C-Voter's Pre-Poll Survey: ಕರ್ನಾಟಕದಲ್ಲಿ ಮೈತ್ರಿ ಬಿಜೆಪಿ-ಜೆಡಿಎಸ್ಗೆ ಒಲಿದ ಅದೃಷ್ಟ? ಹಾಗಾದ್ರೆ ಕಾಂಗ್ರೆಸ್ ಎಷ್ಟು ಸ್ಥಾನ?
ಬೆಂಗಳೂರು, ಏಪ್ರಿಲ್ 16: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಸಮರ ಜೋರಾಗಿದೆ. ತೀವ್ರ ಪೈಪೋಟಿ ಕೊಡಲು ರಾಜಕೀಯ ಪಕ್ಷಗಳು ಸಜ್ಜಾಗಿವೆ. ಇತ್ತ ಚುನಾವಣೆ ಪೂರ್ವ ಸಿ-ವೋಟರ್ಸ್ ಸಮೀಕ್ಷೆ ಹೊರ ಬಿದ್ದಿದೆ. ಹಾಗಾದರೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಎಷ್ಟು ಸ್ಥಾನಗಳು ಮತ್ತು ಆಡಳಿತ ಪಕ್ಷ ಕಾಂಗ್ರೆಸ್ ಗೆ ಎಷ್ಟು ಸ್ಥಾನಗಳು ಸಿಗಲಿವೆ? ಎಂಬ ಮಾಹಿತಿ ಇಲ್ಲಿದೆ.
ಸಿ-ವೋಟರ್ಸ್ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ, ಈ ಭಾರಿ ಮತ್ತೊಮ್ಮೆ ಕಮಲ ಪಡೆಗೆ ಅದೃಷ್ಟ ಒಲಿದಿದೆ. ವಿಧಾನಸಭೆ ಚುನಾವನೆಯಲ್ಲಿ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಒಂದೆರಡು ಸ್ಥಾನಗಳು ಹೆಚ್ಚು ಸಿಗುವ ಸಾಧ್ಯತೆ ದಟ್ಟವಾಗಿದೆ. ಇನ್ನೂ ಜೆಡಿಎಸ್ ಕಡಿಮೆ ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ.

ಸಿ-ವೋಟರ್ಸ್ ಸಮೀಕ್ಷೆ ಪ್ರಕಾರ, ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 21 ಸ್ಥಾನಗಳು ಬಂದರೆ, ಮೈತ್ರಿಕೂಟದ ಪಾಲುದಾರ ಪಕ್ಷ ಜೆಡಿಎಸ್ಗೆ 2 ಹಾಗೂ ಆಡಳಿತ ಪಕ್ಷ ಕಾಂಗ್ರೆಸ್ಗೆ 5 ಸ್ಥಾನಗಳು ಬರಲಿವೆ ಎಂದು ಭವಿಷ್ಯ ನುಡಿದಿದೆ.
ಕರ್ನಾಟಕದಲ್ಲಿ ಮೋದಿ ಅಲೆ ಸಾಬೀತು
ಸದರಿ ಈ ಸಮಿಕ್ಷೆಯನ್ನು ಕರ್ನಾಟಕ ಬಿಜೆಪಿ ನಾಯಕರು ಸ್ವಾಗಿತಸಿದ್ದರೆ, ಕಾಂಗ್ರೆಸ್ ನಾಯಕರು ಈ ಸಮೀಕ್ಷೆಯನ್ನು ಒಪ್ಪದೇ ತಿರಸ್ಕರಿಸಿದ್ದಾರೆ. ಈ ಸಮೀಕ್ಷೆ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಲೆ ಇದೆ ಎಂಬುದನ್ನು ಈ ಸಮೀಕ್ಷೆ ಸಾಬೀತುಪಡಿಸಿದೆ.
ಈ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿಯು ಕರ್ನಾಟಕದಲ್ಲಿ ನಮ್ಮ ಬಲವನ್ನು ಹೆಚ್ಚಿಸಿದೆ. ಈ ಮೂಲಕ ಕರ್ನಾಟಕದ 28 ಲೋಕಸಭಾ ಸ್ಥಾನಗಳಲ್ಲಿ ಅತ್ಯಧಿಕ ಸ್ಥಾನ ಮೈತ್ರಿ ಪಕ್ಷಗಳು ಗಳಿಸಲಿವೆ ಎಂದು ಬಿಜೆಪಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.

ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್ ಹಿರಿಯ ನಾಯಕರು ಬಿ.ಕೆ.ಹರಿಪ್ರಸಾದ್ ಅವರು, ಚುನಾವಣೆ ಪೂರ್ವ ಸಮೀಕ್ಷೆಗಳ ಬಗ್ಗೆ ನಾವು ಜಾಗರೂಕರಾಗಿರಬೇಕು. ಅನೇಕ ಸಂದರ್ಭಗಳಲ್ಲಿ ಅವರು ತಮ್ಮನ್ನು ನೇಮಿಸಿಕೊಳ್ಳುವ ಏಜೆನ್ಸಿಗೆ ಒಲವು ತೋರುತ್ತಾರೆ ಎಂದು ಮಾರ್ಮಿಕವಾಗಿ ಸಮೀಕ್ಷೆಗೆ ಪ್ರತಿಕ್ರಿಯಿಸಿದ್ದಾರೆ.
ಸಮೀಕ್ಷೆ ವಿಶ್ಲೇಷಿಸಿ ಸಲೀಂ ಅಹಮದ್?
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಈ ಸಮೀಕ್ಷೆಯನ್ನು ನಾವು ನಂಬುವುದಿಲ್ಲ. ಕಳೆದ 2023ರಲ್ಲಿ ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆ ವೇಳೆ ಸಿವೋಟರ್ ಸಮೀಕ್ಷೆಯ ಪ್ರಕಾರ ಬಿಜೆಪಿಗೆ 83-95 ಸ್ಥಾನ ಸಿಲಿವೆ ಎಂದು ಹೇಳಿತ್ತು. ಆದರೆ ಬಿಜೆಪಿಗೆ ಸಮೀಕ್ಷೆಯಂತೆ ಅಷ್ಟು ಸ್ಥಾನ ಬರಲಿಲ್ಲ. ಬಂದದ್ದು ಕೇವಲ 66 ಸ್ಥಾನಗಳು ಎಂದು ತಿಳಿಸಿದರು.
ಇದೇ ಸಿವೋಟರ್ ಸಮೀಕ್ಷೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ 110-112 ಸೀಟುಗಳು ಬರಬಹುದು ಎಂದು ಹೇಳಲಾಗಿತ್ತು. ಆದರೆ ಅದನ್ನು ಮೀರಿ ನಾವು 135 ಸ್ಥಾನ ಪಡೆದುಕೊಂಡೆವು. ಹೀಗಾಗಿ ಈ ಭವಿಷ್ಯ ಕಳೆದ ಬಾರಿ ನಿಜವಾಗಿಲ್ಲ. ಈ ಬಾರಿಯು ಹೇಗೆ ನಂಬುವುದು? ಈ ಬಾರಿ ಈ ಭವಿಷ್ಯ ಸುಳ್ಳಾಗಲಿದೆ ಎಂದ ಅವರು, ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲೂ ಅತ್ಯಧಿಕ 20 ಸ್ಥಾನ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications