Government Employees: ಸರ್ಕಾರಿ ನೌಕರರ ವೇತನದ ಆದಾಯ ಪರಿಗಣಿಸಬೇಡಿ: ಸರ್ಕಾರಕ್ಕೆ ಸಿ.ಎಸ್ .ಷಡಾಕ್ಷರಿ ಪತ್ರ
ಬೆಂಗಳೂರು, ಡಿಸೆಂಬರ್ 13: ಹಿಂದುಳಿದ ವರ್ಗಗಳ ಮೀಸಲಾತಿ ಸಂಬಂಧ ಕೆನೆಪದರ ವಾರ್ಷಿಕ ಆದಾಯ ಮಿತಿಯನ್ನು ರೂ. 8.00 ಲಕ್ಷಗಳಿಂದ ರೂ. 15.00 ಲಕ್ಷಗಳಿಗೆ ಹೆಚ್ಚಿಸುವುದು ಹಾಗೂ ಸರ್ಕಾರಿ ನೌಕರರ ಮಕ್ಕಳ ಉನ್ನತ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಓ.ಬಿ.ಸಿ. ಮೀಸಲಾತಿ ಪ್ರಮಾಣ ಪತ್ರ ನೀಡುವಾಗ ವೇತನದ ಆದಾಯವನ್ನು ಪರಿಗಣಿಸದಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ .ಷಡಾಕ್ಷರಿ ಅವರು ಪತ್ರ ಬರೆದಿದ್ದಾರೆ.
ಉದ್ಯೋಗ ಮತ್ತು ಶಿಕ್ಷಣ ಮೀಸಲಾತಿಗೆ ಸರ್ಕಾರಿ ನೌಕರರ ಒಟ್ಟು ವಾರ್ಷಿಕ ಆದಾಯದ ಲೆಕ್ಕಾಚಾರದಲ್ಲಿ ವೇತನದ ಆದಾಯವನ್ನು ಪರಿಗಣಿಸುತ್ತಿರುವುದರಿಂದ ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಅಧಿಕಾರಿ, ನೌಕರರ ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಒಬಿಸಿ ಆದಾಯ ಕೆನೆಪದರ ಮಿತಿಯನ್ನು 8 ಲಕ್ಷದಿಂದ 15 ಲಕ್ಷ ರೂ.ಗೆ ಹೆಚ್ಚಿಸಬೇಕು ಎಂದು ಸರ್ಕಾರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ .ಷಡಾಕ್ಷರಿ ಕೋರಿದ್ದಾರೆ.

ಸಾಮಾಜಿಕವಾಗಿ ಮುಂದುವರಿದ ವ್ಯಕ್ತಿಗಳು ಹಾಗೂ ವರ್ಗಗಳನ್ನು (ಕೆನೆಪದರ) ಹಿಂದುಳಿದ ವರ್ಗಗಳ ಮೀಸಲಾತಿಯಿಂದ ಹೊರತುಪಡಿಸಲು ಸರ್ಕಾರದ ಆದೇಶದನ್ವಯ ಕೆನೆಪದರ ನೀತಿಯ ವಾರ್ಷಿಕ ಆದಾಯದ ಮಿತಿಯನ್ನು 8 ಲಕ್ಷ ರೂ. ನಿಗದಿಪಡಿಸಿದೆ.
ರಾಜ್ಯ 7ನೇ ವೇತನ ಆಯೋಗದ ಶಿಫಾರಸ್ಸುಗಳ ಅನುಷ್ಠಾನದಿಂದಾಗಿ ಸರ್ಕಾರಿ ನೌಕರರ ವಾರ್ಷಿಕ ಆದಾಯ ಮಿತಿ ಹೆಚ್ಚಾಗಿರುವುದರಿಂದ, ರಾಜ್ಯ ಸರ್ಕಾರಿ ನೌಕರರು ತಮ್ಮ ಮಕ್ಕಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಕೆನೆಪದರ ನೀತಿಗೆ ಅನುಗುಣವಾಗಿ ಮೀಸಲಾತಿಯನ್ನು ಪಡೆಯಲು ಅನರ್ಹರಾಗುತ್ತಿರುವುದರಿಂದ ಕೆನೆಪದರ ಮಿತಿಯನ್ನು ಪರಿಷ್ಕರಿಸಿ ವಾರ್ಷಿಕ ಆದಾಯ ಮಿತಿಯನ್ನು 8 ಲಕ್ಷದಿಂದ 15 ಲಕ್ಷ ರೂ.ಗೆ ಹೆಚ್ಚಿಸಲು ಮನವಿ ಮಾಡಲಾಗಿತ್ತು.
ಭಾರತ ಸರ್ಕಾರವು ಹಿಂದುಳಿದ ವರ್ಗಗಳಿಗೆ ಕೆನೆಪದರ ನೀತಿಯನ್ನು ಅಳವಡಿಸುವ ಸಂಬಂಧ ಮಾರ್ಗಸೂಚಿ ಹೊರಡಿಸಿದ್ದು, ಆ ಮಾರ್ಗಸೂಚಿಯಂತೆ ರಾಷ್ಟ್ರದ ಬಹುತೇಕೆ ಎಲ್ಲಾ ರಾಜ್ಯಗಳು ಈಗಾಗಲೇ ಕೇಂದ್ರದ ಮಾರ್ಗಸೂಚಿಯಲ್ಲಿನ ನಿಯಮಗಳಿಗೆ ಯಾವುದೇ ಬದಲಾವಣೆ ಮಾಡಿಕೊಳ್ಳದೇ, ಯಥಾಸ್ಥಿತಿಯನ್ನು ಕಾಯ್ದುಕೊಂಡು ಕೇಂದ್ರ ಸರ್ಕಾರದ ಅಧೀನ ಇಲಾಖೆಗಳು ಹಾಗೂ ಆಯಾ ರಾಜ್ಯಗಳ ಅಧೀನ ಇಲಾಖೆಗಳ ಶಿಕ್ಷಣ ಮತ್ತು ಉದ್ಯೋಗಕ್ಕೆ ಸರ್ಕಾರಿ ನೌಕರರ ವೇತನವನ್ನು ಕುಟುಂಬ ಆದಾಯಕ್ಕೆ ಪರಿಗಣಿಸದೆ ಮೀಸಲಾತಿ ಪ್ರಮಾಣ ಪತ್ರಗಳನ್ನು ನೀಡುತ್ತಿವೆ ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರವು ತನ್ನ ಅಧೀನ ಸಂಸ್ಥೆಗಳಲ್ಲಿ ಶೈಕ್ಷಣಿಕ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಕೆನೆಪದರ ಮೀಸಲಾತಿಗೆ ಸಂಬಂಧಿಸಿದಂತೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡುವಾಗ ಸರ್ಕಾರಿ ನೌಕರರ ವೇತನ ಆದಾಯವನ್ನು ಪರಿಗಣಿಸಿ, ಕುಟುಂಬದ ಒಟ್ಟು ವಾರ್ಷಿಕ ಆದಾಯಕ್ಕೆ ಸೇರಿಸಿ ಸಂಪತ್ತಿನ ಲೆಕ್ಕಚಾರ ಮಾಡಿ ರೂ. 8 ಲಕ್ಷಕ್ಕೂ ಹೆಚ್ಚಿನ ಆದಾಯವಿರುವವರಿಗೆ ಮೀಸಲಾತಿ ನಮೂನೆ-ಎಫ್ ಪ್ರಮಾಣ ಪತ್ರವನ್ನು ನೀಡುತ್ತಿಲ್ಲ. ಕೇಂದ್ರ ಸರ್ಕಾರದ ಅಧೀನ ಇಲಾಖೆಗಳ ಶಿಕ್ಷಣ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ರಾಜ್ಯದ ಕೆಲವು ತಾಲ್ಲೂಕು ಕಚೇರಿಯಿಂದ ನಮೂನೆ-ಎಫ್ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತಿದೆ.
ಕರ್ನಾಟಕ ರಾಜ್ಯ ಸರ್ಕಾರದ ಅಧೀನ ಇಲಾಖೆಗಳಿಗೆ ಉದ್ಯೋಗ ಮತ್ತು ಶಿಕ್ಷಣಕ್ಕೆ ನೌಕರರು ಒಟ್ಟು ವಾರ್ಷಿಕ ಆದಾಯದ ಲೆಕ್ಕಾಚಾರದಲ್ಲಿ ಮಾತ್ರ ವೇತನದ ಆದಾಯವನ್ನು ಪರಿಗಣಿಸುತ್ತಿರುವುದರಿಂದ ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಅಧಿಕಾರಿ, ನೌಕರರ ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರು, ಕುಟುಂಬ ವರ್ಗದವರು ಮತ್ತು ಮಕ್ಕಳು ಶೈಕ್ಷಣಿಕ ಹಾಗೂ ಉದ್ಯೋಗ ಮತ್ತಿತರ ಮೀಸಲಾತಿ ಅವಕಾಶಗಳಿಂದ ವಂಚಿತರಾಗುತ್ತಿರುವುದಾಗಿ ರಾಜ್ಯ ಸರ್ಕಾರಿ ನೌಕರರು ಮತ್ತು ವಿವಿಧ ವೃಂದ ಸಂಘಗಳಿಂದ ರಾಜ್ಯ ಸಂಘಕ್ಕೆ ಮನವಿಗಳು ಸಲ್ಲಿಕೆಯಾಗಿರುತ್ತವೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ?












Click it and Unblock the Notifications