಂಕರ್ಗಳಿಗೆ ಚಾಲನೆ ನೀಡಿರುವ ಬಗ್ಗೆ ಸಚಿವ ಬೈರತಿ ಸುರೇಶ್ ಫೇಸ್ಬುಕ್ ಪೋಸ್ಟ್ ಮಾಡಿದ್ದರು. ಆದರೆ ವ್ಯಕ್ತಿಯೊಬ್ಬ ಬೈರತಿ ಸುರೇಶ್ ಹಂಚಿಕೊಂಡಿದ್ದ ಪೋಸ್ಟ್ಗೆ ಕಾಮೆಂಟ್ ಮಾಡಿದ್ದ ಎನ್ನಲಾಗಿದೆ. "ಎಲ್ಲ ನಾಟಕಗಳು, ಜನ ಮೂರ್ಖರು" ಎಂದು ಆ ವ್ಯಕ್ತಿ ಪೋಸ್ಟ್ವೊಂದಕ್ಕೆ ಕಾಮೆಂಟ್ ಮಾಡಿದ್ದ ಎಂದು ತಿಳಿದುಬಂದಿದೆ.

ಇದಕ್ಕೆ ಬೈರತಿ ಸುರೇಶ್ ಅವರ ಅಧಿಕೃತ ಖಾತೆಯಿಂದಲೇ ರಿಪ್ಲೈ ಕೂಡ ಬಂದಿದೆ. ಇದರಲ್ಲಿ ಬೈರತಿ ಅವರು ಅವಾಚ್ಯ ಪದಗಳನ್ನು ಬಳಸಿ ಆತನಿಗೆ ನಿಂದಿಸಿ ಕಾಮೆಂಟ್ ಮಾಡಿದ್ದಾರೆ ಎನ್ನಲಾಗಿದೆ. ಕಾರ್ತಿಕ್ ಎಂಬ ವ್ಯಕ್ತಿಗೆ ಈ ರೀತಿ ಕೆಟ್ಟ ಪದಗಳಿಂದ ಸಚಿವ ಸುರೇಶ್ ನಿಂದಿಸಿದ್ದಾರೆ ಎಂದು ಆರೋಪ ಮಾಡಲಾಗಿತ್ತು. ಅಲ್ಲದೆ ಈ ಸ್ಕ್ರೀನ್ಶಾಟ್ಗಳನ್ನು ಕೂಡ ಹಲವರು ಹಂಚಿಕೊಳ್ಳುವ ಮೂಲಕ ಕಾಮೆಂಟ್ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದರು.
ಇನ್ನು ಆ ಕಾಮೆಂಟ್ ಅನ್ನು ಬೈರತಿ ಸುರೇಶ್ ಅವರೇ ಮಾಡಿದ್ದಾರೆ ಎಂದುಕೊಂಡಿದ್ದ ಕಾರ್ತಿಕ್ ಕೂಡ ಮತ್ತೆ ಅದಕ್ಕೆ ರಿಪ್ಲೈ ಮಾಡಿದ್ದಾನೆ. "ಮೊದಲು ಹೆತ್ತ ತಾಯಿಗೆ ಗೌರವ ಕೊಡೋದು ಕಲಿ, ನೀನೆಲ್ಲ ಒಬ್ಬ ಜನಪ್ರತಿನಿಧಿ ಅಂತೆ, ಕೆಟ್ಟ ಪದಗಳನ್ನು ಬಳಕೆ ಮಾಡುವ ನಿಗಗೆ ನಾಚಿಕೆ ಆಗ್ಬೇಕು, ನಾನು ಸರಿಯಾಗಿಯೇ ಹೇಳಿದ್ದೀನಿ. ನಿನ್ನಂತವರನ್ನು ಆರಿಸಿದ ಜನರು ಮೂರ್ಖರು. ಜನಸಾಮಾನ್ಯರ ಹತ್ತಿರ ಹೇಗೆ ನಡೆದುಕೊಳ್ಳಬೇಕು ಎನ್ನುವ ಸಾಮಾನ್ಯ ಜ್ಞಾನ ಇಲ್ಲ" ಎಂದು ಕಾಮೆಂಟ್ ಮಾಡಿದ್ದಾನೆ.

ಸೋಶಿಯಲ್ ಮೀಡಿಯಾದಲ್ಲಿ ಈ ಎರಡೂ ಕಾಮೆಂಟ್ಗಳ ಸ್ಕ್ರೀನ್ ಶಾಟ್ಗಳು ಹರಿದಾಡಿದ್ದು, ಇದರ ಬೆನ್ನಲ್ಲೇ ಅವರು ಡಿಲೀಟ್ ಕೂಡ ಮಾಡಿದ್ದಾರೆ ಎನ್ನಲಾಗಿದೆ. ಕೊನೆಗೆ ಬೈರತಿ ಸುರೇಶ್ ಅವರು ಈ ಬಗ್ಗೆ ಮತ್ತೆ ತಮ್ಮ ಫೇಸ್ಬುಕ್ ಖಾತೆ ಮೂಲಕ ಪೋಸ್ಟ್ ಮಾಡಿ ಸ್ಪಷ್ಟನೆಯೂ ನೀಡಿದ್ದಾರೆ. "ನನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿದೆ. ಯಾವುದೇ ರೀತಿಯ ಮೆಸೇಜ್ಗಳಿಗೆ ಯಾರೂ ಕೂಡ ಅನ್ಯತಾ ಭಾವಿಸಬೇಡಿ" ಎಂದು ಪೋಸ್ಟ್ ಮೂಲಕ ಹೇಳಿದ್ದಾರೆ. ಈ ಕಾಮೆಂಟ್ಗೂ ಹಲವರು ರಿಪ್ಲೈ ಮಾಡಿದ್ದು, ಸಚಿವರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications