ಸಮೀಕ್ಷೆ: ಸಿದ್ದರಾಮಯ್ಯ ಅವರ ಕೈ ಹಿಡಿದ ಅನ್ನಭಾಗ್ಯ ಯೋಜನೆ
ಬೆಂಗಳೂರು, ಆಗಸ್ಟ್ 21: ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಿ ಫೋರ್ ಸಂಸ್ಥೆ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆ ವರದಿ ನೀಡಿದೆ. ಇದರ ಜತೆಗೆ ಸರ್ಕಾರದ ಯೋಜನೆಗಳು ಹಾಗೂ ಸಮಸ್ಯೆಗಳ ಬಗ್ಗೆ ಕೂಡಾ ಅಭಿಪ್ರಾಯ ಸಂಗ್ರಹಿಸಲಾಗಿದೆ.
ಈ ವರದಿಯಂತೆ ಸರ್ಕಾರದ ಜನಪ್ರಿಯ ಯೋಜನೆಗಳ ಪೈಕಿ ಅನ್ನಭಾಗ್ಯಕ್ಕೆ ಜನತೆ ಹೆಚ್ಚಿನ ಅಂಕಗಳನ್ನು ನೀಡಿದ್ದಾರೆ. ಎಲ್ಲ ಜಿಲ್ಲೆಗಳಿಂದ ಆಯ್ದ 165 ವಿಧಾನಸಭಾ ಕ್ಷೇತ್ರಗಳ 24,679 ಮತದಾರರನ್ನು ಸಂದರ್ಶಿಸಿ ಈ ಸಮೀಕ್ಷೆಯ ವರದಿಯನ್ನು ತಯಾರಿಸಲಾಗಿದೆ.
ಸಮೀಕ್ಷೆ: ಕರ್ನಾಟಕದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಯಾರು?
ಈ ಪೈಕಿ 340 ನಗರ ಹಾಗೂ 550 ಗ್ರಾಮೀಣ ಪ್ರದೇಶಗಳ ವಿವಿಧ ಧರ್ಮ, ಜಾತಿಯ ಜನರನ್ನು ಮಾತನಾಡಿಸಿ, ವಿವಿಧ ವಿಭಾಗಗಳಲ್ಲಿ ಜನರ ಬೇಡಿಕೆಗಳೇನು? ಸರ್ಕಾರದ ಸಾಧನೆಗಳೇನು? ಮುಂದಿನ ಮುಖ್ಯಮಂತ್ರಿ ಯಾರಾಗಬೇಕು? ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲಾಗಿದೆ.
ಸಿ ಫೋರ್ ಸಮೀಕ್ಷೆ : ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೆ ಬಹುಮತ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಅನ್ನಭಾಗ್ಯ ಯೋಜನೆಗೆ 4 ಸಾವಿರ ಕೋಟಿ ರು ವೆಚ್ಚ ಮಾಡಲಾಗಿದೆ. ಬಿಪಿಎಲ್ ಕಾರ್ಡ್ ದಾರ ಕುಟುಂಬದ ಒಬ್ಬರಿಗೆ 7 ಕೆ.ಜಿಯಂತೆ ಒಂದು ರುಪಾಯಿದರದಲ್ಲಿ ಪಡಿತರ ಅಕ್ಕಿ ವಿತರಿಸಲಾಗುತ್ತಿದೆ. ಇದರ ಜತೆಗೆ ಉಪ್ಪು, ತಾಳೆ ಎಣ್ಣೆ ಸಬ್ಸಿಡಿ ದರದಲ್ಲಿ ಲಭ್ಯದಲ್ಲಿ ಪೂರೈಸಲಾಗುತ್ತಿದೆ.
ಶ್ರೇಯಾಂಕ
ಪಟ್ಟಿ
ಹೀಗಿದೆ:
ಅನ್ನಭಾಗ್ಯ
:
ಶೇ79
ಮಧ್ಯಾಹ್ನದ
ಬಿಸಿಯೂಟ:
ಶೇ38
ವಿದ್ಯಾಸಿರಿ:
ಶೇ26
ಕ್ಷೀರಭಾಗ್ಯ:
ಶೇ16
ಕೃಷಿಭಾಗ್ಯ:
ಶೇ
11
ಇದೇ ರೀತಿ ಈ ಸರ್ಕಾರದ ಆಡಳಿತ ಅವಧಿಯಲ್ಲಿ ಸಾರ್ವಜನಿಕರು ಅನುಭವಿಸಿದ ಸಮಸ್ಯೆಗಳ ಪಟ್ಟಿಯಲ್ಲಿ ಅಗ್ರಸ್ಥಾನದಿಂದ ಕೊನೆ ಸ್ಥಾನದವರೆಗಿನ ಪಟ್ಟಿ
ಸಿ ವೋಟರ್ ಸಮೀಕ್ಷೆ: ಬರೀ ಬೊಗಳೆ ಎಂದ ಓದುಗರು!
ಕುಡಿಯುವ
ನೀರಿನ
ಕೊರತೆ:
ಶೇ
37
ಹದಗೆಟ್ಟ
ರಸ್ತೆ:
ಶೇ
26
ಕಸ
ವಿಂಗಡಣೆ
ಹಾಗೂ
ಸಂಸ್ಕರಣೆ:
ಶೇ
15
ನಿರುದ್ಯೋಗ
:
ಶೇ
11
ವಿದ್ಯುತ್
ವ್ಯತ್ಯಯ
:
ಶೇ
11
ನೀರಾವರಿ
ಯೋಜನೆ
ಕೊರತೆ
:
ಶೇ
11
ಮಿಕ್ಕಂತೆ ಭ್ರಷ್ಟಾಚಾರ, ಕಾನೂನು ಮತ್ತು ಸುವ್ಯವಸ್ಥೆ, ಬೆಲೆ ಏರಿಕೆ, ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಬಗ್ಗೆ ಯಾವುದೇ ಸಮಸ್ಯೆ ಇಲ್ಲ ಎಂದು ಜನತೆ ಉತ್ತರಿಸಿದ್ದಾರೆ.